• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಾಂಧಿ ಕುಟುಂಬದ ಭರ್ತಡೇ ದಿನ ಕ್ರಿಕೆಟ್ ಮ್ಯಾಚ್ ಇದ್ರೆ ಭಾರತ ಸೋಲುತ್ತೆ – ಅಸ್ಸಾಂ ಸಿಎಂ

Tulunadu News Posted On November 24, 2023
0


0
Shares
  • Share On Facebook
  • Tweet It

ಕ್ರೀಡಾಂಗಣದಲ್ಲಿ ಅಪಶಕುನ ಇದ್ದ ಕಾರಣ ಭಾರತ ವಿಶ್ವಕಪ್ ಫೈನಲ್ ಸೋಲುವಂತಾಯಿತು ಎಂದು ಕಾಂಗ್ರೆಸ್ ವಯನಾಡು ಸಂಸದ ರಾಹುಲ್ ಗಾಂಧಿ ಹೇಳಿದ ನಂತರ ಅದಕ್ಕೆ ಭಾರತೀಯ ಜನತಾ ಪಾರ್ಟಿಯ ಮುಖಂಡರು ಮತ್ತು ಮೋದಿ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದರಲ್ಲಿಯೂ ಗಾಂಧಿ ಕುಟುಂಬ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಮಾಡುವ ಯಾವುದೇ ಆರೋಪ, ವ್ಯಂಗ್ಯ, ಟೀಕೆಗಳಿಗೆ ತೀಕ್ಣ ಪ್ರತಿಕ್ರಿಯೆ ನೀಡುವ ಅಸ್ಸಾಂ ಮುಖ್ಯಮಂತ್ರಿ ಹೀಮಂತ ಬಿಸ್ವಾ ಸರ್ಮಾ ಅವರು ಇಂದಿರಾ ಗಾಂಧಿಯವರ ಜಯಂತಿಯಂದು ಪಂದ್ಯ ನಡೆದ ಕಾರಣ ಭಾರತ ಸೋಲುವಂತಾಗಿದೆ. ಆದ್ದರಿಂದ ಗಾಂಧಿ ಕುಟುಂಬದ ಯಾವುದೇ ವ್ಯಕ್ತಿಯ ಜನ್ಮದಿನದಂದು ಯಾವುದೇ ದೊಡ್ಡ ಪಂದ್ಯವನ್ನು ಆಯೋಜಿಸಬೇಡಿ ಎಂದು ತಾನು ಬಿಸಿಸಿಐಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ತಮ್ಮ ಹೇಳಿಕೆಯನ್ನು ಪುಷ್ಟೀಕರಿಸಿ ಮಾತನಾಡಿರುವ ಅವರು ಭಾರತ ಮತ್ತು ಆಸ್ಟ್ರೇಲಿಯಾ ಫೈನಲ್ ಪಂದ್ಯಾಟದ ದಿನ ಪ್ರಿಯಾಂಕಾ ವಾದ್ರಾ ತೆಲಂಗಾಣದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿ ಜನರನ್ನು ಉದ್ದೇಶಿಸಿ 1983 ರಲ್ಲಿ ಭಾರತ ಗೆದ್ದಾಗ ಇಂದಿರಾಗಾಂಧಿ ಪ್ರಧಾನಿಯಾಗಿದ್ದರು. ಇವತ್ತು ಇಂದಿರಾ ಗಾಂಧಿ ಜನ್ಮದಿನ ಭಾರತ ಗೆಲ್ಲುತ್ತೆ ಎಂದು ಭವಿಷ್ಯ ನುಡಿದ್ದಿದ್ದರು. ಆದರೆ ಭಾರತ ಸೋತಿದೆ. ಇಂದಿರಾಗಾಂಧಿಯವರ ಹುಟ್ಟಿದ ದಿನದಂದು ಭಾರತ ಸೋತಿರುವುದನ್ನು ಮರೆಮಾಚಲು ರಾಹುಲ್ ಗಾಂಧಿ ಈ ಸೋಲಿಗೆ ಕಾರಣ ಹುಡುಕಿದ್ದಾರೆ ಎಂದು ಅಸ್ಸಾಂ ಸಿಎಂ ಹೇಳಿದ್ದಾರೆ. ಒಟ್ಟಿನಲ್ಲಿ ಗಾಂಧಿ ಕುಟುಂಬದ ಯಾರದ್ದೇ ಹುಟ್ಟಿದ ದಿನದಂದು ಪಂದ್ಯ ಇಟ್ಟರೆ ಅದು ಭಾರತಕ್ಕೆ ಅಪಶಕುನ ಎಂದು ಸರ್ಮಾ ನೇರವಾಗಿ ಗಾಂಧಿ ಪರಿವಾರವನ್ನು ಕುಟುಕಿದ್ದಾರೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search