• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಪಾಲಿಕೆಯ ಅಧಿಕಾರಿಗಳಿಗೆ ಬುದ್ಧಿ ಬರುವುದು ಯಾವಾಗ?

Hanumantha Kamath Posted On November 14, 2023
0


0
Shares
  • Share On Facebook
  • Tweet It

ಪ್ರತಿ ದಿನದ ಸಂಕಷ್ಟಕ್ಕೆ ಅಳುವುದ್ಯಾರು?

ಮಂಗಳೂರು ನಗರ ಪಾಲಿಕೆಯ ಹೃದಯ ಎಂದರೆ ಅಂದರೆ ಅದು ಬಂದರು ಪ್ರದೇಶ. ಇಡೀ ಮಂಗಳೂರಿನಲ್ಲಿ ಅತ್ಯಂತ ಹೆಚ್ಚು ಚಟುವಟಿಕೆಯಿಂದ ಇರುವ ಏರಿಯಾ ಅಂದರೆ ಅದು ಬಂದರು. ಅಲ್ಲಿ ಎಷ್ಟು ಸಲ ಕಸದ ರಾಶಿ ತೆಗೆದರೂ ಅಲ್ಲಿ ಕೆಲವೇ ಗಂಟೆಗಳಲ್ಲಿ ಮತ್ತೆ ರಾಶಿ ಬೀಳುತ್ತದೆ. ಅದು ಗೊತ್ತಿಲ್ಲದ ಯಾರಾದರೂ ಪಾಲಿಕೆಯಲ್ಲಿ ಇದ್ದರೆ ಅವರನ್ನು ಪಾಲಿಕೆಯಿಂದ ಬೇರೆ ಎಲ್ಲಿಯಾದರೂ ಕಳುಹಿಸಿಬಿಡುವುದು ಉತ್ತಮ. ಆದರೂ ಪಾಲಿಕೆಯಲ್ಲಿ ಅಂತವರು ಇದ್ದಾರೆ. ಇನ್ನು ನಮ್ಮ ದುರಾದೃಷ್ಟ ಅಂತವರು ಪಾಲಿಕೆಯ ಆರೋಗ್ಯ ವಿಭಾಗದಲ್ಲಿ ಇದ್ದಾರೆ. ಅವರಿಗೆ ಹೆಲ್ತ್ ಇನ್ಸಪೆಕ್ಟರ್ ಎಂದು ಕರೆಯಲಾಗುತ್ತಿದೆ. ಇವರಿಂದ ಮಂಗಳೂರಿನ ಬಂದರು ಏರಿಯಾ ಆಗಾಗ ಕಸದ ಕೊಂಪೆಯಾಗಿ ಬದಲಾಗುತ್ತಾ ಇರುತ್ತದೆ.

ಒಬ್ಬ ಹೆಲ್ತ್ ಇನ್ಸಪೆಕ್ಟರ್ ಕರ್ತವ್ಯ ಏನು?

ಪ್ರತಿ ಬಾರಿ ಈ ಏರಿಯಾದ ಕಾರ್ಮಿಕ ಸಂಘದವರು ಇಲ್ಲಿ ವಾರಗಟ್ಟಲೆ ತೆಗೆಯದ ಕಸದ ರಾಶಿಯ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಆಂಟೋನಿ ವೇಸ್ಟ್ ನವರು ಬಂದು ಕಸವನ್ನು ತೆಗೆದುಕೊಂಡು ಹೋಗುತ್ತಾರೆ. ಅಲ್ಲಿ ನಂತರ ಮತ್ತದೇ ಹಣೆ ಬರಹ. ಇದಕ್ಕೆ ಪರಿಹಾರ ಇಲ್ಲವೇ? ಇದೆ. ಪಾಲಿಕೆಯಲ್ಲಿ ಆರೋಗ್ಯ ವಿಭಾಗದಲ್ಲಿ ಈಗ ಇರುವ ಹೆಲ್ತ್ ಇನ್ಸಪೆಕ್ಟರ್ ಅವರನ್ನು ಇಡೀ ದಿನ ಈ ಕಸದ ರಾಶಿಯ ಮುಂದೆ ಕುಳ್ಳಿರಿಸಿ ಈ ಗಲೀಜು ವಾಸನೆ ಹೀರುವಂತೆ ಮಾಡುವುದು. ಆಗ ಅವರಿಗೆ ಬುದ್ಧಿ ಬರುತ್ತದೆ. ಇಲ್ಲದಿದ್ದರೆ ಬಂದರಿನ ಕಾರ್ಮಿಕರ, ವ್ಯಾಪಾರಿಗಳ, ನಾಗರಿಕರ ಕಷ್ಟ ಅವರಿಗೆ ಗೊತ್ತಾಗುವುದಿಲ್ಲ.
ಒಬ್ಬ ಹೆಲ್ತ್ ಇನ್ಸಪೆಕ್ಟರ್ ಕರ್ತವ್ಯ ಏನು? ಪಾಲಿಕೆಯ ಅರವತ್ತು ವಾರ್ಡುಗಳನ್ನು ತಲಾ ಇಂತಿಷ್ಟು ಎಂದು ಎಲ್ಲಾ ಹೆಲ್ತ್ ಇನ್ಸಪೆಕ್ಟರ್ ಗಳ ನಡುವೆ ಹಂಚಿಯಾಗಿದೆ. ಅವರು ಬೆಳಗ್ಗೆಯಿಂದ ಮಧ್ಯಾಹ್ನದ ತನಕ ಆಯಾ ವಾರ್ಡುಗಳಲ್ಲಿ ಸಂಚರಿಸಿ ಸ್ವಚ್ಚತೆಯನ್ನು ನೋಡಬೇಕಾಗುತ್ತದೆ. ಮಧ್ಯಾಹ್ನ ಊಟ ಮಾಡಿ 3 ಗಂಟೆಗೆ ಪಾಲಿಕೆಯ ಕಚೇರಿಗೆ ಬಂದು ಹೆಲ್ತ್ ಆಫೀಸರ್ ಅವರಿಗೆ ವರದಿ ನೀಡಬೇಕಾಗುತ್ತದೆ. ಇನ್ನು ಬಂದರು ಏರಿಯಾ ಪಕ್ಕಾ ಕಮರ್ಶಿಯಲ್. ಅಲ್ಲಿ ಮನೆಗಳಿಲ್ಲ. ಇನ್ನು ಇಲ್ಲಿನ ಅಂಗಡಿಯವರು ಟ್ರೇಡ್ ಲೈಸೆನ್ಸ್ ಮಾಡಿಸುವಾಗಲೇ ತ್ಯಾಜ್ಯದ ಶುಲ್ಕವನ್ನು ಅದರೊಂದಿಗೆ ಕಟ್ಟಿರುತ್ತಾರೆ. ಅಲ್ಲಿ ತ್ಯಾಜ್ಯದ ಒತ್ತಡ ಎಷ್ಟರಮಟ್ಟಿಗೆ ಇರುತ್ತದೆ ಎನ್ನುವ ಅಂದಾಜು ಹೆಲ್ತ್ ಆಫೀಸರ್ ಅವರಿಗಾದರೂ ಇರಲೇಬೇಕು. ಯಾರಿಗೂ ಈ ಬಗ್ಗೆ ಕ್ಯಾರೇ ಇಲ್ಲ ಎಂದ ಮೇಲೆ ಏನು ಮಾಡಬಹುದು?

