• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉಡುಪಿಯಲ್ಲಿ ಶೌರ್ಯ ಜಾಗರಣಾ ರಥಯಾತ್ರೆ ಕಟೌಟ್ ತೆರವು!

Tulunadu News Posted On October 5, 2023
0


0
Shares
  • Share On Facebook
  • Tweet It

ಶಿವಮೊಗ್ಗದ ಈದ್ ಮಿಲಾದ್ ಮೆರವಣಿಗೆಯಲ್ಲಿ ನಡೆದ ಗಲಭೆಗೆ ಔರಂಗಜೇಬ್ ಕಟೌಟ್, ಟಿಪ್ಪುವಿನ ಪತಾಕೆ ಸಹಿತ ಫ್ಲೆಕ್ಸ್, ಬ್ಯಾನರ್ ಗಳೇ ಕಾರಣ ಎನ್ನುವ ಅಭಿಪ್ರಾಯ ಬಂದ ಹಿನ್ನಲೆಯಲ್ಲಿ ರಾಜ್ಯ ಸರಕಾರ ಎಲ್ಲಾ ಜಿಲ್ಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ. ಮತೀಯ ಭಾವನೆಗಳಿಗೆ ದಕ್ಕೆ ತರುವ ಬ್ಯಾನರ್ಸ್, ಬಂಟಿಂಗ್ಸ್, ಕಟೌಟ್ ಗಳನ್ನು ತೆರವು ಮಾಡಲು ಸೂಚಿಸಿದೆ. ಈ ಸೂಚನೆಯಂತೆ ಅಕ್ಟೋಬರ್ 10 ರಂದು ಹಿಂದೂ ಸಮಾಜೋತ್ಸವ ನಡೆಯಲಿರುವ ಉಡುಪಿಯ ಎಂಜಿಎಂ ಮೈದಾನ ಮತ್ತು ಸುತ್ತಮುತ್ತ ಅನಧಿಕೃತ ನಿಯಮಬಾಹಿರ ಕಟೌಟ್ ಗಳನ್ನು ತೆರವು ಮಾಡಲು ಎಸ್ ಪಿ ಡಾ. ಅರುಣ್ ಕೆ ಅವರು ಆದೇಶಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್, ಭಜರಂಗದಳ, ಭಾರತೀಯ ಜನತಾ ಪಾರ್ಟಿ ಮತ್ತು ಸಂಘ ಪರಿವಾರದ ಮುಖಂಡರು ನಗರದಲ್ಲಿ 30 ಕ್ಕೂ ಹೆಚ್ಚಿನ ಕಟೌಟ್ ಗಳನ್ನು ಅಳವಡಿಸಿದ್ದು, ಯಾವುದೇ ಮುನ್ಸೂಚನೆ ನೀಡದೆ ಉಡುಪಿ ನಗರಸಭೆ ಕಟೌಟ್ ಗಳನ್ನು ತೆರವು ಮಾಡಿದೆ. ಇದು ಆಯೋಜಕರ ಅಸಮಾಧಾನಕ್ಕೆ ಕಾರಣವಾಗಿದೆ. ವಿಶ್ವ ಹಿಂದೂ ಪರಿಷತ್, ಭಜರಂಗದಳ ಮುಖಂಡರು, ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರೊಂದಿಗೆ ಮಾತನಾಡಿದ್ದಾರೆ. ಈ ಕುರಿತು ಮಾತನಾಡಿದ ಯಶಪಾಲ್ ಸುವರ್ಣ ” ಸಿದ್ಧರಾಮಯ್ಯ ಸರಕಾರ ನಡೆಸಿರುವ ಹುನ್ನಾರ ಇದು. ಇಬ್ಬಗೆ ನೀತಿಯನ್ನು ಸರಕಾರ ಪ್ರದರ್ಶಿಸುತ್ತಿದೆ” ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಉಡುಪಿ ನಗರಸಭೆ ಪೌರಾಯುಕ್ತ ರಾಯಪ್ಪ ” ಶಿವಮೊಗ್ಗ ಘಟನೆ ನಂತರ ಕಠಿಣ ನಿಯಮಗಳನ್ನು ಜಾರಿಗೆ ತರಲು ಸರಕಾರದಿಂದ ಮೌಖಿಕ ಸೂಚನೆ ಬಂದಿದೆ. ನಗರಸಭೆಗೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಅಧಿಕಾರಿಗಳು ಆದೇಶವನ್ನು ಪಾಲಿಸಿದ್ದಾರೆ” ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search