• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ವೈರಿ ರಾಷ್ಟ್ರ ಯಾರಿಗೆ? ಸೈನಿಕರಿಗೆ ಮಾತ್ರಾನಾ?

Tulunadu News Posted On October 13, 2023
0


0
Shares
  • Share On Facebook
  • Tweet It

ಸಾಮಾಜಿಕ ಜಾಲತಾಣಗಳಲ್ಲಿ ಬಾಯ್ಕಾಟ್ ಇಂಡೋ-ಪಾಕ್ ಮ್ಯಾಚ್ ಎಂಬುದು ಟ್ರೆಂಡಿಂಗ್ ಆಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಪಾಕಿಸ್ತಾನ ಇನ್ನು ತನ್ನ ಕಳ್ಳಬುದ್ಧಿಯನ್ನು ಬಿಡದೇ ಇರುವುದು. ಪಾಕಿಸ್ತಾನ ಪೋಷಿತ ಭಯೋತ್ಪಾದಕರು ಈಗಲೂ ಭಾರತದ ಗಡಿಯೊಳಗೆ ನುಗ್ಗಿ ಮುರಾಮೋಸದಿಂದ ನಮ್ಮ ಯೋಧರ ಮೇಲೆ ದಾಳಿ ಮಾಡುತ್ತಿದ್ದಾರೆ. ನಮ್ಮ ವೀರ ಸೈನಿಕರು ಹುತಾತ್ಮರಾಗುತ್ತಿದ್ದಾರೆ. ಗಡಿಯಲ್ಲಿ ನಾಗರಿಕರು ಸಾಯುತ್ತಿದ್ದಾರೆ. ಆದರೆ ದೇಶದ ಒಳಗೆ ಏನಾಗುತ್ತಿದೆ. ಪರಮ ಶತ್ರು ರಾಷ್ಟ್ರದ ಆಟಗಾರರಿಗೆ ನಮ್ಮ ರಾಷ್ಟ್ರದಲ್ಲಿ ಹೊಟ್ಟೆ ತುಂಬಾ ಬಿರಿಯಾನಿ ತಿನ್ನಿಸಲಾಗುತ್ತಿದೆ. ಅವರು ಹೋಟೇಲಿಗೆ ಪ್ರವೇಶಿಸುವಾಗ ನಮ್ಮ ಹೆಣ್ಣು ಮಕ್ಕಳಿಂದ ಡ್ಯಾನ್ಸ್ ಮಾಡಿಸಲಾಗುತ್ತಿದೆ. ಪಾಕ್ ಕ್ರಿಕೆಟಿಗರೊಂದಿಗೆ ನಮ್ಮ ಕ್ರಿಕೆಟಿಗರು ಉಭಯಕುಶಲೋಪರಿ ನಡೆಸುತ್ತಾರೆ. ಪಾಕ್ ಕಲಾವಿದರು ಇಲ್ಲಿ ಪ್ರದರ್ಶನ ನೀಡುತ್ತಿದ್ದಾರೆ. ಅವರೊಂದಿಗೆ ನಮ್ಮ ಕಲಾವಿದರು ಸೇಲ್ಪಿ ತೆಗೆಯುತ್ತಿದ್ದಾರೆ. ನಮ್ಮ ಕಲಾವಿದರು ಪಂದ್ಯಾಟದ ಮೊದಲು ಅವರಿಗಾಗಿ ಹಾಡುವ ಕಾರ್ಯಕ್ರಮ ಇದೆ. ಎಲ್ಲರೂ ಎರಡೂ ತಂಡದ ಆಟ ನೋಡಲು ಮೈದಾನದಲ್ಲಿ ತುಂಬುತ್ತಿದ್ದಾರೆ. ಇದನ್ನೆಲ್ಲಾ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಹಳ ಖುಷಿ ಖುಷಿಯಿಂದ ಮಾಡಿಸುತ್ತಿದೆ. ಹಾಗಾದರೆ ಪಾಕ್ ವೈರಿ ರಾಷ್ಟ್ರ ಯಾರಿಗೆ?

