• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿಮ್ಮಲ್ಲಿರುವ 200 ರೂ ನೋಟ್ ಜೆರಾಕ್ಸಾ, ಒರಿಜಿನಲಾ ಚೆಕ್ ಮಾಡಿ!

Tulunadu News Posted On November 14, 2023
0


0
Shares
  • Share On Facebook
  • Tweet It

ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿ ನಕಲಿ ಕರೆನ್ಸಿ ನೋಟುಗಳು ಹೆಚ್ಚೆಚ್ಚು ಪತ್ತೆಯಾಗುತ್ತಿರುವುದು ಅಲ್ಲಿನ ವ್ಯಾಪಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಅಸಲಿ ನೋಟುಗಳ ನಡುವೆ ಕೆಲವು ನಕಲಿ ನೋಟುಗಳನ್ನು ಇಟ್ಟು ಯಾರಾದರೂ ನೀಡಿದರೆ ಗಡಿಬಿಡಿಯಲ್ಲಿ ಅದು ಗೊತ್ತೇ ಆಗುವುದಿಲ್ಲ, ನಂತರ ಬ್ಯಾಂಕಿನಲ್ಲಿಯೇ ಅದು ನಕಲಿ ಎಂದು ಗೊತ್ತಾಗುತ್ತೆ. ಇದರಿಂದ ಸಾಕಷ್ಟು ನಷ್ಟ ಸಂಭವಿಸುತ್ತದೆ ಎನ್ನುವುದು ವ್ಯಾಪಾರಿಗಳ ಅಳಲು. ವಿಶೇಷವಾಗಿ ನಗದು ರೂಪದಲ್ಲಿ ವ್ಯವಹಾರ ಮಾಡುವ ಸಣ್ಣ ವ್ಯಾಪಾರಿಗಳು ಈ ಹೊಸ ಟೆನ್ಷನ್ ಗೆ ಬಲಿಯಾಗುತ್ತಿದ್ದಾರೆ.

ಹಾಗಾದರೆ ಇದು ಹೇಗೆ ಸಾಧ್ಯ?

200 ರೂ ಮುಖಬೆಲೆಯ ನೋಟುಗಳನ್ನು ಯಾರಾದರೂ ಡೂಪ್ಲಿಕೇಟ್ ಮಾಡುತ್ತಿದ್ದಾರಾ? ಮೇಲ್ನೋಟಕ್ಕೆ ಇದು ಕಲರ್ ಝೆರಾಕ್ಸ್ ದಂಧೆ ನಡೆಯುತ್ತಿರುವ ಅನುಮಾನ ವ್ಯಕ್ತವಾಗಿದೆ. ನಕಲಿ ನೋಟುಗಳನ್ನು ಕಲರ್ ಝೆರಾಕ್ಸ್ ಮೂಲಕ ತಯಾರಿಸಿ ಅಡ್ಡದಾರಿಯಲ್ಲಿ ಸಣ್ಣ ಪ್ರಮಾಣದಲ್ಲಿ ಚಲಾವಣೆ ನಡೆಸುತ್ತಿರುವ ಅನುಮಾನಗಳು ಕಾಣುತ್ತಿವೆ. ನಕಲಿ ನೋಟುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಮಾತ್ರ ಅವುಗಳ ಅಸಲಿ ಬಣ್ಣ ಬಯಲಾಗುತ್ತದೆ. ಆದರೆ ಎಲ್ಲರ ಮೇಲೆ ಡೌಟಿನಿಂದ ನೋಡಲು ಸಾಧ್ಯವಾಗುವುದಿಲ್ಲ. ಇನ್ನು ಏಳೆಂಟು ಬೇರೆ ನೋಟುಗಳ ನಡುವೆ ಒಂದೆರಡು ಇಟ್ಟು ನೀಡುವಾಗ ಅತ್ತ ಅನುಮಾನ ಪಡಲು ಆಗದೇ, ಬಿಡಲು ಆಗದೇ ವ್ಯಾಪಾರಿಗಳು ಸಂಕಷ್ಟದಲ್ಲಿದ್ದಾರೆ. ಎರಡೂ ನೋಟುಗಳಿಗೂ ಇರುವ ಸುಲಭದ ವ್ಯತ್ಯಾಸ ಎಂದರೆ ನಕಲಿ ನೋಟುಗಳು ತುಂಬಾ ದಿನ ಬಾಳಿಕೆ ಬರಲ್ಲ. ಅವು ಬೇಗ ಮುದ್ದೆಯಾಗುತ್ತಿವೆ. ಇದು ರಾಯಚೂರಿಗೆ ಮಾತ್ರ ಸಂಬಂಧಪಟ್ಟ ವಿಚಾರ ಆಗಿರದೇ ಈ ಬಗ್ಗೆ ಎಲ್ಲರೂ ಜಾಗರೂಕತೆಯಿಂದ ಇರಬೇಕು ಎಂದು ತುಳುನಾಡು ನ್ಯೂಸ್ ಜನಜಾಗೃತಿಯಿಂದ ಈ ಮಾಹಿತಿ ನೀಡುತ್ತಿದೆ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search