• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಲೋ ಅಪ್ಪಾ ಸಂಭಾಷಣೆಗೆ ಮತ್ತೊಂದು ಟ್ವಿಸ್ಟ್!

Tulunadu News Posted On November 18, 2023
0


0
Shares
  • Share On Facebook
  • Tweet It

ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪುತ್ರ ಡಾ.ಯತೀಂದ್ರ ಅವರು ಮೊನ್ನೆಯಷ್ಟೇ ಫೋನಿನಲ್ಲಿ ಮಾತನಾಡಿದ ಆಡಿಯೋ ಮತ್ತು ವಿಡಿಯೋ ಮಾಧ್ಯಮಗಳಲ್ಲಿ ಲೀಕ್ ಆಗಿ ವಿಪಕ್ಷಗಳಿಗೆ ದೊಡ್ಡ ಮಟ್ಟದ ಆಹಾರವಾಗಿತ್ತು. ಯತೀಂದ್ರ ಮಾತನಾಡುತ್ತಿದ್ದದ್ದು ಅಧಿಕಾರಿಗಳ ವರ್ಗಾವಣೆ ದಂಧೆಯ ವಿಷಯ ಎಂದು ವಿಪಕ್ಷಗಳು ಹೇಳಿದರೆ ಸಿಎಂ ಸಿದ್ಧರಾಮಯ್ಯ ಅದರಲ್ಲಿ ವರ್ಗಾವಣೆ ವಿಷಯ ಮಾತನಾಡಿದ್ದಾರಾ? ಹಣದ ವಿಷಯ ಮಾತನಾಡಿದ್ದಾರಾ? ಎಂದು ತಿರುಗೇಟು ನೀಡಿದ್ದರು.

ಯತೀಂದ್ರ ಅವರು ಮಾತನಾಡುವಾಗ ಮಹದೇವ್ ಎನ್ನುವ ಹೆಸರು ತೆಗೆದಿದ್ದು ತಾನು ಹೇಳಿದ ಪಟ್ಟಿಗೆ ಮಾತ್ರ ತಂದೆಯಿಂದ ಸಹಿ ಹಾಕಿಸಬೇಕು ಎಂದು ಮಹದೇವ್ ಅವರಿಗೆ ಖಡಕ್ ಸೂಚನೆ ನೀಡಿದ್ದರು. ಅದರಲ್ಲಿ ಯತೀಂದ್ರ ಅವರ ಬಾಯಿಂದ ವಿವೇಕಾನಂದ ಎನ್ನುವ ಹೆಸರು ಬಂದಿದ್ದು, ಅವರನ್ನು ಎಲ್ಲಿಗೆ ಎಂದು ಇವರು ಕೇಳಿರುವುದು ಕೂಡ ಮಾಧ್ಯಮಗಳ ಕ್ಯಾಮೆರಾಗಳಿಗೆ ಕೇಳಿಸಿದೆ. ಇದನ್ನೆಲ್ಲಾ ಸಾರಾಸಗಟಾಗಿ ನಿರಾಕರಿಸಿರುವ ಸಿದ್ಧರಾಮಯ್ಯನವರು ಅದೆಲ್ಲಾ ವಿಪಕ್ಷಗಳ ಕಪೋಲಕಲ್ಪಿತ ಆರೋಪ ಎಂದಿದ್ದರು.

ಆದರೆ ಈಗ ಪೊಲೀಸ್ ಇನ್ಸಪೆಕ್ಟರ್ ಗಳ ವರ್ಗಾವಣೆ ಆದೇಶ ಹೊರಬಿದ್ದಿದ್ದು ಅದರಲ್ಲಿ ವಿವೇಕಾನಂದ ಎನ್ನುವವರಿಗೆ ಮೈಸೂರು ನಗರದ ವಿವಿ ಪುರಂ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಅವರು ಹಿಂದೆ ರಾಜ್ಯ ಗುಪ್ತವಾರ್ತೆ ವಿಭಾಗದಲ್ಲಿದ್ದರು. ಒಂದು ಕಡೆ ಕಾಂಗ್ರೆಸ್ ಯತೀಂದ್ರ ಅವರು ಸಾರ್ವಜನಿಕವಾಗಿ ಫೋನಿನಲ್ಲಿ ಮಾತನಾಡುವಾಗ ವಿವೇಕಾನಂದ ಹೆಸರು ತೆಗೆದಿರುವುದು ಮತ್ತು ತಾವು ಹೇಳಿದ ಪಟ್ಟಿಗೆ ಮಾತ್ರ ತಂದೆಯಿಂದ ಸಹಿ ತೆಗೆದುಕೊಳ್ಳಿ ಎಂದು ಸಿಎಂ ವಿಶೇಷ ಕರ್ತವ್ಯ ಅಧಿಕಾರಿಗೆ ಸೂಚಿಸಿರುವುದು ಮತ್ತು ನವೆಂಬರ್ 17 ರಂದು ಬಿಡುಗಡೆಯಾಗಿರುವ ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದ ಎನ್ನುವವರಿಗೆ ವರ್ಗಾವಣೆ ಆಗಿರುವುದನ್ನು ನೋಡುವಾಗ ಸಿಎಂ ಪುತ್ರನೇ ವರ್ಗಾವಣೆ ವಿಷಯದಲ್ಲಿ ನೇರ ಭಾಗಿಯಾಗಿದ್ದಾರಾ ಎನ್ನುವ ಅನುಮಾನಗಳು ಮತ್ತಷ್ಟು ಗಟ್ಟಿಯಾಗಿದೆ ಎಂದು ವಿಪಕ್ಷಗಳ ಮುಖಂಡರು ಮಾಧ್ಯಮಗಳಲ್ಲಿ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search