• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಂದಿನ ಶುಕ್ರವಾರ ಮುಸ್ಲಿಮರಿಗೆ ಗಲಭೆಗೆ ಕರೆಕೊಟ್ಟ ಖಾಲಿದ್ ಮಶಾಲ್!

Tulunadu News Posted On October 11, 2023


  • Share On Facebook
  • Tweet It

ಹಮಾಸ್ ಉಗ್ರ ಸಂಘಟನೆಯ ಮುಖ್ಯಸ್ಥ ಮತ್ತು ಹಣಕಾಸು ಪೂರೈಕೆದಾರ ಖಾಲಿದ್ ಮಶಾಲ್ ವಿಶ್ವದ್ಯಾಂತ ಇರುವ ಮುಸ್ಲಿಮರಿಗೆ ಗಲಭೆಗೆ ಕರೆ ಕೊಟ್ಟಿದ್ದಾನೆ. ಮುಂದಿನ ಶುಕ್ರವಾರ ಜಗತ್ತಿನಾದ್ಯಂತ ಇರುವ ಮುಸ್ಲಿಮರು ಮತ್ತು ಮುಸ್ಲಿಮ್ ದೇಶದಲ್ಲಿ ವಾಸಿಸುವವರಿಗೆ ಎಲ್ಲಿ ಇದ್ದಿರೋ ಅಲ್ಲಿಂದಲೇ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುವಂತೆ ಸೂಚನೆ ನೀಡಿದ್ದಾನೆ. ನಿಮ್ಮ ಆಕ್ರೋಶ ಹೇಗಿರಬೇಕು ಎಂದರೆ ಅದು ಪ್ರವಾಹದ ರೀತಿಯಲ್ಲಿ ಕಾಣಬೇಕು. ನಿಮ್ಮ ಉತ್ತರ ಯಹೂದಿಗಳಿಗೆ ಮತ್ತು ಅಮೇರಿಕಾಕ್ಕೆ ಸಂದೇಶ ನೀಡಬೇಕು ಎಂದು ತಿಳಿಸಿದ್ದಾನೆ.

“ಫೈನಾನ್ಸಿಯಲ್ ಜಿಹಾದ್”

ಅವನ ಎರಡನೇಯ ಸಂದೇಶ ಏನೆಂದರೆ ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿರುವ ಮುಸ್ಲಿಮರು “ಫೈನಾನ್ಸಿಯಲ್ ಜಿಹಾದ್” ಇದಕ್ಕೆ ಕೈಜೋಡಿಸಬೇಕು. ಎಲ್ಲಾ ಕಡೆಯಿಂದ ಹಣ ಸಂಗ್ರಹವಾಗಬೇಕು. ಈ ಹಣ ಗಾಜಾದಲ್ಲಿರುವ ಹೋರಾಟಗಾರರಿಗೆ ನೀಡಿ ಇನ್ನಷ್ಟು ವಿಧ್ವಂಸಕ ಕೃತ್ಯ ಮಾಡಲು ಅವರಿಗೆ ಹಣದ ನೆರವನ್ನು ನೀಡೋಣ ಎಂದು ಹೇಳಿದ್ದಾನೆ.
ಅವನು ಇನ್ನಷ್ಟು ಮುಂದುವರೆದು ಮುಸ್ಲಿಂ ರಾಷ್ಟ್ರಗಳು ಮತ್ತು ಮುಸ್ಲಿಂ ನಾಯಕರು ತಮ್ಮ ರಾಜಕೀಯ ಶಕ್ತಿಗಳನ್ನು ಬಳಸಿ ಇಸ್ರೇಲ್ ಯೋಧರು ಗಾಜಾ ಮೇಲೆ ದಾಳಿ ಮಾಡುವುದನ್ನು ತಡೆಯಬೇಕು ಎಂದು ಮನವಿ ಮಾಡಿದ್ದಾನೆ.

ಜಿಹಾದಿನಲ್ಲಿ ಭಾಗವಹಿಸಿ!