ಜನರು, ಕಲಾವಿದರು, ಆಟಗಾರರು ಪಾಕಿಸ್ತಾನದ ಆಟಗಾರರಿಗೆ ಅತಿಥಿ ಸತ್ಕಾರದಲ್ಲಿ ಮೈಮರೆಯುತ್ತಿದ್ದರೆ ಪಾಕಿಸ್ತಾನ ಶತ್ರು ಎನಿಸಿಕೊಂಡಿರುವುದು ಗಡಿಯಲ್ಲಿರುವ ನಮ್ಮ ಸೈನಿಕರಿಗೆ ಮಾತ್ರವೇ? ನಾವು ನಮಗೆ ಬೇಕಾದ ಹಾಗೆ ಅವರೊಂದಿಗೆ ಕ್ರಿಕೆಟ್ ಹೆಸರಲ್ಲಿ ಮೋಜು ಮಸ್ತಿಯಲ್ಲಿ ತೊಡಗಿದ್ದೇವೆ. ನೀವು ಮಾತ್ರ ಅವರೊಂದಿಗೆ ಸೆಣಸಾಡಿ ಎಂದು ಸೈನಿಕರಿಗೆ ನಾವು ಪರೋಕ್ಷವಾಗಿ ಹೇಳಿದಂತೆ ಆಗುತ್ತಿಲ್ಲವೇ? ನಮ್ಮ ಸೈನಿಕರ ಬಲಿದಾನ ನಾವು ಮರೆತುಬಿಟ್ಟೆವಾ? ಪಾಕ್ ಆಟಗಾರ ಭಾರತೀಯ ಮೈದಾನದಲ್ಲಿ ಶತಕ ಹೊಡೆಯುತ್ತಾನೆ. ಅದರ ಕ್ರೆಡಿಟ್ ನಮ್ಮ ಶತ್ರು ಗಾಜಾಕ್ಕೆ ಸಮರ್ಪಿಸುತ್ತಾನೆ ಮತ್ತು ನಾವು ಯಾವುದೋ ಪಾಕ್ ನಿರೂಪಕಿಯನ್ನು ಮಾತ್ರ ಗಡಿಪಾರು ಮಾಡಿ ಏನೋ ದೊಡ್ಡ ಸಾಧನೆ ಮಾಡಿದಂತೆ ಆಡುತ್ತಿದ್ದೇವೆ. ಅಷ್ಟಕ್ಕೂ ಬಿಸಿಸಿಐ ಕಾರ್ಯದರ್ಶಿ ಯಾರು? ಇದೇ ರಾಷ್ಟ್ರದ ಗೃಹ ಸಚಿವ ಅಮಿತ್ ಶಾ ಮಗ. ಇದೇ ವರ್ಷದ ಸೆಪ್ಟೆಂಬರ್ 13 ರಂದು ಪಾಕಿಸ್ತಾನ ಕಳುಹಿಸಿದ ಭಯೋತ್ಪಾದಕರಿಂದ ಇಬ್ಬರು ಭಾರತೀಯ ಯೋಧರು ಹಾಗೂ ಒಬ್ಬರು ಪೊಲೀಸ್ ಆಫೀಸರ್ ಹುತಾತ್ಮರಾಗಿದ್ದಾರೆ. ಆದರೆ ನಾವು ಪಾಕ್ ಆಟಗಾರರಿಗೆ, ಅವರೊಂದಿಗೆ ಬಂದಿರುವವರಿಗೆ ಉಪಚಾರ ಮಾಡುತ್ತಿದ್ದೇವೆ. ಹೀಗೆ ಬಹಳ ದೊಡ್ಡ ರೀತಿಯಲ್ಲಿ ಮೂಡುತ್ತಿರುವ ಆಕ್ರೋಶಕ್ಕೆ ಬಿಸಿಸಿಐ ಮತ್ತು ಕೇಂದ್ರ ಸರಕಾರ ಏನು ಉತ್ತರ ಕೊಡುತ್ತದೆ ಎಂದು ನೋಡಬೇಕು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search