• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಂದೇ ಭಾರತ್​ ರೈಲಿಗೆ ಕಿತ್ತಳೆ ಬಣ್ಣವೇಕೆ?

Tulunadu News Posted On October 5, 2023
0


0
Shares
  • Share On Facebook
  • Tweet It

ವಂದೇ ಭಾರತ್​ ರೈಲಿಗೆ ಕಿತ್ತಳೆ ಬಣ್ಣವೇಕೆ? ವೈಜ್ಞಾನಿಕ ಕಾರಣ ತಿಳಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​.

ಕಿತ್ತಳೆ ಬಣ್ಣದ ವಂದೇ ಭಾರತ್​ ರೈಲುಗಳನ್ನು ಪ್ರಾರಂಭಿಸುವುದರ ಹಿಂದೆ ಯಾವುದೇ ರಾಜಕೀಯ ಇಲ್ಲ, ನೂರು ಪ್ರತಿಶತದಷ್ಟು ವೈಜ್ಞಾನಿಕ ಚಿಂತನೆ ಇದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ ಅವರು ತಿಳಿಸಿದರು.

ಇತ್ತೀಚೆಗೆ ಪತ್ರಕರ್ತರ ಜತೆ ನಡೆದ ಸಂವಾದದ ವೇಳೆ ಕಿತ್ತಳೆ ಬಣ್ಣದ ಹಿಂದೆ ರಾಜಕೀಯ ಇದೆ ಎಂಬ ಆರೋಪವನ್ನು ಅಲ್ಲಗೆಳೆದರು. ಮಾನವನ ಕಣ್ಣಿಗೆ ಹಳದಿ ಮತ್ತು ಕಿತ್ತಳೆ ಬಣ್ಣಗಳು ಹೆಚ್ಚು ಗೋಚರಿಸುತ್ತದೆ. ಯೂರೋಪ್​ನಲ್ಲಿ ಶೇ. 80ರಷ್ಟು ರೈಲುಗಳು ಕಿತ್ತಳೆ ಬಣ್ಣ ಅಥವಾ ಹಳದಿ ಮತ್ತು ಕಿತ್ತಳೆ ಬಣ್ಣದ ಸಂಯೋಜನೆಯನ್ನು ಒಳಗೊಂಡಿವೆ ಎಂದು ಅಶ್ವಿನಿ ವೈಷ್ಣವ್​ ಹೇಳಿದರು.
ಸಿಲ್ವರ್​ನಂತಹ ಇತರೆ ಅನೇಕ ಬಣ್ಣಗಳು ಹಳದಿ ಮತ್ತು ಕಿತ್ತಳೆ ಬಣ್ಣಗಳಂತೆ ಪ್ರಕಾಶಮಾನವಾಗಿವೆ ಆದರೆ, ಮಾನವನ ಕಣ್ಣಿಗೆ ಗೋಚರತೆಯ ದೃಷ್ಟಿಕೋನದಿಂದ ಕಿತ್ತಳೆ ಮತ್ತು ಹಳದಿ ಬಣ್ಣದ ಉತ್ತಮ ಎಂದು ಪರಿಗಣಿಸಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಇಲ್ಲಿ ನೂರರಷ್ಟು ವೈಜ್ಞಾನಿಕ ಚಿಂತನೆ ಇದೆ ಎಂದು ಸ್ಪಷ್ಟನೆ ನೀಡಿದರು.

ಇದೇ ಕಾರಣಕ್ಕೆ ವಿಮಾನಗಳು ಮತ್ತು ಹಡಗುಗಳಲ್ಲಿರುವ ಬ್ಲ್ಯಾಕ್​ ಬಾಕ್ಸ್​ಗಳ ಬಣ್ಣವೂ ಕಿತ್ತಳೆ ಬಣ್ಣದಲ್ಲಿರುತ್ತವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಬಳಸುವ ರಕ್ಷಣಾ ದೋಣಿ ಮತ್ತು ಜೀವರಕ್ಷಣಾ ಜಾಕೆಟ್​ಗಳು ಕೂಡ ಕಿತ್ತಳೆ ಬಣ್ಣದಲ್ಲೇ ಇರುತ್ತವೆ ಎಂದು ಹೇಳಿದರು.

ಭಾರತೀಯ ರೈಲ್ವೆ ಇಲಾಖೆಯು ತನ್ನ ಮೊದಲ ಕಿತ್ತಳೆ-ಬೂದು ಬಣ್ಣದ ವಂದೇ ಭಾರತ್ ರೈಲನ್ನು ಸೆಪ್ಟೆಂಬರ್ 24ರಂದು ಕೇರಳದ ಕಾಸರಗೋಡು ಮತ್ತು ತಿರುವನಂತಪುರಂ ನಡುವೆ ಪ್ರಾರಂಭಿಸಿತು. ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 24 ರಂದು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಚಾಲನೆ ನೀಡಿದ ಒಂಬತ್ತು ವಂದೇ ಭಾರತ್ ರೈಲುಗಳಲ್ಲಿ ಇದು ಕೂಡ ಒಂದಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search