• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

2022 ರಲ್ಲಿ ಪ್ರತಿ 3 ನಿಮಿಷಕ್ಕೆ ಒಬ್ಬ ಅಪಘಾತದಲ್ಲಿ ಸಾವು!

Tulunadu News Posted On October 14, 2023
0


0
Shares
  • Share On Facebook
  • Tweet It

ಭಾರತದಲ್ಲಿ ಇಲ್ಲಿಯ ತನಕ ನಡೆದ ಅಪಘಾತಗಳ ಪ್ರಮಾಣವನ್ನು ವಿಶ್ಲೇಷಿಸುವಾಗ 2022 ರಲ್ಲಿ ಅತೀ ಹೆಚ್ಚು ಅಪಘಾತಗಳು ನಡೆದಿವೆ ಎನ್ನುವುದು ಅಂಕಿಅಂಶಗಳಿಂದ ಸಾಬೀತಾಗಿದೆ. 2022 ರಲ್ಲಿ ಒಂದೇ ವರ್ಷದಲ್ಲಿ 1.68 ಲಕ್ಷಕ್ಕಿಂತಲೂ ಹೆಚ್ಚು ಅಪಘಾತಗಳು ನಡೆದಿರುವುದು ದಾಖಲಾಗಿದೆ. ಈ ಅಪಘಾತಗಳಲ್ಲಿ ಮರಣ ಹೊಂದಿದವರ ಸರಾಸರಿಯನ್ನು ನೋಡಿದಾಗ ನಿತ್ಯ 462 ಜನ ಪ್ರಾಣ ತೆತ್ತಿದ್ದಾರೆ. ಇದು ಅಂದಾಜು ಮೂರು ನಿಮಿಷಗಳಿಗೆ ಒಬ್ಬರು ಮರಣ ಹೊಂದಿರುವುದಾಗಿ ಅರ್ಥ ಮಾಡಿಕೊಳ್ಳಬಹುದು.

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಎಲ್ಲಾ ರಾಜ್ಯಗಳಿಂದ ಈ ಕುರಿತು ಅಂಕಿಅಂಶಗಳನ್ನು ತರಿಸಿ ವರದಿ ಸಿದ್ಧಪಡಿಸಿಕೊಂಡಿದೆ. ಅಪಘಾತಗಳು, ಸಾವು, ನೋವುಗಳ ಸಂಖ್ಯೆ 2022 ರಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಿದ್ದು ಬಹಳ ಕಳವಳಕಾರಿ ವಿಷಯ. 2021 ಕ್ಕೆ ಹೋಲಿಸುವಾಗ 2022 ರಲ್ಲಿ 9% ದಷ್ಟು ಹೆಚ್ಚಿನ ಅಪಘಾತಗಳು ನಡೆದಿವೆ. ಇನ್ನು ಕೊರೊನಾ ಪೂರ್ವಕ್ಕೆ ಹೋಲಿಸಿದಾಗ 2019 ರಿಂದ 2022 ರಲ್ಲಿ ಈ ಪ್ರಮಾಣ 11.5% ಹೆಚ್ಚಾಗಿರುವುದು ಕೂಡ ಯೋಚಿಸಬೇಕಾದ ಸಂಗತಿ. ಇಲ್ಲಿಯ ತನಕ ಪ್ರತಿ ವರ್ಷ ನಡೆದ ಅಪಘಾತಗಳನ್ನು ಗಮನಿಸಿದಾಗ 2022 ರಲ್ಲಿ ಹೆಚ್ಚಾಗಿ ನಡೆದ ಅಪಘಾತಗಳು ಚಿಂತನೆಗೆ ಈಡು ಮಾಡಿವೆ. ಪ್ರತಿ ಮೂರು ನಿಮಿಷಗಳಿಗೊಮ್ಮೆ ಒಬ್ಬರು ಸಾಯುವುದೆಂದರೆ ದೇಶಕ್ಕೆ ದೊಡ್ಡ ನಷ್ಟವೂ ಹೌದು. ಈಗಾಗಲೇ ಭಾರತದಲ್ಲಿ ರಸ್ತೆಗಳು ಅಗಲೀಕರಣವಾಗಿದ್ದರೂ ಅಪಘಾತಗಳು ನಡೆಯುತ್ತಿರುವುದು ಏಕೆ ಎಂದು ಚಿಂತಿಸಬೇಕಾದ ಸಂಗತಿ.

ಇನ್ನು ಹಿಂದಿನ ವರ್ಷಗಳಿಗೆ ಹೋಲಿಸಿದಾಗ 2022 ರಲ್ಲಿ 4.43 ಲಕ್ಷ ಜನರು ಗಾಯಾಳಾಗಿದ್ದಾರೆ. ಇದು 2021 ರ 3.84 ಲಕ್ಷ ಗಾಯಾಳುಗಳ ಸಂಖ್ಯೆಗೆ ಹೋಲಿಸಿದಾಗ 15% ಜಾಸ್ತಿ ಎನ್ನುವುದನ್ನು ಕೂಡ ನಾವು ಗಮನಿಸಬೇಕು. ಒಟ್ಟಿನಲ್ಲಿ ಈ ಅಪಘಾತಗಳ ಸಂಖ್ಯೆ, ಸಾವಿನ ಪ್ರಮಾಣಗಳನ್ನು ಗಣನೀಯ ಇಳಿಸಲು ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ. ಅದರೊಂದಿಗೆ ಇದರ ಹಿಂದಿನ ಕಾರಣಗಳ ಬಗ್ಗೆ ನಾವು ಕೂಲಂಕುಶವಾಗಿ ಚರ್ಚಿಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search