• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿಮ್ಮಲ್ಲಿರುವ 200 ರೂ ನೋಟ್ ಜೆರಾಕ್ಸಾ, ಒರಿಜಿನಲಾ ಚೆಕ್ ಮಾಡಿ!

Tulunadu News Posted On November 14, 2023
0


0
Shares
  • Share On Facebook
  • Tweet It

ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿ ನಕಲಿ ಕರೆನ್ಸಿ ನೋಟುಗಳು ಹೆಚ್ಚೆಚ್ಚು ಪತ್ತೆಯಾಗುತ್ತಿರುವುದು ಅಲ್ಲಿನ ವ್ಯಾಪಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಅಸಲಿ ನೋಟುಗಳ ನಡುವೆ ಕೆಲವು ನಕಲಿ ನೋಟುಗಳನ್ನು ಇಟ್ಟು ಯಾರಾದರೂ ನೀಡಿದರೆ ಗಡಿಬಿಡಿಯಲ್ಲಿ ಅದು ಗೊತ್ತೇ ಆಗುವುದಿಲ್ಲ, ನಂತರ ಬ್ಯಾಂಕಿನಲ್ಲಿಯೇ ಅದು ನಕಲಿ ಎಂದು ಗೊತ್ತಾಗುತ್ತೆ. ಇದರಿಂದ ಸಾಕಷ್ಟು ನಷ್ಟ ಸಂಭವಿಸುತ್ತದೆ ಎನ್ನುವುದು ವ್ಯಾಪಾರಿಗಳ ಅಳಲು. ವಿಶೇಷವಾಗಿ ನಗದು ರೂಪದಲ್ಲಿ ವ್ಯವಹಾರ ಮಾಡುವ ಸಣ್ಣ ವ್ಯಾಪಾರಿಗಳು ಈ ಹೊಸ ಟೆನ್ಷನ್ ಗೆ ಬಲಿಯಾಗುತ್ತಿದ್ದಾರೆ.

ಹಾಗಾದರೆ ಇದು ಹೇಗೆ ಸಾಧ್ಯ?

200 ರೂ ಮುಖಬೆಲೆಯ ನೋಟುಗಳನ್ನು ಯಾರಾದರೂ ಡೂಪ್ಲಿಕೇಟ್ ಮಾಡುತ್ತಿದ್ದಾರಾ? ಮೇಲ್ನೋಟಕ್ಕೆ ಇದು ಕಲರ್ ಝೆರಾಕ್ಸ್ ದಂಧೆ ನಡೆಯುತ್ತಿರುವ ಅನುಮಾನ ವ್ಯಕ್ತವಾಗಿದೆ. ನಕಲಿ ನೋಟುಗಳನ್ನು ಕಲರ್ ಝೆರಾಕ್ಸ್ ಮೂಲಕ ತಯಾರಿಸಿ ಅಡ್ಡದಾರಿಯಲ್ಲಿ ಸಣ್ಣ ಪ್ರಮಾಣದಲ್ಲಿ ಚಲಾವಣೆ ನಡೆಸುತ್ತಿರುವ ಅನುಮಾನಗಳು ಕಾಣುತ್ತಿವೆ. ನಕಲಿ ನೋಟುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಮಾತ್ರ ಅವುಗಳ ಅಸಲಿ ಬಣ್ಣ ಬಯಲಾಗುತ್ತದೆ. ಆದರೆ ಎಲ್ಲರ ಮೇಲೆ ಡೌಟಿನಿಂದ ನೋಡಲು ಸಾಧ್ಯವಾಗುವುದಿಲ್ಲ. ಇನ್ನು ಏಳೆಂಟು ಬೇರೆ ನೋಟುಗಳ ನಡುವೆ ಒಂದೆರಡು ಇಟ್ಟು ನೀಡುವಾಗ ಅತ್ತ ಅನುಮಾನ ಪಡಲು ಆಗದೇ, ಬಿಡಲು ಆಗದೇ ವ್ಯಾಪಾರಿಗಳು ಸಂಕಷ್ಟದಲ್ಲಿದ್ದಾರೆ. ಎರಡೂ ನೋಟುಗಳಿಗೂ ಇರುವ ಸುಲಭದ ವ್ಯತ್ಯಾಸ ಎಂದರೆ ನಕಲಿ ನೋಟುಗಳು ತುಂಬಾ ದಿನ ಬಾಳಿಕೆ ಬರಲ್ಲ. ಅವು ಬೇಗ ಮುದ್ದೆಯಾಗುತ್ತಿವೆ. ಇದು ರಾಯಚೂರಿಗೆ ಮಾತ್ರ ಸಂಬಂಧಪಟ್ಟ ವಿಚಾರ ಆಗಿರದೇ ಈ ಬಗ್ಗೆ ಎಲ್ಲರೂ ಜಾಗರೂಕತೆಯಿಂದ ಇರಬೇಕು ಎಂದು ತುಳುನಾಡು ನ್ಯೂಸ್ ಜನಜಾಗೃತಿಯಿಂದ ಈ ಮಾಹಿತಿ ನೀಡುತ್ತಿದೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search