• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೈಕೋರ್ಟಿನಲ್ಲಿ ಶರಣ್ ಪಂಪ್ವೆಲ್ ವಿರುದ್ಧದ ಕೇಸಿಗೆ ತಡೆಯಾಜ್ಞೆ

Tulunadu News Posted On October 19, 2023
0


0
Shares
  • Share On Facebook
  • Tweet It

ಕೇಸು ದಾಖಲಾದ 24 ಗಂಟೆಯೊಳಗೆ ಹೈಕೋರ್ಟಿನಲ್ಲಿ ತಡೆಯಾಜ್ಞೆ

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಅವರು ತನ್ನ ಬೆಂಬಲಿಗರೊಂದಿಗೆ ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿರುವ ಹಿಂದೂ ವ್ಯಕ್ತಿಗಳ ಮಾರಾಟದ ಅಂಗಡಿಗಳ ಮೇಲೆ ಕೇಸರಿ ಧ್ವಜವನ್ನು ಇಟ್ಟು ಎಲ್ಲಾ ಹಿಂದೂಗಳಿಗೆ ತಮಗೆ ಬೇಕಾದ ಅಗತ್ಯ ಸಾಮಾಗ್ರಿಗಳನ್ನು ಹಿಂದೂ ವ್ಯಾಪಾರಸ್ಥರ ಮಳಿಗೆಗಳಲ್ಲಿ ಮಾತ್ರ ಪಡೆದುಕೊಳ್ಳುವಂತೆ ಪತ್ರಿಕಾ ಪ್ರಕಟನೆ ನೀಡಿರುವುದರ ವಿರುದ್ಧ ದಕ್ಷಿಣ ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ಮನೋಹರ್ ಪ್ರಸಾದ್ ಇವರ ದೂರಿನ ಮೇರೆಗೆ ಶರಣ್ ಪಂಪ್ವೆಲ್ ಹಾಗೂ ಇತರರ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಂಗಳೂರು ನಗರದ ಮಂಗಳಾದೇವಿ ದೇವಸ್ಥಾನದ 2023 ನೇ ನವರಾತ್ರಿ ಜಾತ್ರಾ ಮಹೋತ್ಸವದ ಸಮಯ ದೇವಸ್ಥಾನದ ಕಮಿಟಿ ವತಿಯಿಂದ ಮತ್ತು ಜಿಲ್ಲಾಡಳಿತದ ವತಿಯಿಂದ ಹರಾಜು ಪ್ರಕ್ರಿಯೆ ಮೂಲಕ ತೆರೆಯಲಾದ ಅಂಗಡಿಗಳ ಪೈಕಿ ಹಿಂದೂ ಧರ್ಮಿಯರ ಅಂಗಡಿಗಳಿಗೆ ಭಗವಾಧ್ವಜಗಳನ್ನು ಶರಣ್ ಪಂಪ್ವೆಲ್ ಅಳವಡಿಸಿದ್ದರು. ಅಕ್ಟೋಬರ್ 16 ಸಂಜೆ 4 ಗಂಟೆಗೆ ಮಂಗಳಾದೇವಿ ದೇವಸ್ಥಾನದ ಎದುರು ಇವರು ಸಾರ್ವಜನಿಕವಾಗಿ ಮಾತನಾಡಿ, ಹಿಂದೂ ಮತ್ತು ಮುಸ್ಲಿಮರ ನಡುವೆ ಮೈಮನಸ್ಸು, ಕೋಮು ದ್ವೇಷವಾಗುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಎಫ್ ಐ ಆರ್ ನಲ್ಲಿ ಹೇಳಲಾಗಿದೆ.
ಇದರಿಂದ ಮಂಗಳೂರು ನಗರ ಮತ್ತು ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣಕ್ಕೆ ಕಾರಣವಾಗುವ ಹಾಗೂ ಸಮಾಜದಲ್ಲಿ ಹಿಂದೂ, ಮುಸ್ಲಿಂ ಮತ್ತು ಇತರರ ನಡುವೆ ಕೋಮು ಸಂಘರ್ಷಗಳು ನಡೆಯುವ ಸಾಧ್ಯತೆ, ಸಾರ್ವಜನಿಕರ ಶಾಂತಿ ನೆಮ್ಮದಿಗೆ ಮತ್ತು ಸಾರ್ವಜನಿಕರ ಪ್ರಾಣ/ಸ್ವತ್ತುಗಳಿಗೆ ತೊಂದರೆಯಾಗುವ ರೀತಿಯಲ್ಲಿ ಇರುವುದರಿಂದ ಹಿಂದೂ ಸಂಘಟನೆಯ ಮುಖಂಡ ಶರಣ್ ಪಂಪ್ವೆಲ್ ಹಾಗೂ ಇತರರ ವಿರುದ್ಧ ಕಲಾಂ 153 (ಎ) ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಎಡಪಂಥಿಯ ಸಂಘಟನೆಗಳು ಪೊಲೀಸ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಒತ್ತಡ ಹಾಕಿ ಪ್ರಕರಣ ದಾಖಲಾಗುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಆದರೆ ಕೇಸು ದಾಖಲಾದ 24 ಗಂಟೆಯೊಳಗಾಗಿ ಶರಣ್ ಪಂಪ್ವೆಲ್ ವಿರುದ್ಧದ ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಖ್ಯಾತ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಹೈಕೋರ್ಟಿನಲ್ಲಿ ಶರಣ್ ಪಂಪ್ವೆಲ್ ಪರ ತಡೆಯಾಜ್ಞೆಗೆ ವಾದ ಮಂಡಿಸಿದ್ದರು.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search