• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ವತಂತ್ರ ಭಾರತದಲ್ಲಿ ಪ್ರಥಮ ಬಾರಿ ಈ ದೇವಸ್ಥಾನದಲ್ಲಿ ನವರಾತ್ರಿ!

Tulunadu News Posted On October 17, 2023
0


0
Shares
  • Share On Facebook
  • Tweet It

ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿ ಇಂತಹ ಒಂದು ಘಟನೆ ಆಗಿರುವುದನ್ನು ನಾವೆಲ್ಲರೂ ಹೆಮ್ಮೆಯಿಂದ ಹೇಳಿಕೊಳ್ಳದೇ ಇದ್ದರೆ ಆಗುತ್ತಾ? ಅದರಲ್ಲಿಯೂ ನವರಾತ್ರಿ ಈ ಶುಭ ದಿನಗಳಲ್ಲಿ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿಯೇ ನಡೆದಿರುವ ಸಂಗತಿ ಈ ದೇಶದ ಸುವರ್ಣ ಅಧ್ಯಾಯದಲ್ಲಿ ದಾಖಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕುಪ್ವಾರಾ ಜಿಲ್ಲೆಯ ತೀಟ್ವಾಲಾ ಗ್ರಾಮದ ಲೈನ್ ಆಫ್ ಕಂಟ್ರೋಲ್ ಸಮೀಪದಲ್ಲಿ ಅನಾದಿ ಕಾಲದಿಂದಲೂ ಇದ್ದ ಶಾರದಾ ಮಾತೆಯ ದೇವಸ್ಥಾನದಲ್ಲಿ ಸ್ವಾತಂತ್ರ್ಯ ಸಿಕ್ಕಿದ ಬಳಿಕ ಪ್ರಥಮ ಬಾರಿ ನವರಾತ್ರಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಿಯನ್ನು ಪೂಜಿಸಿ ಸಂಭ್ರಮಿಸಿದರು.

ಭಾರತದ 18 ಮಹಾಶಕ್ತಿ ಪೀಠಗಳಲ್ಲಿ ಒಂದಾಗಿರುವ ಈ ಶಾರದಾ ಮಾತೆಯ ದೇವಸ್ಥಾನ ನೀಲಂ ನದಿಯ ಕಣಿವೆಯಲ್ಲಿ ಪಾಕ್ ಆಕ್ರಮಿಕ ಕಾಶ್ಮೀರದ ವ್ಯಾಪ್ತಿಗೆ ಬರುತ್ತದೆ. ಈ ದೇವಸ್ಥಾನವನ್ನು ದ್ವಾಪರಯುಗದಲ್ಲಿ ಪಾಂಡವರು ನಿರ್ಮಿಸಿದ್ದಾರೆ ಎಂದು ಹೇಳಲಾಗಿದ್ದು, 8 ನೇ ಶತಮಾನದಲ್ಲಿ ರಾಜಾ ಲಲಿತಾದಿತ್ಯ ಮುಕ್ತಾಪೀದಾ ಈ ದೇವಸ್ಥಾನದ ಜೀರ್ಣೋದ್ಧಾರ ಮಾಡಿದ್ದಾರೆ ಎಂದು ಇತಿಹಾಸದಲ್ಲಿ ಉಲ್ಲೇಖವಿದೆ. ಹಿಂದೂ ಬಾಂಧವರಲ್ಲಿ ತಾಯಿ ಶಾರದಾ ಮಾತೆಯ ಈ ದೇವಸ್ಥಾನಕ್ಕೆ ವಿಶೇಷವಾದ ಪ್ರಾಶಸ್ತ್ಯವಿದ್ದು, ಅದರಲ್ಲಿಯೂ ಪ್ರಮುಖವಾಗಿ ಕಾಶ್ಮೀರಿ ಪಂಡಿತರು ಈ ದೇವಸ್ಥಾನದ ಬಗ್ಗೆ ಅಪಾರ ಶ್ರದ್ಧೆಯನ್ನು ಹೊಂದಿದ್ದಾರೆ. ದೇಶದ ವಿವಿಧ ಭಾಗಗಳಿಂದ ಆಸ್ತಿಕ ಬಾಂಧವರು ಈ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆರಾಧನೆಯನ್ನು ಮಾಡುತ್ತಾರೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search