• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?

Tulunadu News Posted On November 28, 2023
0


0
Shares
  • Share On Facebook
  • Tweet It

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂಭತ್ತು ಸಾವಿರಕ್ಕೂ ಅಧಿಕ ನಾಡದೋಣಿಗಳಿವೆ. 30 ಸಾವಿರದಷ್ಟು ಜನರು ಮೀನುಗಾರಿಕೆಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದಾರೆ.
ಉಡುಪಿಯಲ್ಲಿ 1600 ಕ್ಕೂ ಹೆಚ್ಚಿನ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಾವಿರಕ್ಕೂ ಅಧಿಕ ಆಳಸಮುದ್ರ ಬೋಟ್ ಗಳಿವೆ. ಇದರಿಂದ ಸಾವಿರಾರು ಕುಟುಂಬಗಳಿಗೆ ಮೀನುಗಾರಿಕೆ ಆಸರೆಯಾಗಿದೆ.

ಆದರೆ ಈ ಬಾರಿ ಮೀನುಗಾರಿಕೆ ಋತುವಿನಲ್ಲಿಯೇ ಮೀನುಗಾರರು ಸಂಕಷ್ಟಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಅದಕ್ಕೆ ಮುಖ್ಯ ಕಾರಣ ಏನು ಎನ್ನುವುದನ್ನು ನೋಡಿಕೊಂಡು ಬರೋಣ.
ಮೀನುಗಾರಿಕಾ ಋತುವಿನ ಆರಂಭದಲ್ಲಿ ಭಾರೀ ಮಳೆ, ಚಂಡಮಾರುತದಿಂದಾಗಿ ಮೀನುಗಾರಿಕೆಗೆ ಅಡ್ಡಿಯಾಗಿತ್ತು. ಸದ್ಯ ಮೀನುಗಾರಿಕೆಗೆ ಪೂರಕ ವಾತಾವರಣವಿದ್ದರೂ ಮತ್ಸ್ಯಕ್ಷಾಮದಿಂದಾಗಿ ಮೀನೆ ಸಿಗದ ವಾತಾವರಣ ಸೃಷ್ಟಿಯಾಗಿದೆ.

ಹವಾಮಾನ ವೈಪರೀತ್ಯ, ಅವೈಜ್ಞಾನಿಕ ಮತ್ಸ್ಯಬೇಟೆ, ಅವ್ಯಾಹತವಾಗಿ ನಡೆಯುತ್ತಿರುವ ಲೈಟ್ ಫಿಶಿಂಗ್ ನಿಂದಾಗಿ ವರ್ಷದಿಂದ ವರ್ಷಕ್ಕೆ ಮೀನಿನ ಸಂತತಿ ನಶಿಸಿ ಮತ್ಸ್ಯಕ್ಷಾಮ ಹೆಚ್ಚುತ್ತಿದೆ. ಇದು ಕರಾವಳಿಯ ಮೀನುಗಾರಿಕಾ ವಲಯದ ಜತೆಗೆ ಆರ್ಥಿಕತೆಗೂ ಪೆಟ್ಟು ಕೊಡುತ್ತಿದೆ. ಅಗಸ್ಟ್ ನಿಂದ ಡಿಸೆಂಬರ್ ಅವಧಿಯಲ್ಲಿ ಮಂಗಳೂರು, ಮಲ್ಪೆ, ಗಂಗೊಳ್ಳಿ, ಮರವಂತೆ, ಭಟ್ಕಳ, ಕಾರವಾರದಲ್ಲಿ ಉತ್ತಮ ಮೀನುಗಾರಿಕೆ ನಡೆಯುತ್ತಿತ್ತು. ಆದರೆ ಈ ಬಾರಿ ಅಲ್ಪಪ್ರಮಾಣದ ಬಂಗುಡೆ ಬಿಟ್ಟರೆ ಬೂತಾಯಿ, ಅಂಜಲ್, ಪಾಂಪ್ಲೆಟ್ ತೀರಾ ವಿರಳವಾಗಿದೆ. ಬಿಳಿ ಅಂಜಲ್ ಅಪರೂಪದಲ್ಲಿ ಅಪರೂಪವಾಗಿದೆ. ಹೇರಳ ಮೀನು ಸಿಗದೇ ಇರುವುದರಿಂದ ಮೀನು ಮಾರುಕಟ್ಟೆಯಲ್ಲಿ ಮೀನಿನ ದರವೂ ಹೆಚ್ಚಳವಾಗಿದ್ದು, ಮತ್ಯ್ಥ ಪ್ರಿಯರ ಜೇಬಿಗೆ ಕನ್ನ ಹಾಕಿದೆ!

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search