• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಠಾಣ್ ಕೋಟ್ ಮಾಸ್ಟರ್ ಮೈಂಡ್ ಶಹೀದ್ ಲತೀಫ್ ಹತ್ಯೆ

Tulunadu News Posted On October 11, 2023
0


0
Shares
  • Share On Facebook
  • Tweet It

ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಭಯೋತ್ಪಾದಕ, ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಶಹೀದ್ ಲತೀಫ್ ಪಾಕಿಸ್ತಾನದ ಮಸೀದಿಯೊಳಗೆ ಅಕ್ಟೋಬರ್ 10 ರಂದು ಹತನಾಗಿದ್ದಾನೆ. ಈತನನ್ನು ಲತೀಫ್ ಯಾನೆ ಬಿಲಾಲ್ ಎನ್ನುವ ಹೆಸರಿನಿಂದ ಗುರುತಿಸಲಾಗುತ್ತಿತ್ತು. ಈತ ಯುಎಪಿಎ ಆಕ್ಟ್ ಅಡಿಯಲ್ಲಿ ಭಾರತಕ್ಕೆ ಅತೀ ಅಗತ್ಯವಾಗಿ ಬೇಕಾಗಿದ್ದ. ಈತನ ಜೊತೆ ಈತನ ಇನ್ನಿಬ್ಬರು ಸಹಚರರನ್ನು ಕೂಡ ಮೂರು ಜನ ಅನಾಮಧೇಯ ಬಂದೂಕುಧಾರಿಗಳು ಹತ್ಯೆಗೈದಿದ್ದಾರೆ. ಈತ ಹತನಾಗಿರುವ ಮಸೀದಿ ಪಾಕಿಸ್ತಾನದ ಸಿಸಲ್ ಕೋಟ್ ಇಲ್ಲಿನ ದಸ್ಕಾ ಎನ್ನುವ ಏರಿಯಾದಲ್ಲಿ ಬರುತ್ತದೆ.

ಜೈಶ್-ಇ-ಮೊಹಮ್ಮದ್ ಸಂಘಟನೆಯ ಪ್ರಮುಖನಾಗಿದ್ದ ಶಹೀದ್ ಲತೀಫ್ 2016 ರ ಪಠಾಣ್ ಕೋಟ್ ವಾಯುನೆಲೆಯ ಮೇಲೆ ವಿಧ್ವಂಸಕ ಕೃತ್ಯದ ಪ್ರಧಾನ ಆರೋಪಿ ಎಂದೇ ಗುರುತಿಸಲಾಗಿದೆ. ಅಲ್ಲಿ ಏಳು ಜನ ವಾಯುಸೇನೆಯ ಯೋಧರು ಹುತಾತ್ಮರಾಗಿದ್ದರು.

ಈತ 1993 ರಲ್ಲಿ ಕಾಶ್ಮೀರದ ಕಣಿವೆಯ ಮೂಲಕ ಅತಿಕ್ರಮ ಪ್ರವೇಶ ಮಾಡಿದ್ದ. ನಂತರದ ವರ್ಷದಲ್ಲಿ ಬಂಧಿತನಾಗಿದ್ದ. 2010 ರ ತನಕ ಜೆಇಎಂ ಉಗ್ರಗಾಮಿ ಸಂಘಟನೆಯ ಸ್ಥಾಪಕ ಮಸೂದ್ ಅಜರ್ ಎನ್ನುವ ಮತ್ತೊಬ್ಬ ಕುಖ್ಯಾತ ಭಯೋತ್ಪಾದಕನ ಜೊತೆ ಜಮ್ಮು ಜೈಲಿನಲ್ಲಿದ್ದ. 2010 ರಲ್ಲಿ ಯುಪಿಎ ಸರಕಾರ ಇವನನ್ನು ಬಿಡುಗಡೆಗೊಳಿಸಿ ಪಾಕಿಸ್ತಾನಕ್ಕೆ ಗಡಿಪಾರು ಮಾಡಿತ್ತು.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search