• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಾಂಧಿ ಕುಟುಂಬದ ಭರ್ತಡೇ ದಿನ ಕ್ರಿಕೆಟ್ ಮ್ಯಾಚ್ ಇದ್ರೆ ಭಾರತ ಸೋಲುತ್ತೆ – ಅಸ್ಸಾಂ ಸಿಎಂ

Tulunadu News Posted On November 24, 2023
0


0
Shares
  • Share On Facebook
  • Tweet It

ಕ್ರೀಡಾಂಗಣದಲ್ಲಿ ಅಪಶಕುನ ಇದ್ದ ಕಾರಣ ಭಾರತ ವಿಶ್ವಕಪ್ ಫೈನಲ್ ಸೋಲುವಂತಾಯಿತು ಎಂದು ಕಾಂಗ್ರೆಸ್ ವಯನಾಡು ಸಂಸದ ರಾಹುಲ್ ಗಾಂಧಿ ಹೇಳಿದ ನಂತರ ಅದಕ್ಕೆ ಭಾರತೀಯ ಜನತಾ ಪಾರ್ಟಿಯ ಮುಖಂಡರು ಮತ್ತು ಮೋದಿ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದರಲ್ಲಿಯೂ ಗಾಂಧಿ ಕುಟುಂಬ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಮಾಡುವ ಯಾವುದೇ ಆರೋಪ, ವ್ಯಂಗ್ಯ, ಟೀಕೆಗಳಿಗೆ ತೀಕ್ಣ ಪ್ರತಿಕ್ರಿಯೆ ನೀಡುವ ಅಸ್ಸಾಂ ಮುಖ್ಯಮಂತ್ರಿ ಹೀಮಂತ ಬಿಸ್ವಾ ಸರ್ಮಾ ಅವರು ಇಂದಿರಾ ಗಾಂಧಿಯವರ ಜಯಂತಿಯಂದು ಪಂದ್ಯ ನಡೆದ ಕಾರಣ ಭಾರತ ಸೋಲುವಂತಾಗಿದೆ. ಆದ್ದರಿಂದ ಗಾಂಧಿ ಕುಟುಂಬದ ಯಾವುದೇ ವ್ಯಕ್ತಿಯ ಜನ್ಮದಿನದಂದು ಯಾವುದೇ ದೊಡ್ಡ ಪಂದ್ಯವನ್ನು ಆಯೋಜಿಸಬೇಡಿ ಎಂದು ತಾನು ಬಿಸಿಸಿಐಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ತಮ್ಮ ಹೇಳಿಕೆಯನ್ನು ಪುಷ್ಟೀಕರಿಸಿ ಮಾತನಾಡಿರುವ ಅವರು ಭಾರತ ಮತ್ತು ಆಸ್ಟ್ರೇಲಿಯಾ ಫೈನಲ್ ಪಂದ್ಯಾಟದ ದಿನ ಪ್ರಿಯಾಂಕಾ ವಾದ್ರಾ ತೆಲಂಗಾಣದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿ ಜನರನ್ನು ಉದ್ದೇಶಿಸಿ 1983 ರಲ್ಲಿ ಭಾರತ ಗೆದ್ದಾಗ ಇಂದಿರಾಗಾಂಧಿ ಪ್ರಧಾನಿಯಾಗಿದ್ದರು. ಇವತ್ತು ಇಂದಿರಾ ಗಾಂಧಿ ಜನ್ಮದಿನ ಭಾರತ ಗೆಲ್ಲುತ್ತೆ ಎಂದು ಭವಿಷ್ಯ ನುಡಿದ್ದಿದ್ದರು. ಆದರೆ ಭಾರತ ಸೋತಿದೆ. ಇಂದಿರಾಗಾಂಧಿಯವರ ಹುಟ್ಟಿದ ದಿನದಂದು ಭಾರತ ಸೋತಿರುವುದನ್ನು ಮರೆಮಾಚಲು ರಾಹುಲ್ ಗಾಂಧಿ ಈ ಸೋಲಿಗೆ ಕಾರಣ ಹುಡುಕಿದ್ದಾರೆ ಎಂದು ಅಸ್ಸಾಂ ಸಿಎಂ ಹೇಳಿದ್ದಾರೆ. ಒಟ್ಟಿನಲ್ಲಿ ಗಾಂಧಿ ಕುಟುಂಬದ ಯಾರದ್ದೇ ಹುಟ್ಟಿದ ದಿನದಂದು ಪಂದ್ಯ ಇಟ್ಟರೆ ಅದು ಭಾರತಕ್ಕೆ ಅಪಶಕುನ ಎಂದು ಸರ್ಮಾ ನೇರವಾಗಿ ಗಾಂಧಿ ಪರಿವಾರವನ್ನು ಕುಟುಕಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search