• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಭಾರತೀಯ ಹೆಣ್ಣುಮಕ್ಕಳಿಂದ ನೃತ್ಯ ಖಂಡನೀಯ

Tulunadu News Posted On October 12, 2023
0


0
Shares
  • Share On Facebook
  • Tweet It

ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗವಹಿಸಲು ವಿವಿಧ ದೇಶಗಳ ಕ್ರಿಕೆಟಿಗರು ಭಾರತಕ್ಕೆ ಆಗಮಿಸಿದ್ದಾರೆ. ಪಾಕಿಸ್ತಾನ ಕೂಡ ಭಾರತದಲ್ಲಿ ನಡೆಯುತ್ತಿರುವ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿದೆ. ಅವರು ವಿವಿಧ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಾಟದಲ್ಲಿ ಆಡಲು ಆಯಾ ರಾಜ್ಯಕ್ಕೆ ಆಗಮಿಸಿದಾಗ ಅವರನ್ನು ಹೋಟೇಲಿನಲ್ಲಿ ಸ್ವಾಗತಿಸಲಾಗುತ್ತದೆ. ಆಗ ಅವರ ಸ್ವಾಗತಕ್ಕೆ ಭಾರತೀಯ ಹೆಣ್ಣುಮಕ್ಕಳು ನೃತ್ಯ ಮಾಡುವುದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿಯಾಗಿರುವ ಜೈ ಶಾ ಅವರು ಹೀಗೆಕೆ ಮಾಡಿದರು ಎಂದು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಪಕ್ಕಾ ರಾಷ್ಟ್ರೀಯವಾದಿಯಾಗಿರುವ ಅಮಿತ್ ಶಾ ಪುತ್ರರೂ ಆಗಿರುವ ಜೈ ಶಾ ಆದಷ್ಟು ಬೇಗ ಈ ಸಂಪ್ರದಾಯ ನಿಲ್ಲಿಸಬೇಕು ಎಂದು ಹೇಳಲಾಗುತ್ತಿದೆ.

ಇನ್ನು ಪ್ಯಾಲೇಸ್ತೇನಿಯಲ್ಲಿರುವ ಹಮಾಸ್ ಉಗ್ರರು ಇಸ್ರೇಲ್ ಗಡಿಯೊಳಗೆ ನುಗ್ಗಿ ಅನೇಕ ಶಿಶುಗಳ ಶಿರಚ್ಚೇದ ಮಾಡಿದ ವಿಷಯ ಕೇಳಿದ ಅಮೇರಿಕಾ ಅಧ್ಯಕ್ಷ ಜೋ ಬೈಡನ್ ಗದ್ಗತಿತರಾದರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಮಾಹಿತಿ ಸತ್ಯಕ್ಕೆ ದೂರ ಎಂದು ವೈಟ್ ಹೌಸ್ ಪತ್ರಿಕಾ ವರದಿ ಹೇಳಿದೆ. ಹಸುಳೆಗಳನ್ನು ಅಮಾನುಷವಾಗಿ ರಕ್ಕಸರ ರೀತಿ ಕೊಂದಿರುವ ಹಮಾಸ್ ಉಗ್ರರ ಕೃತ್ಯವನ್ನು ಖಂಡಿಸಿರುವ ಬೈಡನ್ ಆ ಫೋಟೋಗಳನ್ನು ಇನ್ನು ನೋಡಿಲ್ಲ. ಆದರೆ ಅಮೇರಿಕಾ ಇನ್ನಷ್ಟು ಫೈಟರ್ ಜೆಟ್ ಗಳನ್ನು ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಕಳುಹಿಸಿಕೊಡುತ್ತಿರುವುದಾಗಿ ಮಾಹಿತಿ ನೀಡಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಇಸ್ರೇಲ್ ಪ್ರಧಾನಿ ನೇತಾನ್ಯಾಹು ಅವರು ಹೆಚ್ಚುವರಿಯಾಗಿ 5,30,000 ಯೋಧರು ಗಾಜಾಪಟ್ಟಿಯನ್ನು ಆಕ್ರಮಿಸಿಕೊಳ್ಳಲಿದ್ದಾರೆ. ನಾವು ಹಮಾಸ್ ಉಗ್ರರನ್ನು ಜಗತ್ತು ಐಸಿಸ್ ಭಯೋತ್ಪಾದಕರನ್ನು ನಾಶ ಮಾಡಿದ ರೀತಿಯಲ್ಲಿಯೇ ಮುಗಿಸುವುದಾಗಿ ಹೇಳಿದ್ದಾರೆ. ಈಗಾಗಲೇ ಹಮಾಸ್ ನೌಕಾ ಹಿರಿಯ ಕಮಾಂಡರ್ ನನ್ನು ಇಸ್ರೇಲ್ ಮಿಲಿಟರಿ ಪಡೆಗಳು ಹತ್ಯೆ ಮಾಡಿರುವ ಮಾಹಿತಿ ದೊರಕಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:

  • Privacy Policy
  • Contact
© Tulunadu Infomedia.

Press enter/return to begin your search