ಅವನ ನಾಲ್ಕನೇ ಸಂದೇಶ ಬಹಳ ಪ್ರಮುಖವಾಗಿದ್ದು, ಎಲ್ಲಾ ಮುಸ್ಲಿಮರು ತಮ್ಮ ಹೃದಯದಿಂದ ಧರ್ಮಯುದ್ಧ ಅಂದರೆ ಜಿಹಾದಿನಲ್ಲಿ ಭಾಗವಹಿಸಬೇಕು. ಆಲ್ ಅಕ್ಸಾ ( ಇಸ್ರೇಲಿನ ಜೆರುಸಲೇಮ್ ನಲ್ಲಿ ಮುಸ್ಲಿಮರ ನಂಬಿಕೆಯ ಶ್ರದ್ಧಾಕೇಂದ್ರ) ಇದಕ್ಕಾಗಿ ಪ್ರಾಣ ಅರ್ಪಿಸಲು ತಯಾರಿರಬೇಕು. ಮುಸ್ಲಿಮರು ಯಹೂದಿಗಳ ವಿರುದ್ಧ ಹೋರಾಡಲು ಎಲ್ಲವನ್ನು ತ್ಯಾಗ ಮಾಡಲು ಕೂಡ ಸಿದ್ಧರಿರಬೇಕು. ಅದರೊಂದಿಗೆ ಇಸ್ರೇಲಿನ ನೆರೆಹೊರೆಯ ದೇಶಗಳಾದ ಜೋರ್ಡಾನ್, ಸಿರಿಯಾ, ಲೆಬನಾನ್, ಈಜಿಪ್ಟ್ ಹಾಗೂ ಇನ್ನಿತರ ದೇಶಗಳಲ್ಲಿರುವ ಮುಸ್ಲಿಮರು ತಮ್ಮದೇ ಶಕ್ತಿ, ಸಾಮರ್ತ್ಯ ಬಳಸಿ ಇಸ್ರೇಲಿನ ಗಡಿಯೊಳಗೆ ನುಗ್ಗಬೇಕು. ಜಿಹಾದ್ ಕೇವಲ ಪುಸ್ತಕಗಳಲ್ಲಿ ಮಾತ್ರವಲ್ಲ ಯುದ್ಧಭೂಮಿಯಲ್ಲಿ ತೋರಿಸಬೇಕು. ಮುಜಾಯುದ್ದೀನ್ ದಾಳಿಗಳು ನಡೆದು ಪ್ಯಾಲೇಸ್ತಿನ್ ನಲ್ಲಿ ರಕ್ತ ಬಸಿದಾದರೂ ಗೆಲ್ಲಬೇಕು ಎಂದು ಹೇಳಿದ್ದಾನೆ.
ಕೊನೆಯದಾಗಿ ಇಷ್ಟೆಲ್ಲ ಮಾಡುವಾಗ ಹಣ ಅಗತ್ಯವಾಗಿದ್ದರೂ ನಮಗೆ ಈಗ ನಿಮ್ಮ ಹೃದಯ ಮತ್ತು ರಕ್ತ ಬೇಕಾಗಿದೆ. ಪ್ಯಾಲೇಸ್ತಿನ್ ಗಾಗಿ ಯಾವ ತ್ಯಾಗಕ್ಕೂ ನೀವು ಸಿದ್ಧರಾಗಿ ಎಂದು ಮುಸ್ಲಿಮರಿಗೆ ಕರೆ ಕೊಟ್ಟಿದ್ದಾನೆ.

  • Share On Facebook
  • Tweet It


- Advertisement -


Trending Now
ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
Tulunadu News May 30, 2025
ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
Tulunadu News May 30, 2025
Leave A Reply

  • Recent Posts

    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?
    • ಸೋಮಶೇಖರ್, ಹೆಬ್ಬಾರ್ ಬಿಜೆಪಿಯಿಂದ ಕೊನೆಗೂ ಗೇಟ್ ಪಾಸ್!
    • ಕೋವಿಡ್ ಏರಿಕೆ: ಮಕ್ಕಳ, ವೃದ್ಧರ, ಗರ್ಭೀಣಿಯರ ಬಗ್ಗೆ ಸರಕಾರ ಹೇಳಿದ್ದೇನು?
  • Popular Posts

    • 1
      ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • 2
      ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • 3
      ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • 4
      ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • 5
      ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search