• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಅಶೋಕ್ ವಿಪಕ್ಷ ನಾಯಕರಾಗಿ ಆಯ್ಕೆ

Tulunadu News Posted On November 18, 2023
0


0
Shares
  • Share On Facebook
  • Tweet It

ಅಶೋಕ್ ವಿಪಕ್ಷ ನಾಯಕರಾಗಿ ಆಯ್ಕೆ
ಕರ್ನಾಟಕದ ವಿಧಾನಸಭಾ ಪ್ರತಿಪಕ್ಷ ನಾಯಕರಾಗಿ ಪದ್ಮನಾಭನಗರದ ಶಾಸಕ ಆರ್ ಅಶೋಕ್ ಆಯ್ಕೆಯಾಗಿದ್ದಾರೆ. ಅಶೋಕ್ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದು, ಇದೇ ಸಮುದಾಯದ ಯಾರಾದರೂ ವಿಪಕ್ಷ ನಾಯಕರಾಗಿ ಆಯ್ಕೆಯಾಗುವ ಅನಿವಾರ್ಯತೆ ಇತ್ತು. ಯಾಕೆಂದರೆ ರಾಜ್ಯದ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರಾಗಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಆಯ್ಕೆಯಾಗಿದ್ದಾರೆ. ಬಿಜೆಪಿಯ ಹೈಕಮಾಂಡ್ ಅಳೆದು ತೂಗಿ ಅರು ತಿಂಗಳ ಬಳಿಕ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಿದೆ. ವಿಜಯೇಂದ್ರ ಪ್ರಬಲ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಮತ್ತೊಂದು ಪ್ರಬಲ ಒಕ್ಕಲಿಗ ಸಮುದಾಯದ ಶಾಸಕ ವಿಪಕ್ಷ ನಾಯಕನಾಗಿ ಆಯ್ಕೆಯಾಗಬೇಕಿತ್ತು. ರೇಸಿನಲ್ಲಿ ಅಶೋಕ್, ಅಶ್ವಥ್ ನಾರಾಯಣ್, ಬಸವನಗೌಡ ಪಾಟೀಲ್ ಯತ್ನಾಳ್, ಸುನೀಲ್ ಕುಮಾರ್, ಬೆಲ್ಲದ ಹೀಗೆ ಹಲವು ನಾಯಕರು ಇದ್ದರು. ಅಂತಿಮವಾಗಿ ಆರ್ ಅಶೋಕ್ ಅವರಿಗೆ ಈ ಅವಕಾಶ ಸಿಕ್ಕಿದೆ.
ಇದಕ್ಕೆ ಮುಖ್ಯ ಕಾರಣ ಅವರು ಜಾತ್ಯಾತೀತ ಜನತಾದಳದೊಂದಿಗೆ ಹೊಂದಿಕೊಂಡು ಹೋಗಬಹುದು ಎನ್ನುವ ವಿಶ್ವಾಸ ಒಂದು ಕಡೆಯಾದರೆ ಇನ್ನೊಂದು ಕಡೆ ಅವರ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಆಪ್ತರು ಎನ್ನುವುದು ಅವರ ಪ್ಲಸ್ ಪಾಯಿಂಟ್ ಕೂಡ ಆಗಿದೆ. ಇನ್ನು ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಒಕ್ಕಲಿಗರ ವಿಶ್ವಾಸವನ್ನು ಎಚ್ ಡಿ ಕುಮಾರಸ್ವಾಮಿ ಗಳಿಸಿಕೊಂಡರೆ, ನಗರ ಪ್ರದೇಶದ ಒಕ್ಕಲಿಗರ ಭರವಸೆಯನ್ನು ಅಶೋಕ್ ಗಳಿಸಿಕೊಳ್ಳುವ ವಿಶ್ವಾಸ ರಾಷ್ಟ್ರೀಯ ಬಿಜೆಪಿ ನಾಯಕರುಗಳಿಗೆ ಇದೆ. ಆದ್ದರಿಂದ ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಆರ್. ಅಶೋಕ್ ಅವರನ್ನು ವಿಪಕ್ಷ ನಾಯಕರನ್ನಾಗಿ ನೇಮಿಸಲಾಗಿದೆ. ಏನೇ ಆಗಲಿ, ಸದ್ಯ ಬಿಜೆಪಿಯೊಳಗಿರುವ ಬಣಗಳು ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ಸ್ಥಾನಕ್ಕೆ ಆಯ್ಕೆಗೊಂಡಿರುವ ಇಬ್ಬರು ನಾಯಕರ ಬಗ್ಗೆ ಹೇಗೆ ನಡೆದುಕೊಳ್ಳುತ್ತವೆ ಎನ್ನುವುದೇ ಸದ್ಯ ಕುತೂಹಲ!
0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search