• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಡುಪಿಯಲ್ಲಿ ಶೌರ್ಯ ಜಾಗರಣಾ ರಥಯಾತ್ರೆ ಕಟೌಟ್ ತೆರವು!

Tulunadu News Posted On October 5, 2023
0


0
Shares
  • Share On Facebook
  • Tweet It

ಶಿವಮೊಗ್ಗದ ಈದ್ ಮಿಲಾದ್ ಮೆರವಣಿಗೆಯಲ್ಲಿ ನಡೆದ ಗಲಭೆಗೆ ಔರಂಗಜೇಬ್ ಕಟೌಟ್, ಟಿಪ್ಪುವಿನ ಪತಾಕೆ ಸಹಿತ ಫ್ಲೆಕ್ಸ್, ಬ್ಯಾನರ್ ಗಳೇ ಕಾರಣ ಎನ್ನುವ ಅಭಿಪ್ರಾಯ ಬಂದ ಹಿನ್ನಲೆಯಲ್ಲಿ ರಾಜ್ಯ ಸರಕಾರ ಎಲ್ಲಾ ಜಿಲ್ಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ. ಮತೀಯ ಭಾವನೆಗಳಿಗೆ ದಕ್ಕೆ ತರುವ ಬ್ಯಾನರ್ಸ್, ಬಂಟಿಂಗ್ಸ್, ಕಟೌಟ್ ಗಳನ್ನು ತೆರವು ಮಾಡಲು ಸೂಚಿಸಿದೆ. ಈ ಸೂಚನೆಯಂತೆ ಅಕ್ಟೋಬರ್ 10 ರಂದು ಹಿಂದೂ ಸಮಾಜೋತ್ಸವ ನಡೆಯಲಿರುವ ಉಡುಪಿಯ ಎಂಜಿಎಂ ಮೈದಾನ ಮತ್ತು ಸುತ್ತಮುತ್ತ ಅನಧಿಕೃತ ನಿಯಮಬಾಹಿರ ಕಟೌಟ್ ಗಳನ್ನು ತೆರವು ಮಾಡಲು ಎಸ್ ಪಿ ಡಾ. ಅರುಣ್ ಕೆ ಅವರು ಆದೇಶಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್, ಭಜರಂಗದಳ, ಭಾರತೀಯ ಜನತಾ ಪಾರ್ಟಿ ಮತ್ತು ಸಂಘ ಪರಿವಾರದ ಮುಖಂಡರು ನಗರದಲ್ಲಿ 30 ಕ್ಕೂ ಹೆಚ್ಚಿನ ಕಟೌಟ್ ಗಳನ್ನು ಅಳವಡಿಸಿದ್ದು, ಯಾವುದೇ ಮುನ್ಸೂಚನೆ ನೀಡದೆ ಉಡುಪಿ ನಗರಸಭೆ ಕಟೌಟ್ ಗಳನ್ನು ತೆರವು ಮಾಡಿದೆ. ಇದು ಆಯೋಜಕರ ಅಸಮಾಧಾನಕ್ಕೆ ಕಾರಣವಾಗಿದೆ. ವಿಶ್ವ ಹಿಂದೂ ಪರಿಷತ್, ಭಜರಂಗದಳ ಮುಖಂಡರು, ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರೊಂದಿಗೆ ಮಾತನಾಡಿದ್ದಾರೆ. ಈ ಕುರಿತು ಮಾತನಾಡಿದ ಯಶಪಾಲ್ ಸುವರ್ಣ ” ಸಿದ್ಧರಾಮಯ್ಯ ಸರಕಾರ ನಡೆಸಿರುವ ಹುನ್ನಾರ ಇದು. ಇಬ್ಬಗೆ ನೀತಿಯನ್ನು ಸರಕಾರ ಪ್ರದರ್ಶಿಸುತ್ತಿದೆ” ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಉಡುಪಿ ನಗರಸಭೆ ಪೌರಾಯುಕ್ತ ರಾಯಪ್ಪ ” ಶಿವಮೊಗ್ಗ ಘಟನೆ ನಂತರ ಕಠಿಣ ನಿಯಮಗಳನ್ನು ಜಾರಿಗೆ ತರಲು ಸರಕಾರದಿಂದ ಮೌಖಿಕ ಸೂಚನೆ ಬಂದಿದೆ. ನಗರಸಭೆಗೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಅಧಿಕಾರಿಗಳು ಆದೇಶವನ್ನು ಪಾಲಿಸಿದ್ದಾರೆ” ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search