• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಪ್ರಶ್ನೆ ಸಿಂಪಲ್, ಉತ್ತರ ಟಫ್!

Hanumantha Kamath Posted On November 9, 2023
0


0
Shares
  • Share On Facebook
  • Tweet It

ನನ್ನ ಹೇಳಿಕೆಗೆ ಬದ್ಧ. ನ್ಯಾಯಾಲಯದ ವಿಚಾರಣೆಯನ್ನು ಕೂಡ ಎದುರಿಸಲು ಸಿದ್ಧನಿದ್ದೇನೆ ಎಂದು ಭಂಡ ಧೈರ್ಯದಿಂದ ತಮಿಳುನಾಡು ಮುಖ್ಯಮಂತ್ರಿ ಮಗ, ಸಚಿವ ಉದಯನಿಧಿ ಸ್ಟಾಲಿನ್ ಹೇಳಿರಬಹುದು. ಆದರೆ ಈಗ ನ್ಯಾಯಾಲಯ ಕೇಳಿರುವ ಪ್ರಶ್ನೆಗೆ ಆತ ಥರಥರ ನಡುಗುವಂತಾಗಿದೆ. ಸನಾತನ ಧರ್ಮದ ನಾಶದ ಬಗ್ಗೆ ನೀವು ನೀಡಿರುವ ಹೇಳಿಕೆಯ ಆಧಾರವೇನು? ಎಂದು ಚೆನೈ ಹೈಕೋರ್ಟ್ ಪ್ರಶ್ನಿಸಿದೆ. ಬಹಳ ಸಿಂಪಲ್ ಪ್ರಶ್ನೆ. ಆದರೆ ಉತ್ತರ ಅಷ್ಟು ಸುಲಭ ಅಲ್ಲ. ಯಾಕೆಂದರೆ ಇಂತಹ ಪ್ರಶ್ನೆ ನ್ಯಾಯಾಲಯದಿಂದ ಬಂದರೆ ಉತ್ತರ ಕೊಡುವುದು ಅಷ್ಟು ಸುಲಭವಲ್ಲ. ರಾಜಕಾರಣಿಗಳು ನೀಡುವ ಹೇಳಿಕೆಗಳಿಗೆ ತಲೆಬುಡವಿರುವುದಿಲ್ಲ. ವೈಜ್ಞಾನಿಕ ತಳಹದಿ ಮೊದಲೇ ಇರುವುದಿಲ್ಲ. ಎದುರಿಗಿದ್ದ ಗುಂಪನ್ನು ಅಥವಾ ಸಮಾವೇಶದಲ್ಲಿ ಇರುವ ಜನರಿಂದ ಚಪ್ಪಾಳೆ, ಸಿಳ್ಳೆ ಗಿಟ್ಟಿಸಿಕೊಳ್ಳಲು ಏನಾದರೊಂದು ಮಾತನಾಡಿಬಿಡುತ್ತಾರೆ. ಎಂತೆಂತ ಹಿರಿಯ ರಾಜಕಾರಣಿಗಳೇ ನಾಲಿಗೆ ಮೇಲಿನ ಹಿಡಿತ ತಪ್ಪಿ ಹೇಳಿದ ಮಾತುಗಳಿಂದ ಚುನಾವಣೆಗಳನ್ನೇ ಸೋತಿದ್ದಾರೆ. ಹಾಗಿರುವಾಗ ಎಳಸು ಉದಯನಿಧಿ ಸ್ಟಾಲಿನ್ ಯಾವ ಲೆಕ್ಕ. ಆದರೂ ಸ್ಟಾಲಿನ್ ಕುಟುಂಬದ ಕುಡಿ ಒಂದಿಷ್ಟು ಸಂಯಮದಿಂದ ವರ್ತಿಸಿದರೆ ಪ್ರಭುದ್ಧತೆಯ ಸಾಲಿನಲ್ಲಿ ಸೇರಬಹುದಿತ್ತು. ಆದರೆ ಉದಯನಿಧಿಗೆ ರಾಜಕಾರಣ ತೊಟ್ಟಿಲಿನಲ್ಲಿಯೇ ಬಂದ ಬಳುವಳಿ. ಅವರಿಗೆ ಬೂತ್ ಮಟ್ಟದಲ್ಲಿ ಪಕ್ಷ ಕಟ್ಟಿ ಗೊತ್ತಿಲ್ಲ. ಚಿನ್ನದ ಚಮಚಾ ಬಾಯಲ್ಲಿ ಇಟ್ಟು ಬೆಳೆದಿರುವುದರಿಂದ ಜೀವನದಲ್ಲಿ ಸೋಲು ಎನ್ನುವ ಶಬ್ದದ ಅರ್ಥ ಅರಿವಿಲ್ಲ. ಹಾಗಾಗಿಯೇ ಅವರು ಏನೂ ಬೇಕಾದರೂ ಹೇಳಿ ದಕ್ಕಿಸಿಕೊಳ್ಳಬಹುದು ಎಂದು ಅಂದುಕೊಂಡು ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾ ತರಹ ನಾಶ ಮಾಡಬೇಕು ಎಂದು ಹೇಳಿದ್ದಾರೆ.

ಪೊಲೀಸರೇ ಯಾಕೆ ಕ್ರಮ ಕೈಗೊಂಡಿಲ್ಲ!

