• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ಮುಂದೆ ವೆಯ್ಟಿಂಗ್ ಲಿಸ್ಟ್ ಇರದಂತೆ ರೈಲ್ವೆ ಇಲಾಖೆ ಪ್ಲಾನ್!

Tulunadu News Posted On November 18, 2023
0


0
Shares
  • Share On Facebook
  • Tweet It

ಮುಂದಿನ 4 -5 ವರ್ಷಗಳಲ್ಲಿ ವೆಯ್ಟಿಂಗ್ ಲಿಸ್ಟ್ ಇರದಂತೆ ನೋಡಿಕೊಳ್ಳಲು ರೈಲ್ವೆ ಇಲಾಖೆ ಯೋಜನೆ ಹಾಕಿಕೊಂಡಿದೆ. ಎಲ್ಲರಿಗೂ ಕನ್ಫರ್ಮ್ ಟಿಕೆಟ್ ಕೊಡಲು ಏನು ಮಾಡಬೇಕೋ ಅದನ್ನು ಮಾಡುವ ಪ್ಲಾನ್ ನಡೆಯುತ್ತಿದೆ. ಭಾರತದಲ್ಲಿ ರೈಲ್ವೆಯಲ್ಲಿ ಹೊಸ ಕ್ರಾಂತಿ ಶುರುವಾಗಿದೆ. ರೈಲುಗಳ ವೇಗ ಮತ್ತು ಹಳಿಗಳನ್ನು ಸುಧಾರಿಸುವ ಯೋಜನೆಗಳು ಚಾಲ್ತಿಯಲ್ಲಿವೆ. ರೈಲ್ವೆ ಜಾಲ ವಿಸ್ತರಣೆಗಾಗಿ 5 ವರ್ಷಗಳ ಯೋಜನೆ ಸಿದ್ಧಪಡಿಸಲಾಗಿದೆ. ಪ್ರಸ್ತುತ ಭಾರತೀಯ ರೈಲ್ವೆ 5000 ಹೊಸ ಬೋಗಿಗಳನ್ನು ತಯಾರಿಸುತ್ತಿದೆ. ರೈಲ್ವೆ ಪ್ರಯಾಣಿಕರ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, ಮುಂದಿನ 4-5 ವರ್ಷಗಳಲ್ಲಿ ದೇಶಾದ್ಯಂತ 3000 ಹೊಸ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ರೈಲ್ವೆಯು ಪ್ರತಿ ವರ್ಷ ಸುಮಾರು 250 ಹೊಸ ರೈಲುಗಳನ್ನು ಓಡಿಸುವ ಚಿಂತನೆ ನಡೆದಿದೆ. ಇದರೊಂದಿಗೆ ವಂದೇ ಭಾರತ್ ಹೊಸ ರೈಲುಗಳನ್ನು ಕೂಡ ಸೇರಿಸಿದರೆ ಆ ಸಂಖ್ಯೆ ಹೆಚ್ಚಾಗುತ್ತದೆ. ಮುಂಬರುವ ದಿನಗಳಲ್ಲಿ 400 – 450 ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ಸಿಗಲಿದೆ. ಹೈಸ್ಪೀಡ್ ರೈಲಿನ ಕನಸನ್ನು ಈಡೇರಿಸುವಲ್ಲಿ ವಂದೇ ಭಾರತ್ ರೈಲು ಯಶಸ್ವಿಯಾಗಿದೆ. ಈ ರೈಲುಗಳನ್ನು ಹೆಚ್ಚಿಸಲು ರೈಲ್ವೆ ಇಲಾಖೆ ಯೋಜನೆ ಹಾಕಿಕೊಂಡಿದೆ.

ವಾರ್ಷಿಕವಾಗಿ 800 ಕೋಟಿ ಪ್ರಯಾಣಿಕರ ಸಂಖ್ಯೆಯನ್ನು 1000 ಕೋಟಿಗೆ ಏರಿಸುವ ಗುರಿಯನ್ನು ಇಲಾಖೆ ಹೊಂದಿದೆ. ಪ್ರಸ್ತುತ ನಿತ್ಯ 10,748 ರೈಲುಗಳು ದೇಶದಲ್ಲಿ ಸಂಚರಿಸುತ್ತಿದ್ದು, 13000ಕ್ಕೆ ಏರಿಸಲು ಇಲಾಖೆ ಗುರಿ ಇಟ್ಟುಕೊಂಡಿದೆ. ವಂದೇ ಭಾರತ್ ರೈಲುಗಳಲ್ಲಿ ವೇಗವರ್ಧನೆ ಮತ್ತು ಬ್ರೇಕಿಂಗ್ ತಂತ್ರಜ್ಞಾನವು ಸಾಮಾನ್ಯ ರೈಲುಗಳಿಗಿಂತ ನಾಲ್ಕು ಪಟ್ಟು ಉತ್ತಮವಾಗಿದೆ. ಇದರಿಂದ ಪ್ರಯಾಣದ ಸಮಯ ಕೂಡ ಕಡಿಮೆಯಾಗಿದೆ. ಹೊಸ ತಂತ್ರಜ್ಞಾನವನ್ನು ರೈಲುಗಳಲ್ಲಿಯೂ ಅಳವಡಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search