• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಸ್ಲಿಮನಾಗಿ ಇದ್ದಿದ್ರೆ ಇನ್ನಷ್ಟು ಸಾಧನೆ ಮಾಡಬಹುದಿತ್ತು – ದಾನೇಶ್ ಕನೇರಿಯಾ

Tulunadu News Posted On October 26, 2023


  • Share On Facebook
  • Tweet It

ನಾನು ಮುಸ್ಲಿಮನಾಗಿ ಇದ್ದಿದ್ರೆ ಪಾಕಿಸ್ತಾನದ ಕ್ರಿಕೆಟ್ ತಂಡದ ಕಪ್ತಾನನಾಗಬಹುದಿತ್ತು. ಅದರೊಂದಿಗೆ ಕ್ರಿಕೆಟ್ ನಲ್ಲಿ ಇನ್ನಷ್ಟು ಸಾಧನೆ ಮಾಡಲು ಅವಕಾಶ ಸಿಗುತ್ತಿತ್ತು. ನಮ್ಮದೇ ತಂಡದವರ ದಾಖಲೆ ಮುರಿಯಬಹುದಿತ್ತು. ಆದರೆ ನಾನು ನನ್ನ ಸನಾತನ ಧರ್ಮ ಬಿಟ್ಟು ಹೋಗಲು ತಯಾರಿರಲಿಲ್ಲ ಎಂದು ಮಾಜಿ ಪಾಕ್ ಕ್ರಿಕೆಟಿಗ ದಾನೇಶ್ ಕನೇರಿಯಾ ಹೇಳಿದ್ದಾರೆ. ಆಜ್ ತಕ್ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು ನನಗೆ ನನ್ನ ಸನಾತನ ಧರ್ಮವೇ ಶ್ರೇಷ್ಟ. ಈ ವಿಷಯದಲ್ಲಿ ನಾನು ರಾಜಿಯಾಗಲು ಸಿದ್ಧನಿಲ್ಲ. ನನಗೆ ಮತಾಂತರವಾಗಲು ತುಂಬಾ ಒತ್ತಡ, ಆಮಿಷ ನೀಡಲಾಯಿತು. ಆದರೆ ನಾನು ಯಾವುದಕ್ಕೂ ಜಗ್ಗಲಿಲ್ಲ ಎಂದು ಕನೇರಿಯಾ ಹೇಳಿದ್ದಾರೆ. ನನಗೆ ಕೆಲಸ ಸಿಗಲಿ, ಬಿಡಲಿ, ಅದರ ಬಗ್ಗೆ ನನಗೆ ಯೋಚನೆ ಇಲ್ಲ. ಧರ್ಮ ಇದ್ದರೆ ಎಲ್ಲವೂ ಇದೆ. ಇಲ್ಲದಿದ್ದರೆ ಏನೂ ಇಲ್ಲ, ಜೈ ಶ್ರೀರಾಮ್ ಎಂದು ದಾನೇಶ್ ಕನೇರಿಯಾ ಹೇಳಿದ್ದಾರೆ.
ಪಾಕಿಸ್ತಾನದ ಅತ್ಯುತ್ತಮ ಗೂಗ್ಲಿ ಸ್ಪಿನರ್ ಎಂದೇ ಖ್ಯಾತರಾಗಿದ್ದ ದಾನೇಶ್ ಪರಬ ಶಂಕರ್ ಕನೇರಿಯಾ ಅವರಿಗೆ ಕೇವಲ 61 ಪಂದ್ಯ ಆಡಲು ಅವಕಾಶ ದೊರಕಿತ್ತು. ಸಿಕ್ಕಿದ ಕೆಲವೇ ಅವಕಾಶಗಳಲ್ಲಿ 261 ವಿಕೆಟ್ ಗಳಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದರು. ಆದರೆ ಅವರ ಕ್ರಿಕೆಟ್ ಪಯಣ ಬೇಗ ಕೊನೆಗೊಂಡಿತ್ತು.
ಸ್ವಾತಂತ್ರ್ಯ ಪೂರ್ವದಲ್ಲಿ ಪಾಕಿಸ್ತಾನದಲ್ಲಿ ಹಿಂದೂಗಳ ಸಂಖ್ಯೆ 14.6% ಇತ್ತು. ಆದರೆ ಪ್ರಸ್ತುತ ಇದು 2.14% ಕ್ಕೆ ಬಂದು ಇಳಿದಿದೆ. ಅದಕ್ಕೆ ಕಾರಣ ಏನು ಎನ್ನುವುದು ದಾನೇಶ್ ಕನೇರಿಯಾ ಅವರ ಮಾತುಗಳಲ್ಲಿಯೇ ಅರ್ಥವಾಗುತ್ತದೆ.

  • Share On Facebook
  • Tweet It


- Advertisement -


Trending Now
ಮಾಹುಅ ಮೊಯಿತ್ರಾ ಅವರಿಗೆ ಸಿಕ್ಕಿಬೀಳಲ್ಲ ಎಂಬ ಧೈರ್ಯ ಇತ್ತಾ?
Tulunadu News December 9, 2023
ಪಾಲಕ್ಕಾಡಿನಲ್ಲಿ ನಡೆಯಿತು ರೈಲ್ವೆ ಬಳಕೆದಾರರ ಸಭೆ!
Tulunadu News December 8, 2023
Leave A Reply

  • Recent Posts

    • ಮಾಹುಅ ಮೊಯಿತ್ರಾ ಅವರಿಗೆ ಸಿಕ್ಕಿಬೀಳಲ್ಲ ಎಂಬ ಧೈರ್ಯ ಇತ್ತಾ?
    • ಪಾಲಕ್ಕಾಡಿನಲ್ಲಿ ನಡೆಯಿತು ರೈಲ್ವೆ ಬಳಕೆದಾರರ ಸಭೆ!
    • ಕೆಮ್ಮಿನ ಸಿರಫ್ ಎಂದು ಬಿಯರ್ ಮಾರಿ 42 ಕೋಟಿ ಸಂಪಾದನೆ!
    • ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
  • Popular Posts

    • 1
      ಮಾಹುಅ ಮೊಯಿತ್ರಾ ಅವರಿಗೆ ಸಿಕ್ಕಿಬೀಳಲ್ಲ ಎಂಬ ಧೈರ್ಯ ಇತ್ತಾ?
    • 2
      ಪಾಲಕ್ಕಾಡಿನಲ್ಲಿ ನಡೆಯಿತು ರೈಲ್ವೆ ಬಳಕೆದಾರರ ಸಭೆ!
    • 3
      ಕೆಮ್ಮಿನ ಸಿರಫ್ ಎಂದು ಬಿಯರ್ ಮಾರಿ 42 ಕೋಟಿ ಸಂಪಾದನೆ!
    • 4
      ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 5
      9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search