• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಾರ್ನ್ ಹಾಕಿದರೆ ದಂಡ ಕಟ್ಟಲು ತಯಾರಾಗಿ!

Tulunadu News Posted On November 21, 2023


  • Share On Facebook
  • Tweet It

ಮಂಗಳೂರು ನಗರ ದಿನೇ ದಿನೇ ಬೆಳೆಯುತ್ತಿದ್ದಂತೆ ಇಲ್ಲಿ ವಾಹನಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಯಾವಾಗ ವಾಹನಗಳು ಹೆಚ್ಚಾಗುತ್ತಾ ಹೋಗುತ್ತದೆಯೋ ಟ್ರಾಫಿಕ್ ಜಾಮ್ ಕೂಡ ಅದರೊಂದಿಗೆ ಸೈಡ್ ಎಫೆಕ್ಟ್ ಆಗಿ ಬಂದುಬಿಡುತ್ತದೆ. ಟ್ರಾಫಿಕ್ ಜಾಮ್ ನೊಂದಿಗೆ ಉಚಿತವಾಗಿ ಬರುವುದು ಹಾರ್ನ್ ಗಳ ಕರ್ಕಶ ಶಬ್ದಗಳು. ಇದರಿಂದ ತಲೆ ಚಿಟ್ಟು ಹಿಡಿಯುವುದು ಮಾತ್ರ ಬಾಕಿ. ಸಾಮಾನ್ಯ ಜನರಿಗೆ ಇದನ್ನು ಸಹಿಸುವುದು ಕಷ್ಟವಾಗುವುದಾದರೆ ಆಸ್ಪತ್ರೆಗಳ ರೋಗಿಗಳು, ಶಾಲಾ ಕಾಲೇಜುಗಳಲ್ಲಿ ತರಗತಿಯಲ್ಲಿ ಪಾಠ ಕಲಿಯುತ್ತಿರುವ ವಿದ್ಯಾರ್ಥಿಗಳು, ಸರಕಾರಿ ಕಚೇರಿಗಳಲ್ಲಿ ಕೆಲಸ ನಿರ್ವಹಣೆಯ ಸಂದರ್ಭದಲ್ಲಿ ಶಬ್ದಮಾಲಿನ್ಯವನ್ನು ತಡೆಗಟ್ಟುವ ಸಲುವಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಮಂಗಳೂರು ನಗರದ ಪ್ರಮುಖ ಆರು ಪ್ರದೇಶಗಳನ್ನು ಹಾರ್ನ್ ನಿಷೇಧಿತ ಪ್ರದೇಶ ( ನೋ ಹಾರ್ನ್ ಝೋನ್) ಎಂದು ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಅವರು ಘೋಷಿಸಿದ್ದಾರೆ.

ಘೋಷಿತ ಪ್ರದೇಶಗಳು ಯಾವುದೆಂದರೆ: 1. ಲೇಡಿಗೋಶನ್ ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶ: ರಾವ್ ಆಂಡ್ ರಾವ್ ಸರ್ಕಲ್ ಸಮೀಪದ ಮೈದಾನದ ಮೂರನೇ ಅಡ್ಡರಸ್ತೆಯಿಂದ ಲೇಡಿಗೋಶನ್ ಆಸ್ಪತ್ರೆವರೆಗೆ. ಲೇಡಿಗೋಶನ್ ಆಸ್ಪತ್ರೆಯಿಂದ ಕ್ಲಾಕ್ ಟವರ್ ವರೆಗೆ: ಲೇಡಿಗೋಶನ್ ಆಸ್ಪತ್ರೆಯಿಂದ ಕಲ್ಪನಾ ಸ್ವೀಟ್ಸ್ ವರೆಗೆ.

2. ಹಂಪನಕಟ್ಟೆ ಜಂಕ್ಷನ್: ಹಂಪನಕಟ್ಟೆ ಜಂಕ್ಷನ್ ನಿಂದ ಮಿಲಾಗ್ರಿಸ್ ಚರ್ಚ್ ವರೆಗಿನ ಪ್ರದೇಶ. ಮಿಲಾಗ್ರಿಸ್ ಚರ್ಚ್ ಬಳಿಯ ವೆನಲಾಕ್ ಆಸ್ಪತ್ರೆ ಗೇಟಿನಿಂದ ಮುತ್ತಪ್ಪ ಗುಡಿಯವರೆಗೆ. ಹಂಪನಕಟ್ಟೆ ಜಂಕ್ಷನ್ ನಿಂದ ಮಿನಿ ವಿಧಾನಸೌಧ ಕಟ್ಟಡದವರೆಗೆ.

