• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುಟ್ಟುಹಬ್ಬಕ್ಕೆ ಗಿಫ್ಟ್ ಬೇಡಾ, ಆರ್ಥಿಕ ಸಹಾಯ ನೀಡಿ ಎಂದ ತೇಜಸ್ವಿ ಸೂರ್ಯ!

Tulunadu News Posted On November 15, 2023
0


0
Shares
  • Share On Facebook
  • Tweet It

ನವೆಂಬರ್ 16 ರಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ, ಭಾರತೀಯ ಯುವಮೊರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರ 33ನೇ ಹುಟ್ಟುಹಬ್ಬ. ಈ ಬಗ್ಗೆ ‘ಎಕ್ಸ್’ ನಲ್ಲಿ ಮಾತನಾಡಿರುವ ತೇಜಸ್ವಿ ಸೂರ್ಯ ಅವರು ತಮ್ಮ ಜನ್ಮದಿನದಂದು ತಮ್ಮನ್ನು ವೈಯಕ್ತಿಕವಾಗಿ ಭೇಟಿಯಾಗಿ ಶುಭಾಶಯ ತಿಳಿಸಲು ಬರಬಹುದೇ ಎಂದು ಅನೇಕರು ವಿಚಾರಿಸುತ್ತಿದ್ದಾರೆ. ನಾನು ಹುಟ್ಟುಹಬ್ಬ ಆಚರಿಸುವ ಬಗ್ಗೆ ವಿಶೇಷವಾದ ಒಲವು ಹೊಂದಿರುವುದಿಲ್ಲ. ಆದರೆ ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಚಿರ ಋಣಿ ಎಂದು ತಿಳಿಸಿದ್ದಾರೆ. ತಾವು ಬೆಳಿಗ್ಗೆ 10 ಗಂಟೆಯಿಂದ 3.30 ರ ತನಕ ಕಚೇರಿಯಲ್ಲಿ ಇರುವುದಾಗಿ ತಿಳಿಸಿರುವ ತೇಜಸ್ವಿ ಸೂರ್ಯ ಅವರು ನಿಮ್ಮ ಆಗಮನವನ್ನು ಎದುರುಗೊಳ್ಳುತ್ತೇನೆ, ಆದರೆ ಅದರೊಂದಿಗೆ ನನ್ನ ಒಂದು ಸಣ್ಣ ಮನವಿ ಇದೆ ಎಂದು ತಿಳಿಸಿದ್ದಾರೆ.
ಶುಭಾಶಯ ಕೋರಲು ಆಗಮಿಸುವ ಪಕ್ಷದ ಮುಖಂಡರು, ಕಾರ್ಯಕರ್ತರು, ನಾಗರಿಕರು ಯಾವುದೇ ಗಿಫ್ಟ್ ತರುವುದು ಬೇಡಾ ಎಂದು ಅವರು ವಿನಂತಿಸಿದ್ದಾರೆ. ಅದರ ಬದಲು ನಮೋವಿದ್ಯಾನಿಧಿ ಯೋಜನೆಗೆ ಆರ್ಥಿಕ ನೆರವನ್ನು ನೀಡಲು ಮನವಿ ಮಾಡುವುದಾಗಿ ಅವರು ತಿಳಿಸಿದ್ದಾರೆ. ಈ ನಿಧಿಯಲ್ಲಿ ಸಂಗ್ರಹವಾದ ಹಣದಿಂದ ಇಲ್ಲಿಯ ತನಕ 2000 ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿ ವೃಂದಕ್ಕೆ ಸಹಾಯ ಮಾಡಲು ತಾವು ಶಕ್ತರಾಗಿದ್ದು, ಅವರ ಫೀಸ್ ಗಳನ್ನು ಭರಿಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಈ ಮಹತ್ತರ ಯೋಜನೆಯಿಂದ ಮಕ್ಕಳ ಭವಿಷ್ಯ ಉಜ್ವಲವಾಗಲಿದ್ದು, ಫೀಸ್ ಕಟ್ಟುವ ಅವರ ಸವಾಲು ಈಡೇರುತ್ತದೆ. ಅದಕ್ಕಾಗಿ ನಮೋವಿದ್ಯಾನಿಧಿ ದೊಡ್ಡ ಪಾತ್ರ ವಹಿಸಿದೆ ಎಂದು ಅವರು ಹೇಳಿದ್ದಾರೆ.
ಭರ್ತಡೇ ಗಿಫ್ಟ್ ನೀಡುವ ಬದಲು ನಿಮ್ಮ ಶಕ್ತಾನುಸಾರ ಈ ನಿಧಿಗೆ ಸಹಾಯ ಮಾಡಿದರೆ ಉತ್ತಮ. ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ನೀಡಿದರೆ ಅದು ದೂರಗಾಮಿ ಪರಿಣಾಮ ನೀಡುತ್ತದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದ ಎಂದು ಸಂಸದ ತೇಜಸ್ವಿ ಸೂರ್ಯ ಎಕ್ಸ್ ನಲ್ಲಿ ವಿಡಿಯೋ ಮಾಡಿ ಅಪಲೋಡ್ ಮಾಡಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search