ಪಾಲಿಕೆಯ ಅಧಿಕಾರಿಗಳಿಗೆ ಬುದ್ಧಿ ಬರುವುದು ಯಾವಾಗ?

ಅವರಿಗೆ ನೋಟಿಸು ಕೊಡಬೇಕು. ಹೆಲ್ತ್ ಇನ್ಸಪೆಕ್ಟರ್, ಪರಿಸರ ಅಭಿಯಂತರರಿಗೆ ನೋಟಿಸು ಕೊಟ್ಟು ಈ ನಿರ್ಲಕ್ಷ್ಯಕ್ಕೆ ಕಾರಣ ಕೇಳಬೇಕು.
ಇನ್ನು ಎಷ್ಟೋ ಏರಿಯಾಗಳಲ್ಲಿ ಮನೆಯ ಕಸಗಳನ್ನು ತೊಟ್ಟೆಯಲ್ಲಿ ಹಾಕಿ ರಸ್ತೆಬದಿ ಬಿಸಾಡಿಹೋಗುತ್ತಾರೆ. ಅಲ್ಲಿ ಕೂಡ ಹೆಲ್ತ್ ಇನ್ಸಪೆಕ್ಟರ್ ಹೋಗಿ ಅದರ ಬಗ್ಗೆ ಪರಿಶೀಲನೆ ನಡೆಸಬೇಕು. ಯಾಕೆ ಹಾಗೆ ಮಾಡಲಾಗುತ್ತಿದೆ ಎಂದು ವಿಚಾರಿಸಬೇಕು. ಏನಾದರೂ ದಂಡ ಹಾಕಬಹುದು ಎಂದು ಯಾರೂ ಮಾಹಿತಿ ಕೊಡಲು ಹೋಗುವುದಿಲ್ಲ. ಆದರೂ ಅಂತಹ ಘಟನೆ ಆಗದ ರೀತಿಯಲ್ಲಿ ನೋಡಿಕೊಳ್ಳಬೇಕು. ಇನ್ನು ಹಲವು ಕಡೆ ಸಿಸಿಟಿವಿ ಕ್ಯಾಮೆರಾಗಳು ಹಾಕಲ್ಪಟ್ಟಿವೆ. ಅಪಘಾತಗಳಾದಾಗ ಸಿಸಿಟಿವಿ ದೃಶ್ಯಗಳು ತಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತದೆ. ಅದೇ ರೀತಿಯಲ್ಲಿ ಈ ತ್ಯಾಜ್ಯ ಬಿಸಾಡಿ ಹೋಗುವವರದ್ದು ವಿಡಿಯೋ ನಾಲ್ಕು ಸಲ ವೈರಲ್ ಆದರೆ ನಂತರ ಅವರಿಗೂ ಬುದ್ಧಿ ಬರುತ್ತದೆ. ಆದರೆ ಪಾಲಿಕೆಯ ಅಧಿಕಾರಿಗಳಿಗೆ ಬುದ್ಧಿ ಬರುವುದು ಯಾವಾಗವೋ ದೇವರಿಗೆ ಗೊತ್ತು!!

 

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Hanumantha Kamath January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Hanumantha Kamath January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search