• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಿಮ್ಮಲ್ಲಿರುವ 200 ರೂ ನೋಟ್ ಜೆರಾಕ್ಸಾ, ಒರಿಜಿನಲಾ ಚೆಕ್ ಮಾಡಿ!

Tulunadu News Posted On November 14, 2023


  • Share On Facebook
  • Tweet It

ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿ ನಕಲಿ ಕರೆನ್ಸಿ ನೋಟುಗಳು ಹೆಚ್ಚೆಚ್ಚು ಪತ್ತೆಯಾಗುತ್ತಿರುವುದು ಅಲ್ಲಿನ ವ್ಯಾಪಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಅಸಲಿ ನೋಟುಗಳ ನಡುವೆ ಕೆಲವು ನಕಲಿ ನೋಟುಗಳನ್ನು ಇಟ್ಟು ಯಾರಾದರೂ ನೀಡಿದರೆ ಗಡಿಬಿಡಿಯಲ್ಲಿ ಅದು ಗೊತ್ತೇ ಆಗುವುದಿಲ್ಲ, ನಂತರ ಬ್ಯಾಂಕಿನಲ್ಲಿಯೇ ಅದು ನಕಲಿ ಎಂದು ಗೊತ್ತಾಗುತ್ತೆ. ಇದರಿಂದ ಸಾಕಷ್ಟು ನಷ್ಟ ಸಂಭವಿಸುತ್ತದೆ ಎನ್ನುವುದು ವ್ಯಾಪಾರಿಗಳ ಅಳಲು. ವಿಶೇಷವಾಗಿ ನಗದು ರೂಪದಲ್ಲಿ ವ್ಯವಹಾರ ಮಾಡುವ ಸಣ್ಣ ವ್ಯಾಪಾರಿಗಳು ಈ ಹೊಸ ಟೆನ್ಷನ್ ಗೆ ಬಲಿಯಾಗುತ್ತಿದ್ದಾರೆ.

ಹಾಗಾದರೆ ಇದು ಹೇಗೆ ಸಾಧ್ಯ?

200 ರೂ ಮುಖಬೆಲೆಯ ನೋಟುಗಳನ್ನು ಯಾರಾದರೂ ಡೂಪ್ಲಿಕೇಟ್ ಮಾಡುತ್ತಿದ್ದಾರಾ? ಮೇಲ್ನೋಟಕ್ಕೆ ಇದು ಕಲರ್ ಝೆರಾಕ್ಸ್ ದಂಧೆ ನಡೆಯುತ್ತಿರುವ ಅನುಮಾನ ವ್ಯಕ್ತವಾಗಿದೆ. ನಕಲಿ ನೋಟುಗಳನ್ನು ಕಲರ್ ಝೆರಾಕ್ಸ್ ಮೂಲಕ ತಯಾರಿಸಿ ಅಡ್ಡದಾರಿಯಲ್ಲಿ ಸಣ್ಣ ಪ್ರಮಾಣದಲ್ಲಿ ಚಲಾವಣೆ ನಡೆಸುತ್ತಿರುವ ಅನುಮಾನಗಳು ಕಾಣುತ್ತಿವೆ. ನಕಲಿ ನೋಟುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಮಾತ್ರ ಅವುಗಳ ಅಸಲಿ ಬಣ್ಣ ಬಯಲಾಗುತ್ತದೆ. ಆದರೆ ಎಲ್ಲರ ಮೇಲೆ ಡೌಟಿನಿಂದ ನೋಡಲು ಸಾಧ್ಯವಾಗುವುದಿಲ್ಲ. ಇನ್ನು ಏಳೆಂಟು ಬೇರೆ ನೋಟುಗಳ ನಡುವೆ ಒಂದೆರಡು ಇಟ್ಟು ನೀಡುವಾಗ ಅತ್ತ ಅನುಮಾನ ಪಡಲು ಆಗದೇ, ಬಿಡಲು ಆಗದೇ ವ್ಯಾಪಾರಿಗಳು ಸಂಕಷ್ಟದಲ್ಲಿದ್ದಾರೆ. ಎರಡೂ ನೋಟುಗಳಿಗೂ ಇರುವ ಸುಲಭದ ವ್ಯತ್ಯಾಸ ಎಂದರೆ ನಕಲಿ ನೋಟುಗಳು ತುಂಬಾ ದಿನ ಬಾಳಿಕೆ ಬರಲ್ಲ. ಅವು ಬೇಗ ಮುದ್ದೆಯಾಗುತ್ತಿವೆ. ಇದು ರಾಯಚೂರಿಗೆ ಮಾತ್ರ ಸಂಬಂಧಪಟ್ಟ ವಿಚಾರ ಆಗಿರದೇ ಈ ಬಗ್ಗೆ ಎಲ್ಲರೂ ಜಾಗರೂಕತೆಯಿಂದ ಇರಬೇಕು ಎಂದು ತುಳುನಾಡು ನ್ಯೂಸ್ ಜನಜಾಗೃತಿಯಿಂದ ಈ ಮಾಹಿತಿ ನೀಡುತ್ತಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search