• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಲೋ ಅಪ್ಪಾ ಸಂಭಾಷಣೆಗೆ ಮತ್ತೊಂದು ಟ್ವಿಸ್ಟ್!

Tulunadu News Posted On November 18, 2023
0


0
Shares
  • Share On Facebook
  • Tweet It

ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪುತ್ರ ಡಾ.ಯತೀಂದ್ರ ಅವರು ಮೊನ್ನೆಯಷ್ಟೇ ಫೋನಿನಲ್ಲಿ ಮಾತನಾಡಿದ ಆಡಿಯೋ ಮತ್ತು ವಿಡಿಯೋ ಮಾಧ್ಯಮಗಳಲ್ಲಿ ಲೀಕ್ ಆಗಿ ವಿಪಕ್ಷಗಳಿಗೆ ದೊಡ್ಡ ಮಟ್ಟದ ಆಹಾರವಾಗಿತ್ತು. ಯತೀಂದ್ರ ಮಾತನಾಡುತ್ತಿದ್ದದ್ದು ಅಧಿಕಾರಿಗಳ ವರ್ಗಾವಣೆ ದಂಧೆಯ ವಿಷಯ ಎಂದು ವಿಪಕ್ಷಗಳು ಹೇಳಿದರೆ ಸಿಎಂ ಸಿದ್ಧರಾಮಯ್ಯ ಅದರಲ್ಲಿ ವರ್ಗಾವಣೆ ವಿಷಯ ಮಾತನಾಡಿದ್ದಾರಾ? ಹಣದ ವಿಷಯ ಮಾತನಾಡಿದ್ದಾರಾ? ಎಂದು ತಿರುಗೇಟು ನೀಡಿದ್ದರು.

ಯತೀಂದ್ರ ಅವರು ಮಾತನಾಡುವಾಗ ಮಹದೇವ್ ಎನ್ನುವ ಹೆಸರು ತೆಗೆದಿದ್ದು ತಾನು ಹೇಳಿದ ಪಟ್ಟಿಗೆ ಮಾತ್ರ ತಂದೆಯಿಂದ ಸಹಿ ಹಾಕಿಸಬೇಕು ಎಂದು ಮಹದೇವ್ ಅವರಿಗೆ ಖಡಕ್ ಸೂಚನೆ ನೀಡಿದ್ದರು. ಅದರಲ್ಲಿ ಯತೀಂದ್ರ ಅವರ ಬಾಯಿಂದ ವಿವೇಕಾನಂದ ಎನ್ನುವ ಹೆಸರು ಬಂದಿದ್ದು, ಅವರನ್ನು ಎಲ್ಲಿಗೆ ಎಂದು ಇವರು ಕೇಳಿರುವುದು ಕೂಡ ಮಾಧ್ಯಮಗಳ ಕ್ಯಾಮೆರಾಗಳಿಗೆ ಕೇಳಿಸಿದೆ. ಇದನ್ನೆಲ್ಲಾ ಸಾರಾಸಗಟಾಗಿ ನಿರಾಕರಿಸಿರುವ ಸಿದ್ಧರಾಮಯ್ಯನವರು ಅದೆಲ್ಲಾ ವಿಪಕ್ಷಗಳ ಕಪೋಲಕಲ್ಪಿತ ಆರೋಪ ಎಂದಿದ್ದರು.

ಆದರೆ ಈಗ ಪೊಲೀಸ್ ಇನ್ಸಪೆಕ್ಟರ್ ಗಳ ವರ್ಗಾವಣೆ ಆದೇಶ ಹೊರಬಿದ್ದಿದ್ದು ಅದರಲ್ಲಿ ವಿವೇಕಾನಂದ ಎನ್ನುವವರಿಗೆ ಮೈಸೂರು ನಗರದ ವಿವಿ ಪುರಂ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಅವರು ಹಿಂದೆ ರಾಜ್ಯ ಗುಪ್ತವಾರ್ತೆ ವಿಭಾಗದಲ್ಲಿದ್ದರು. ಒಂದು ಕಡೆ ಕಾಂಗ್ರೆಸ್ ಯತೀಂದ್ರ ಅವರು ಸಾರ್ವಜನಿಕವಾಗಿ ಫೋನಿನಲ್ಲಿ ಮಾತನಾಡುವಾಗ ವಿವೇಕಾನಂದ ಹೆಸರು ತೆಗೆದಿರುವುದು ಮತ್ತು ತಾವು ಹೇಳಿದ ಪಟ್ಟಿಗೆ ಮಾತ್ರ ತಂದೆಯಿಂದ ಸಹಿ ತೆಗೆದುಕೊಳ್ಳಿ ಎಂದು ಸಿಎಂ ವಿಶೇಷ ಕರ್ತವ್ಯ ಅಧಿಕಾರಿಗೆ ಸೂಚಿಸಿರುವುದು ಮತ್ತು ನವೆಂಬರ್ 17 ರಂದು ಬಿಡುಗಡೆಯಾಗಿರುವ ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದ ಎನ್ನುವವರಿಗೆ ವರ್ಗಾವಣೆ ಆಗಿರುವುದನ್ನು ನೋಡುವಾಗ ಸಿಎಂ ಪುತ್ರನೇ ವರ್ಗಾವಣೆ ವಿಷಯದಲ್ಲಿ ನೇರ ಭಾಗಿಯಾಗಿದ್ದಾರಾ ಎನ್ನುವ ಅನುಮಾನಗಳು ಮತ್ತಷ್ಟು ಗಟ್ಟಿಯಾಗಿದೆ ಎಂದು ವಿಪಕ್ಷಗಳ ಮುಖಂಡರು ಮಾಧ್ಯಮಗಳಲ್ಲಿ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search