3. ಡಾ. ಅಂಬೇಡ್ಕರ್ ವೃತ್ತದ ಪ್ರದೇಶ: ಅಂಬೇಡ್ಕರ್ ವೃತ್ತದಿಂದ ಬಲ್ಮಠ ಜಂಕ್ಷನ್ ಕಡೆಗೆ 50ಮೀ ಪ್ರದೇಶ. ಅಂಬೇಡ್ಕರ್ ವೃತ್ತದಿಂದ ಬಂಟ್ಸ್ ಹಾಸ್ಟೆಲ್ ವೃತ್ತದ ಕಡೆಗೆ 50 ಮೀ ಪ್ರದೇಶ. ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆ ವೃತ್ತದ ಕಡೆಗೆ 50 ಮೀಟರ್ ಪ್ರದೇಶ. ಬಾವುಟಗುಡ್ಡೆ ( ಮಹಿಳಾ ಸಭಾ ಕಟ್ಟಡ) ದಿಂದ ಅಂಬೇಡ್ಕರ್ ವೃತ್ತದವರೆಗೆ.

4. ಅತ್ತಾವರ ಕೆಎಂಸಿ ಆಸ್ಪತ್ರೆಯ ಉತ್ತರ ಬದಿಯ ಕಂಪೌಂಡ್ ಸಮೀಪದಿಂದ ಬಿಷಪ್ ವಿಕ್ಟರ್ (ಅತ್ತಾವರ ನ್ಯೂ ರೋಡ್) ತಿರುವಿನವರೆಗೆ

5. ದೇರಳಕಟ್ಟೆ ಯೆನೆಪೋಯ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀ ಪ್ರದೇಶ.

6. ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಎದುರಿನ ರಸ್ತೆಯಲ್ಲಿ 100 ಮೀ ಪ್ರದೇಶ. ವಾಹನ ಚಾಲಕರು ಈ ಆರು ಮೇಲ್ಕಂಡ ಸ್ಥಳಗಳಲ್ಲಿ ವಾಹನಗಳ ಹಾರ್ನ್ ಬಳಸುವುದನ್ನು ನಿಷೇಧಿಸಲಾಗಿದೆ.
ಭಾರತೀಯ ಮೋಟಾರು ವಾಹನ ಅಧಿನಿಯಮ (ತಿದ್ದುಪಡಿ) 2019 ರ ಕಲಾಂ 194 (ಎಫ್) ರಂತೆ ಹಾರ್ನ್ ನಿಷೇಧಿಸಿದ ಸಂಚಾರ ಸೂಚನಾ ಫಲಕ ಇರುವ ಪ್ರದೇಶದಲ್ಲಿ ಹಾರ್ನ್ ಬಳಸಿದ್ದಲ್ಲಿ ಅಂತಹ ವಾಹನ ಚಾಲಕರ ಮೇಲೆ ಮೊದಲನೆಯ ಉಲ್ಲಂಘನೆಗೆ 1000 ರೂ ದಂಡವನ್ನು ಹಾಗೂ ಎರಡನೇಯ ಹಾಗೂ ತದನಂತರದ ಪ್ರತಿ ಉಲ್ಲಂಘನೆಗೆ 2000 ರೂ ದಂಡವನ್ನು ವಿಧಿಸಲಾಗುವುದು.

  • Share On Facebook
  • Tweet It


- Advertisement -


Trending Now
ಮಾಹುಅ ಮೊಯಿತ್ರಾ ಅವರಿಗೆ ಸಿಕ್ಕಿಬೀಳಲ್ಲ ಎಂಬ ಧೈರ್ಯ ಇತ್ತಾ?
Tulunadu News December 9, 2023
ಪಾಲಕ್ಕಾಡಿನಲ್ಲಿ ನಡೆಯಿತು ರೈಲ್ವೆ ಬಳಕೆದಾರರ ಸಭೆ!
Tulunadu News December 8, 2023
Leave A Reply

  • Recent Posts

    • ಮಾಹುಅ ಮೊಯಿತ್ರಾ ಅವರಿಗೆ ಸಿಕ್ಕಿಬೀಳಲ್ಲ ಎಂಬ ಧೈರ್ಯ ಇತ್ತಾ?
    • ಪಾಲಕ್ಕಾಡಿನಲ್ಲಿ ನಡೆಯಿತು ರೈಲ್ವೆ ಬಳಕೆದಾರರ ಸಭೆ!
    • ಕೆಮ್ಮಿನ ಸಿರಫ್ ಎಂದು ಬಿಯರ್ ಮಾರಿ 42 ಕೋಟಿ ಸಂಪಾದನೆ!
    • ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
  • Popular Posts

    • 1
      ಮಾಹುಅ ಮೊಯಿತ್ರಾ ಅವರಿಗೆ ಸಿಕ್ಕಿಬೀಳಲ್ಲ ಎಂಬ ಧೈರ್ಯ ಇತ್ತಾ?
    • 2
      ಪಾಲಕ್ಕಾಡಿನಲ್ಲಿ ನಡೆಯಿತು ರೈಲ್ವೆ ಬಳಕೆದಾರರ ಸಭೆ!
    • 3
      ಕೆಮ್ಮಿನ ಸಿರಫ್ ಎಂದು ಬಿಯರ್ ಮಾರಿ 42 ಕೋಟಿ ಸಂಪಾದನೆ!
    • 4
      ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 5
      9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search