• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಅಶೋಕ್ ವಿಪಕ್ಷ ನಾಯಕರಾಗಿ ಆಯ್ಕೆ

Tulunadu News Posted On November 18, 2023
0


0
Shares
  • Share On Facebook
  • Tweet It

ಅಶೋಕ್ ವಿಪಕ್ಷ ನಾಯಕರಾಗಿ ಆಯ್ಕೆ
ಕರ್ನಾಟಕದ ವಿಧಾನಸಭಾ ಪ್ರತಿಪಕ್ಷ ನಾಯಕರಾಗಿ ಪದ್ಮನಾಭನಗರದ ಶಾಸಕ ಆರ್ ಅಶೋಕ್ ಆಯ್ಕೆಯಾಗಿದ್ದಾರೆ. ಅಶೋಕ್ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದು, ಇದೇ ಸಮುದಾಯದ ಯಾರಾದರೂ ವಿಪಕ್ಷ ನಾಯಕರಾಗಿ ಆಯ್ಕೆಯಾಗುವ ಅನಿವಾರ್ಯತೆ ಇತ್ತು. ಯಾಕೆಂದರೆ ರಾಜ್ಯದ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರಾಗಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಆಯ್ಕೆಯಾಗಿದ್ದಾರೆ. ಬಿಜೆಪಿಯ ಹೈಕಮಾಂಡ್ ಅಳೆದು ತೂಗಿ ಅರು ತಿಂಗಳ ಬಳಿಕ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಿದೆ. ವಿಜಯೇಂದ್ರ ಪ್ರಬಲ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಮತ್ತೊಂದು ಪ್ರಬಲ ಒಕ್ಕಲಿಗ ಸಮುದಾಯದ ಶಾಸಕ ವಿಪಕ್ಷ ನಾಯಕನಾಗಿ ಆಯ್ಕೆಯಾಗಬೇಕಿತ್ತು. ರೇಸಿನಲ್ಲಿ ಅಶೋಕ್, ಅಶ್ವಥ್ ನಾರಾಯಣ್, ಬಸವನಗೌಡ ಪಾಟೀಲ್ ಯತ್ನಾಳ್, ಸುನೀಲ್ ಕುಮಾರ್, ಬೆಲ್ಲದ ಹೀಗೆ ಹಲವು ನಾಯಕರು ಇದ್ದರು. ಅಂತಿಮವಾಗಿ ಆರ್ ಅಶೋಕ್ ಅವರಿಗೆ ಈ ಅವಕಾಶ ಸಿಕ್ಕಿದೆ.
ಇದಕ್ಕೆ ಮುಖ್ಯ ಕಾರಣ ಅವರು ಜಾತ್ಯಾತೀತ ಜನತಾದಳದೊಂದಿಗೆ ಹೊಂದಿಕೊಂಡು ಹೋಗಬಹುದು ಎನ್ನುವ ವಿಶ್ವಾಸ ಒಂದು ಕಡೆಯಾದರೆ ಇನ್ನೊಂದು ಕಡೆ ಅವರ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಆಪ್ತರು ಎನ್ನುವುದು ಅವರ ಪ್ಲಸ್ ಪಾಯಿಂಟ್ ಕೂಡ ಆಗಿದೆ. ಇನ್ನು ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಒಕ್ಕಲಿಗರ ವಿಶ್ವಾಸವನ್ನು ಎಚ್ ಡಿ ಕುಮಾರಸ್ವಾಮಿ ಗಳಿಸಿಕೊಂಡರೆ, ನಗರ ಪ್ರದೇಶದ ಒಕ್ಕಲಿಗರ ಭರವಸೆಯನ್ನು ಅಶೋಕ್ ಗಳಿಸಿಕೊಳ್ಳುವ ವಿಶ್ವಾಸ ರಾಷ್ಟ್ರೀಯ ಬಿಜೆಪಿ ನಾಯಕರುಗಳಿಗೆ ಇದೆ. ಆದ್ದರಿಂದ ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಆರ್. ಅಶೋಕ್ ಅವರನ್ನು ವಿಪಕ್ಷ ನಾಯಕರನ್ನಾಗಿ ನೇಮಿಸಲಾಗಿದೆ. ಏನೇ ಆಗಲಿ, ಸದ್ಯ ಬಿಜೆಪಿಯೊಳಗಿರುವ ಬಣಗಳು ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ಸ್ಥಾನಕ್ಕೆ ಆಯ್ಕೆಗೊಂಡಿರುವ ಇಬ್ಬರು ನಾಯಕರ ಬಗ್ಗೆ ಹೇಗೆ ನಡೆದುಕೊಳ್ಳುತ್ತವೆ ಎನ್ನುವುದೇ ಸದ್ಯ ಕುತೂಹಲ!
0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search