ಅದನ್ನೇ ಈಗ ನ್ಯಾಯಾಲಯ ಕೇಳುತ್ತಿರುವುದು ನೀನು ಅದ್ಯಾವ ದೊಡ್ಡ ಅಧ್ಯಯನ ಮಾಡಿ ಇಂತಹ ಉತ್ತರ ಕಂಡುಕೊಂಡೆ ಎನ್ನುವುದು ಮಾತ್ರ. ಯಾಕೆಂದರೆ ಉದಯನಿಧಿ ವಿರುದ್ಧ ವ್ಯಕ್ತಿಯೊಬ್ಬರು ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡಿದ್ದಾರೆ. ಅದಕ್ಕಾಗಿ ನ್ಯಾಯಾಲಯ ಉದಯನಿಧಿಯಿಂದ ಉತ್ತರವನ್ನು ಕೇಳುತ್ತಿದೆ.
ಅಷ್ಟೇ ಅಲ್ಲ, ಸನಾತನ ಧರ್ಮದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವುದರ ಕುರಿತು ಉದಯನಿಧಿ ಹಾಗೂ ಪಿ.ಕೆ.ಶೇಖರ್ ಬಾಬು ವಿರುದ್ಧ ಕ್ರಮ ಕೈಗೊಳ್ಳಲು ವಿಫಲರಾದ ಪೊಲೀಸರ ಕಾರ್ಯಾಚರಣೆಯ ಬಗ್ಗೆ ನ್ಯಾಯಾಲಯ ಛೀಮಾರಿ ಹಾಕಿದೆ. ನ್ಯಾಯಾಲಯವು ಹೇಳಿರುವುದೇನೆಂದರೆ ಯಾವುದೇ ವ್ಯಕ್ತಿಗೆ ಪ್ರತ್ಯೇಕತಾವಧಿ ಯೋಚನೆಗಳಿಗೆ ಚಾಲನೆ ನೀಡುವ ಅಥವಾ ಯಾವುದೇ ವಿಚಾರಧಾರೆಯನ್ನು ನಾಶ ಮಾಡುವ ಅಧಿಕಾರ ಇಲ್ಲ. ಅಧಿಕಾರದಲ್ಲಿ ಇರುವ ವ್ಯಕ್ತಿಗಳು ಜವಾಬ್ದಾರಿಯಿಂದ ವರ್ತಿಸಬೇಕು. ಅವರು ಈ ರೀತಿಯ ಯೋಚನೆಗಳ ಪ್ರಸಾರ ಮಾಡಬಾರದು ಎಂದು ಹೇಳಿದೆ. ಯಾವ ವಿಚಾರಧಾರೆಯು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರಲ್ಲಿ ಬಿರುಕು ಮೂಡಿಸುತ್ತದೆಯೋ, ಆ ವಿಚಾರಧಾರೆಯನ್ನು ಸಾರ್ವಜನಿಕ ರೀತಿಯಲ್ಲಿ ಮಂಡಿಸುವ ಬದಲು ಉದಯನಿಧಿ ರಾಜ್ಯದಲ್ಲಿನ ಮಾದಕ ವಸ್ತುಗಳ ಸಮಸ್ಯೆ ಪರಿಹರಿಸುವ ಕಡೆಗೆ ಗಮನ ಕೇಂದ್ರೀಕರಿಸಬಹುದಿತ್ತು.

ನಮ್ಮಲ್ಲಿ ಭಗವಾನ್ ಇದ್ದ ಹಾಗೆ!

ಉದಯನಿಧಿ ಒಬ್ಬರು ಪ್ರಭಾವಿ ಸಚಿವರಾಗಿರುವುದರಿಂದ ಅವರು ಹೇಳಿದ ಮಾತುಗಳು ದೊಡ್ಡ ಸಂಖ್ಯೆಯಲ್ಲಿ ಪ್ರಭಾವ ಬೀರುತ್ತದೆ. ಇದರಿಂದ ಸಮುದಾಯಗಳ ನಡುವೆ ಗಲಾಟೆಗೆ ಇದು ಕಾರಣವಾಗುತ್ತದೆ. ಇನ್ನು ಉದಯನಿಧಿ ಅವರನ್ನು, ಆಡಳಿತ ಪಕ್ಷವನ್ನು ಖುಷಿ ಮಾಡಲು ಇನ್ನಷ್ಟು ಬುದ್ಧಿಜೀವಿಗಳು ಹೇಳಿಕೆ ನೀಡುತ್ತಾರೆ. ಅವರ ಉದ್ದೇಶ ಏನಾದರೂ ಪ್ರಶಸ್ತಿ ಗಿಟ್ಟಿಸುವುದು ಇರುತ್ತದೆ. ಆದರೆ ಅವರಿಗೆ ತಾವು ನೀಡಿದ ಹೇಳಿಕೆ ಹಿಂದೂಗಳ ನಂಬಿಕೆಯ ಮೇಲೆ ಪ್ರಭಾವ ಬೀರುತ್ತದೆ ಎಂದು ಗೊತ್ತೇ ಆಗುವುದಿಲ್ಲ. ಕರ್ನಾಟಕದಲ್ಲಿ ಭಗವಾನ್ ಇದ್ದ ಹಾಗೆ. ಒಟ್ಟಿನಲ್ಲಿ ಉದಯನಿಧಿಗೆ ಅಂತಹ ದೊಡ್ಡ ಶಿಕ್ಷೆ ಆಗುತ್ತಾ ಬಿಡುತ್ತಾ, ಆತನ ಬುದ್ಧಿಗೆ ಸಾಣೆ ಹಿಡಿಯುವ ಕೆಲಸ ನಡೆಯಲಿ ಎಂದು ಹಾರೈಕೆ!!

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Hanumantha Kamath January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Hanumantha Kamath January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search