• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ವತಂತ್ರ ಭಾರತದಲ್ಲಿ ಪ್ರಥಮ ಬಾರಿ ಈ ದೇವಸ್ಥಾನದಲ್ಲಿ ನವರಾತ್ರಿ!

Tulunadu News Posted On October 17, 2023
0


0
Shares
  • Share On Facebook
  • Tweet It

ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿ ಇಂತಹ ಒಂದು ಘಟನೆ ಆಗಿರುವುದನ್ನು ನಾವೆಲ್ಲರೂ ಹೆಮ್ಮೆಯಿಂದ ಹೇಳಿಕೊಳ್ಳದೇ ಇದ್ದರೆ ಆಗುತ್ತಾ? ಅದರಲ್ಲಿಯೂ ನವರಾತ್ರಿ ಈ ಶುಭ ದಿನಗಳಲ್ಲಿ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿಯೇ ನಡೆದಿರುವ ಸಂಗತಿ ಈ ದೇಶದ ಸುವರ್ಣ ಅಧ್ಯಾಯದಲ್ಲಿ ದಾಖಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕುಪ್ವಾರಾ ಜಿಲ್ಲೆಯ ತೀಟ್ವಾಲಾ ಗ್ರಾಮದ ಲೈನ್ ಆಫ್ ಕಂಟ್ರೋಲ್ ಸಮೀಪದಲ್ಲಿ ಅನಾದಿ ಕಾಲದಿಂದಲೂ ಇದ್ದ ಶಾರದಾ ಮಾತೆಯ ದೇವಸ್ಥಾನದಲ್ಲಿ ಸ್ವಾತಂತ್ರ್ಯ ಸಿಕ್ಕಿದ ಬಳಿಕ ಪ್ರಥಮ ಬಾರಿ ನವರಾತ್ರಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಿಯನ್ನು ಪೂಜಿಸಿ ಸಂಭ್ರಮಿಸಿದರು.

ಭಾರತದ 18 ಮಹಾಶಕ್ತಿ ಪೀಠಗಳಲ್ಲಿ ಒಂದಾಗಿರುವ ಈ ಶಾರದಾ ಮಾತೆಯ ದೇವಸ್ಥಾನ ನೀಲಂ ನದಿಯ ಕಣಿವೆಯಲ್ಲಿ ಪಾಕ್ ಆಕ್ರಮಿಕ ಕಾಶ್ಮೀರದ ವ್ಯಾಪ್ತಿಗೆ ಬರುತ್ತದೆ. ಈ ದೇವಸ್ಥಾನವನ್ನು ದ್ವಾಪರಯುಗದಲ್ಲಿ ಪಾಂಡವರು ನಿರ್ಮಿಸಿದ್ದಾರೆ ಎಂದು ಹೇಳಲಾಗಿದ್ದು, 8 ನೇ ಶತಮಾನದಲ್ಲಿ ರಾಜಾ ಲಲಿತಾದಿತ್ಯ ಮುಕ್ತಾಪೀದಾ ಈ ದೇವಸ್ಥಾನದ ಜೀರ್ಣೋದ್ಧಾರ ಮಾಡಿದ್ದಾರೆ ಎಂದು ಇತಿಹಾಸದಲ್ಲಿ ಉಲ್ಲೇಖವಿದೆ. ಹಿಂದೂ ಬಾಂಧವರಲ್ಲಿ ತಾಯಿ ಶಾರದಾ ಮಾತೆಯ ಈ ದೇವಸ್ಥಾನಕ್ಕೆ ವಿಶೇಷವಾದ ಪ್ರಾಶಸ್ತ್ಯವಿದ್ದು, ಅದರಲ್ಲಿಯೂ ಪ್ರಮುಖವಾಗಿ ಕಾಶ್ಮೀರಿ ಪಂಡಿತರು ಈ ದೇವಸ್ಥಾನದ ಬಗ್ಗೆ ಅಪಾರ ಶ್ರದ್ಧೆಯನ್ನು ಹೊಂದಿದ್ದಾರೆ. ದೇಶದ ವಿವಿಧ ಭಾಗಗಳಿಂದ ಆಸ್ತಿಕ ಬಾಂಧವರು ಈ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆರಾಧನೆಯನ್ನು ಮಾಡುತ್ತಾರೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search