• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ಮುಂದೆ ವೆಯ್ಟಿಂಗ್ ಲಿಸ್ಟ್ ಇರದಂತೆ ರೈಲ್ವೆ ಇಲಾಖೆ ಪ್ಲಾನ್!

Tulunadu News Posted On November 18, 2023
0


0
Shares
  • Share On Facebook
  • Tweet It

ಮುಂದಿನ 4 -5 ವರ್ಷಗಳಲ್ಲಿ ವೆಯ್ಟಿಂಗ್ ಲಿಸ್ಟ್ ಇರದಂತೆ ನೋಡಿಕೊಳ್ಳಲು ರೈಲ್ವೆ ಇಲಾಖೆ ಯೋಜನೆ ಹಾಕಿಕೊಂಡಿದೆ. ಎಲ್ಲರಿಗೂ ಕನ್ಫರ್ಮ್ ಟಿಕೆಟ್ ಕೊಡಲು ಏನು ಮಾಡಬೇಕೋ ಅದನ್ನು ಮಾಡುವ ಪ್ಲಾನ್ ನಡೆಯುತ್ತಿದೆ. ಭಾರತದಲ್ಲಿ ರೈಲ್ವೆಯಲ್ಲಿ ಹೊಸ ಕ್ರಾಂತಿ ಶುರುವಾಗಿದೆ. ರೈಲುಗಳ ವೇಗ ಮತ್ತು ಹಳಿಗಳನ್ನು ಸುಧಾರಿಸುವ ಯೋಜನೆಗಳು ಚಾಲ್ತಿಯಲ್ಲಿವೆ. ರೈಲ್ವೆ ಜಾಲ ವಿಸ್ತರಣೆಗಾಗಿ 5 ವರ್ಷಗಳ ಯೋಜನೆ ಸಿದ್ಧಪಡಿಸಲಾಗಿದೆ. ಪ್ರಸ್ತುತ ಭಾರತೀಯ ರೈಲ್ವೆ 5000 ಹೊಸ ಬೋಗಿಗಳನ್ನು ತಯಾರಿಸುತ್ತಿದೆ. ರೈಲ್ವೆ ಪ್ರಯಾಣಿಕರ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, ಮುಂದಿನ 4-5 ವರ್ಷಗಳಲ್ಲಿ ದೇಶಾದ್ಯಂತ 3000 ಹೊಸ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ರೈಲ್ವೆಯು ಪ್ರತಿ ವರ್ಷ ಸುಮಾರು 250 ಹೊಸ ರೈಲುಗಳನ್ನು ಓಡಿಸುವ ಚಿಂತನೆ ನಡೆದಿದೆ. ಇದರೊಂದಿಗೆ ವಂದೇ ಭಾರತ್ ಹೊಸ ರೈಲುಗಳನ್ನು ಕೂಡ ಸೇರಿಸಿದರೆ ಆ ಸಂಖ್ಯೆ ಹೆಚ್ಚಾಗುತ್ತದೆ. ಮುಂಬರುವ ದಿನಗಳಲ್ಲಿ 400 – 450 ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ಸಿಗಲಿದೆ. ಹೈಸ್ಪೀಡ್ ರೈಲಿನ ಕನಸನ್ನು ಈಡೇರಿಸುವಲ್ಲಿ ವಂದೇ ಭಾರತ್ ರೈಲು ಯಶಸ್ವಿಯಾಗಿದೆ. ಈ ರೈಲುಗಳನ್ನು ಹೆಚ್ಚಿಸಲು ರೈಲ್ವೆ ಇಲಾಖೆ ಯೋಜನೆ ಹಾಕಿಕೊಂಡಿದೆ.

ವಾರ್ಷಿಕವಾಗಿ 800 ಕೋಟಿ ಪ್ರಯಾಣಿಕರ ಸಂಖ್ಯೆಯನ್ನು 1000 ಕೋಟಿಗೆ ಏರಿಸುವ ಗುರಿಯನ್ನು ಇಲಾಖೆ ಹೊಂದಿದೆ. ಪ್ರಸ್ತುತ ನಿತ್ಯ 10,748 ರೈಲುಗಳು ದೇಶದಲ್ಲಿ ಸಂಚರಿಸುತ್ತಿದ್ದು, 13000ಕ್ಕೆ ಏರಿಸಲು ಇಲಾಖೆ ಗುರಿ ಇಟ್ಟುಕೊಂಡಿದೆ. ವಂದೇ ಭಾರತ್ ರೈಲುಗಳಲ್ಲಿ ವೇಗವರ್ಧನೆ ಮತ್ತು ಬ್ರೇಕಿಂಗ್ ತಂತ್ರಜ್ಞಾನವು ಸಾಮಾನ್ಯ ರೈಲುಗಳಿಗಿಂತ ನಾಲ್ಕು ಪಟ್ಟು ಉತ್ತಮವಾಗಿದೆ. ಇದರಿಂದ ಪ್ರಯಾಣದ ಸಮಯ ಕೂಡ ಕಡಿಮೆಯಾಗಿದೆ. ಹೊಸ ತಂತ್ರಜ್ಞಾನವನ್ನು ರೈಲುಗಳಲ್ಲಿಯೂ ಅಳವಡಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search