• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

3 ಬಂಧಿತ ಶಂಕಿತ ಐಸಿಸ್ ಉಗ್ರರು ಇಂಜಿನಿಯರ್ಸ್!

Tulunadu News Posted On October 4, 2023
0


0
Shares
  • Share On Facebook
  • Tweet It

ರಾಷ್ಟ್ರೀಯ ತನಿಖಾ ದಳ ಇತ್ತೀಚೆಗೆ ಬಂಧಿಸಿರುವ ಮೂರು ಜನ ಶಂಕಿತ ಐಸಿಸ್ ಉಗ್ರರ ಜಾತಕವನ್ನು ಬಯಲಿಗೆಳೆದಾಗ ಆಶ್ಚರ್ಯಕರ ಮಾಹಿತಿಯೊಂದು ಹೊರಗೆ ಬಂದಿದೆ. ಬಂಧಿತ ಮೂವರಲ್ಲಿ ಶಹನವಾಜ್ ಗಣಿ ಇಂಜಿನಿಯರ್ ಆಗಿದ್ದು, ನ್ಯಾಶನಲ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಬಿಟೆಕ್ ಪದವಿಯನ್ನು ಪಡೆದಿದ್ದಾನೆ. ಇನ್ನು ಅರ್ಷದ್ ಎನ್ನುವ ಶಂಕಿತ ಉಗ್ರ ಆಲಿಘರ್ ಮುಸ್ಲಿಂ ವಿಶ್ವವಿದ್ಯಾನಿಲಯದಿಂದ ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಬಿಟೆಕ್ ಪದವಿಯನ್ನು ಹೊಂದಿದ್ದಾನೆ. ಅದನ್ನು ಕಲಿತ ಬಳಿಕ ಎಂಬಿಎ ಮತ್ತು ಪಿಎಚ್ ಡಿ ಪದವಿಯನ್ನು ಜಮೀಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದಿಂದ ಗಳಿಸಿದ್ದಾನೆ. ಮತ್ತೊಬ್ಬ ಶಂಕಿತ ಉಗ್ರ ರಿಜ್ವಾನ್ ಮಾಹಿತಿ ತಂತ್ರಜ್ಞಾನದಲ್ಲಿ ಬಿಟೆಕ್ ಪದವಿಯನ್ನು ಗಳಿಸಿದ್ದಾನೆ.

ವಿದ್ಯೆ ವಿನಯವನ್ನು ನೀಡುತ್ತದೆ ಎಂದು ಪ್ರಾಜ್ಞರು ಹೇಳುತ್ತಾರೆ. ಆದರೆ ಇಲ್ಲಿ ವಿದ್ಯೆ ದೇಶದ್ರೋಹ ಕೃತ್ಯಕ್ಕೆ ಬಳಕೆಯಾಗುವುದನ್ನು ಕಂಡಾಗ ಇಂತವರು ಕಲಿಯುವುದೇ ಬೇರೆ ದೇಶದಲ್ಲಿ ವಿಧ್ವಂಸಕ ಕೃತ್ಯ ಮಾಡುವುದಕ್ಕೆ ಎನ್ನುವುದಕ್ಕೆ ಸಾಬೀತಾಗುತ್ತಿದೆ. ಇಲ್ಲಿಯ ತನಕ ಬಂಧಿತರಾಗಿರುವ ಬಹುತೇಕ ಉಗ್ರರು ಉತ್ತಮ ಶೈಕ್ಷಣಿಕ ಹಿನ್ನಲೆಯನ್ನು ಹೊಂದಿದ್ದಾರೆ. ಕೆಲವರು ಈ ದೇಶದ ಪ್ರಖ್ಯಾತ ಕಂಪೆನಿಗಳಲ್ಲಿ ಉನ್ನತ ಉದ್ಯೋಗವನ್ನು ಕೂಡ ಮಾಡುತ್ತಾ ಇರುತ್ತಾರೆ. ಇತ್ತೀಚೆಗೆ ಮಹಾರಾಷ್ಟ್ರದ ಖ್ಯಾತ ಆಸ್ಪತ್ರೆಯಲ್ಲಿ ವಿಭಾಗದ ಮುಖ್ಯಸ್ಥರಾಗಿದ್ದ ವೈದ್ಯರಿಗೂ ಐಸಿಸ್ ಲಿಂಕ್ ಇರುವುದು ಪತ್ತೆಯಾಗಿತ್ತು. ಕೆಲವರು ಹೊರನೋಟಕ್ಕೆ ವೈಟ್ ಕಾಲರ್ ಕೆಲಸವನ್ನು ಮಾಡುತ್ತಾ ಒಳಗೊಳಗೆ ಸ್ಲೀಪರ್ ಸೆಲ್ ಗಳಾಗಿ ಕೆಲಸ ಮಾಡುತ್ತಾ ಇರುತ್ತಾರೆ. ಎಲ್ಲೋ ಒಂದು ಸಣ್ಣ ಕ್ಲೂ ಹಿಡಿದು ತನಿಖಾ ಸಂಸ್ಥೆಗಳು ಇವರ ಕದ ತಟ್ಟಿದಾಗ ಇವರ ಬಂಡವಾಳ ಬಯಲಿಗೆ ಬರುತ್ತದೆ

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search