• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಡುಪಿಯಲ್ಲಿ ಶೌರ್ಯ ಜಾಗರಣಾ ರಥಯಾತ್ರೆ ಕಟೌಟ್ ತೆರವು!

Tulunadu News Posted On October 5, 2023
0


0
Shares
  • Share On Facebook
  • Tweet It

ಶಿವಮೊಗ್ಗದ ಈದ್ ಮಿಲಾದ್ ಮೆರವಣಿಗೆಯಲ್ಲಿ ನಡೆದ ಗಲಭೆಗೆ ಔರಂಗಜೇಬ್ ಕಟೌಟ್, ಟಿಪ್ಪುವಿನ ಪತಾಕೆ ಸಹಿತ ಫ್ಲೆಕ್ಸ್, ಬ್ಯಾನರ್ ಗಳೇ ಕಾರಣ ಎನ್ನುವ ಅಭಿಪ್ರಾಯ ಬಂದ ಹಿನ್ನಲೆಯಲ್ಲಿ ರಾಜ್ಯ ಸರಕಾರ ಎಲ್ಲಾ ಜಿಲ್ಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ. ಮತೀಯ ಭಾವನೆಗಳಿಗೆ ದಕ್ಕೆ ತರುವ ಬ್ಯಾನರ್ಸ್, ಬಂಟಿಂಗ್ಸ್, ಕಟೌಟ್ ಗಳನ್ನು ತೆರವು ಮಾಡಲು ಸೂಚಿಸಿದೆ. ಈ ಸೂಚನೆಯಂತೆ ಅಕ್ಟೋಬರ್ 10 ರಂದು ಹಿಂದೂ ಸಮಾಜೋತ್ಸವ ನಡೆಯಲಿರುವ ಉಡುಪಿಯ ಎಂಜಿಎಂ ಮೈದಾನ ಮತ್ತು ಸುತ್ತಮುತ್ತ ಅನಧಿಕೃತ ನಿಯಮಬಾಹಿರ ಕಟೌಟ್ ಗಳನ್ನು ತೆರವು ಮಾಡಲು ಎಸ್ ಪಿ ಡಾ. ಅರುಣ್ ಕೆ ಅವರು ಆದೇಶಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್, ಭಜರಂಗದಳ, ಭಾರತೀಯ ಜನತಾ ಪಾರ್ಟಿ ಮತ್ತು ಸಂಘ ಪರಿವಾರದ ಮುಖಂಡರು ನಗರದಲ್ಲಿ 30 ಕ್ಕೂ ಹೆಚ್ಚಿನ ಕಟೌಟ್ ಗಳನ್ನು ಅಳವಡಿಸಿದ್ದು, ಯಾವುದೇ ಮುನ್ಸೂಚನೆ ನೀಡದೆ ಉಡುಪಿ ನಗರಸಭೆ ಕಟೌಟ್ ಗಳನ್ನು ತೆರವು ಮಾಡಿದೆ. ಇದು ಆಯೋಜಕರ ಅಸಮಾಧಾನಕ್ಕೆ ಕಾರಣವಾಗಿದೆ. ವಿಶ್ವ ಹಿಂದೂ ಪರಿಷತ್, ಭಜರಂಗದಳ ಮುಖಂಡರು, ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರೊಂದಿಗೆ ಮಾತನಾಡಿದ್ದಾರೆ. ಈ ಕುರಿತು ಮಾತನಾಡಿದ ಯಶಪಾಲ್ ಸುವರ್ಣ ” ಸಿದ್ಧರಾಮಯ್ಯ ಸರಕಾರ ನಡೆಸಿರುವ ಹುನ್ನಾರ ಇದು. ಇಬ್ಬಗೆ ನೀತಿಯನ್ನು ಸರಕಾರ ಪ್ರದರ್ಶಿಸುತ್ತಿದೆ” ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಉಡುಪಿ ನಗರಸಭೆ ಪೌರಾಯುಕ್ತ ರಾಯಪ್ಪ ” ಶಿವಮೊಗ್ಗ ಘಟನೆ ನಂತರ ಕಠಿಣ ನಿಯಮಗಳನ್ನು ಜಾರಿಗೆ ತರಲು ಸರಕಾರದಿಂದ ಮೌಖಿಕ ಸೂಚನೆ ಬಂದಿದೆ. ನಗರಸಭೆಗೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಅಧಿಕಾರಿಗಳು ಆದೇಶವನ್ನು ಪಾಲಿಸಿದ್ದಾರೆ” ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search