• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?

Tulunadu News Posted On November 28, 2023
0


0
Shares
  • Share On Facebook
  • Tweet It

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂಭತ್ತು ಸಾವಿರಕ್ಕೂ ಅಧಿಕ ನಾಡದೋಣಿಗಳಿವೆ. 30 ಸಾವಿರದಷ್ಟು ಜನರು ಮೀನುಗಾರಿಕೆಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ.
ಉಡುಪಿಯಲ್ಲಿ 1600 ಕ್ಕೂ ಹೆಚ್ಚಿನ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಾವಿರಕ್ಕೂ ಅಧಿಕ ಆಳಸಮುದ್ರ ಬೋಟ್ ಗಳಿವೆ. ಇದರಿಂದ ಸಾವಿರಾರು ಕುಟುಂಬಗಳಿಗೆ ಮೀನುಗಾರಿಕೆ ಆಸರೆಯಾಗಿದೆ.

ಆದರೆ ಈ ಬಾರಿ ಮೀನುಗಾರಿಕೆ ಋತುವಿನಲ್ಲಿಯೇ ಮೀನುಗಾರರು ಸಂಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಅದಕ್ಕೆ ಮುಖ್ಯ ಕಾರಣ ಏನು ಎನ್ನುವುದನ್ನು ನೋಡಿಕೊಂಡು ಬರೋಣ.
ಮೀನುಗಾರಿಕಾ ಋತುವಿನ ಆರಂಭದಲ್ಲಿ ಭಾರೀ ಮಳೆ, ಚಂಡಮಾರುತದಿಂದಾಗಿ ಮೀನುಗಾರಿಕೆಗೆ ಅಡ್ಡಿಯಾಗಿತ್ತು. ಸದ್ಯ ಮೀನುಗಾರಿಕೆಗೆ ಪೂರಕ ವಾತಾವರಣವಿದ್ದರೂ ಮತ್ಸ್ಯಕ್ಷಾಮದಿಂದಾಗಿ ಮೀನೆ ಸಿಗದ ವಾತಾವರಣ ಸೃಷ್ಟಿಯಾಗಿದೆ.

ಹವಾಮಾನ ವೈಪರೀತ್ಯ, ಅವೈಜ್ಞಾನಿಕ ಮತ್ಸ್ಯಬೇಟೆ, ಅವ್ಯಾಹತವಾಗಿ ನಡೆಯುತ್ತಿರುವ ಲೈಟ್ ಫಿಶಿಂಗ್ ನಿಂದಾಗಿ ವರ್ಷದಿಂದ ವರ್ಷಕ್ಕೆ ಮೀನಿನ ಸಂತತಿ ನಶಿಸಿ ಮತ್ಸ್ಯಕ್ಷಾಮ ಹೆಚ್ಚುತ್ತಿದೆ. ಇದು ಕರಾವಳಿಯ ಮೀನುಗಾರಿಕಾ ವಲಯದ ಜತೆಗೆ ಆರ್ಥಿಕತೆಗೂ ಪೆಟ್ಟು ಕೊಡುತ್ತಿದೆ. ಅಗಸ್ಟ್ ನಿಂದ ಡಿಸೆಂಬರ್ ಅವಧಿಯಲ್ಲಿ ಮಂಗಳೂರು, ಮಲ್ಪೆ, ಗಂಗೊಳ್ಳಿ, ಮರವಂತೆ, ಭಟ್ಕಳ, ಕಾರವಾರದಲ್ಲಿ ಉತ್ತಮ ಮೀನುಗಾರಿಕೆ ನಡೆಯುತ್ತಿತ್ತು. ಆದರೆ ಈ ಬಾರಿ ಅಲ್ಪಪ್ರಮಾಣದ ಬಂಗುಡೆ ಬಿಟ್ಟರೆ ಬೂತಾಯಿ, ಅಂಜಲ್, ಪಾಂಪ್ಲೆಟ್ ತೀರಾ ವಿರಳವಾಗಿದೆ. ಬಿಳಿ ಅಂಜಲ್ ಅಪರೂಪದಲ್ಲಿ ಅಪರೂಪವಾಗಿದೆ. ಹೇರಳ ಮೀನು ಸಿಗದೇ ಇರುವುದರಿಂದ ಮೀನು ಮಾರುಕಟ್ಟೆಯಲ್ಲಿ ಮೀನಿನ ದರವೂ ಹೆಚ್ಚಳವಾಗಿದ್ದು, ಮತ್ಯ್ಥ ಪ್ರಿಯರ ಜೇಬಿಗೆ ಕನ್ನ ಹಾಕಿದೆ!

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search