• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾಯಿ ಕಚ್ಚಿದರೆ 10 ಸಾವಿರ ಪರಿಹಾರಕ್ಕೆ ಹೈಕೋರ್ಟ್ ಆದೇಶ!

Tulunadu News Posted On November 15, 2023
0


0
Shares
  • Share On Facebook
  • Tweet It

ಇನ್ನು ಮುಂದೆ ಮನುಷ್ಯರಿಗೆ ನಾಯಿ ಕಚ್ಚಿದರೆ ಕನಿಷ್ಟ ಹತ್ತು ಸಾವಿರ ರೂಪಾಯಿಗಳನ್ನು ರಾಜ್ಯ ಸರಕಾರ ಪರಿಹಾರ ಮೊತ್ತವಾಗಿ ನೀಡಬೇಕು ಎನ್ನುವ ಆದೇಶವನ್ನು ಪಂಜಾಬ್ – ಹರ್ಯಾಯ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಿದ್ದು, ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ಆದೇಶ ನೀಡಬೇಕು ಎಂದು ಹೈಕೋರ್ಟ್ ನಲ್ಲಿ ಒಟ್ಟು 193 ದಾವೆಗಳು ಹೂಡಲ್ಪಟ್ಟಿದ್ದವು. ಈ ಬಗ್ಗೆ ತಮ್ಮ ತೀರ್ಪಿನಲ್ಲಿ ಅಂಶಗಳನ್ನು ಉಲ್ಲೇಖಿಸಿರುವ ನ್ಯಾಯಮೂರ್ತಿ ವಿನೋದ್ ಎಸ್ ಭಾರದ್ವಾಜ್ ಅವರು ” ಬೀದಿ ನಾಯಿಗಳ ಕಾಟದ ಬಗ್ಗೆ ದೊಡ್ಡ ಪ್ರಮಾಣದಲ್ಲಿ ಪ್ರಕರಣಗಳು ನ್ಯಾಯಾಲಯದ ಮುಂದೆ ದಾಖಲಿಸ್ಪಡುತ್ತಿದ್ದರೂ ರಾಜ್ಯ ಸರಕಾರಗಳು ಕಣ್ಣು ಮುಚ್ಚಿ ಕುಳಿತುಕೊಂಡಿರುವುದು ಸರಿಯಲ್ಲ. ಪ್ರಕರಣದ ಬಗ್ಗೆ ಮುಖ ತಿರುಗಿಸಿ ಕುಳಿತುಕೊಂಡರೆ ಪ್ರಕರಣ ನಡೆದಿಲ್ಲ ಎಂದು ಅರ್ಥ ಅಲ್ಲ. ಜನರ ಆಕ್ರೋಶವನ್ನು ತಣಿಸಲು ರಾಜ್ಯ ಸರಕಾರ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು” ಎಂದು ತಿಳಿಸಿದೆ.
ನಾಯಿ ಕಚ್ಚಿದಾಗ ಅದರ ಹಲ್ಲಿನ ಗುರುತು ದೇಹದಲ್ಲಿ ಕಂಡುಬಂದರೆ ಕನಿಷ್ಟ 10000 ಸಾವಿರ ರೂಪಾಯಿ ಹಾಗೂ ಚರ್ಮದಿಂದ ಮಾಂಸ ಕಿತ್ತು ಬಂದರೆ 20000 ರೂಪಾಯಿ ಪರಿಹಾರ ನೀಡಬೇಕಾಗುತ್ತದೆ.

ಕನಿಷ್ಟ 2 ಸೆಂಟಿ ಮೀಟರ್ ಆಳದ ಗಾಯದಿಂದ ಆರಂಭವಾಗಿ ಗಾಯದ ಗಂಭೀರತೆಯ ಮೇಲೆ ಇದು ಅವಲಂಬಿತವಾಗಿ ಪರಿಹಾರ ಹೆಚ್ಚುತ್ತಾ ಹೋಗುತ್ತದೆ.

ಪರಿಹಾರವನ್ನು ನೀಡುವ ಜವಾಬ್ದಾರಿ ಸರಕಾರದಾಗಿದೆ. ಒಂದು ವೇಳೆ ತಪ್ಪು ಖಾಸಗಿ ಸಂಸ್ಥೆಗಳಿಂದ ನಡೆದರೆ ಸರಕಾರ ಸಂಬಂಧಪಟ್ಟವರಿಂದ ದಂಡದ ಮೊತ್ತ ವಸೂಲಿ ಮಾಡಬಹುದು ಎಂದು ನ್ಯಾಯಪೀಠ ತಿಳಿಸಿದೆ. ಒಟ್ಟಿನಲ್ಲಿ ಸಂತ್ರಸ್ತರಿಗೆ ಅನ್ಯಾಯವಾಗಬಾರದು ಎನ್ನುವುದು ಎಲ್ಲರ ನಿಲುವು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search