• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂತಾರಾ – 1 ತುಳು ಭಾಷೆಗೆ ಡಬ್ ಆಗಲ್ವಾ?

Tulunadu News Posted On November 28, 2023
0


0
Shares
  • Share On Facebook
  • Tweet It

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರಾ ಅದ್ಭುತ ಯಶಸ್ಸು ಕಂಡು ಅದರ ಪ್ರಿಕ್ವೇಲ್ ಕಾಂತಾರಾ – 1 ಚಿತ್ರೀಕರಣಕ್ಕೆ ಮುಹೂರ್ತ ಆಗಿರುವುದು ರಾಷ್ಟ್ರವ್ಯಾಪಿ ಈಗಾಗಲೇ ಸುದ್ದಿಯಾಗಿದೆ. ಕಾಂತಾರ ಕನ್ನಡದಲ್ಲಿ ಯಶಸ್ಸುಗಳಿಸಿದ ಬಳಿಕ ಅದನ್ನು ಬೇರೆ ಭಾಷೆಗೂ ಡಬ್ ಮಾಡಿ ಸಿನೆಮಾ ಪ್ಯಾನ್ ಆಗಿ ಎಲ್ಲಾ ಕಡೆಗೂ ಯಶಸ್ಸು ಹೊಂದಿರುವುದು ಹೊಂಬಾಳೆ ಫಿಲಂ ಬ್ಯಾನರ್ ಇದಕ್ಕೆ ಹೊಸ ಶಕ್ತಿಯನ್ನು ತುಂಬಿರುವುದು ನಿಜ. ಆದ್ದರಿಂದ ಈ ಬಾರಿ ಕಾಂತಾರಾ – 1 ಆರಂಭದಲ್ಲಿಯೇ ಪ್ಯಾನ್ ಇಂಡಿಯಾ ಸಿನೆಮಾವಾಗಲಿದೆ ಎಂದು ಈಗಾಗಲೇ ಸಿನೆಮಾ ತಂಡ ಘೋಷಣೆ ಮಾಡಿದೆ. ಕನ್ನಡ ಭಾಷೆಯ ಜೊತೆ ಹಿಂದಿ, ತೆಲುಗು, ತಮಿಳು, ಮಲಯಾಳಂ, ಬೆಂಗಾಳಿ ಸೇರಿ ಇಂಗ್ಲೀಷ್ ಭಾಷೆಯಲ್ಲಿಯೂ ಸಿನೆಮಾ ಮೂಡಿಬರಲಿದೆ. ಆದರೆ ಕಾಂತಾರಾ -1 ಏಕಕಾಲದಲ್ಲಿ ತುಳುವಿನಲ್ಲಿಯೂ ಬರುತ್ತಾ ಎನ್ನುವುದು ಈಗ ಇರುವ ಪ್ರಶ್ನೆ.

ಕಾಂತಾರಾ ಹಿಂದಿನ ಬಾರಿ ಕನ್ನಡದಲ್ಲಿ ದೊಡ್ಡ ಹಿಟ್ ಆದ ನಂತರ ತುಳು ಭಾಷೆಗೆ ಡಬ್ ಆಗಿ ಎರಡು ತಿಂಗಳ ಬಳಿಕ ತುಳುವಿನಲ್ಲಿ ಬಿಡುಗಡೆಗೊಂಡಿತು. ಆದರೆ ಆಗ ಬಹುತೇಕ ತುಳುವರು ಕನ್ನಡದಲ್ಲಿ ಬಂದಿದ್ದ ಕಾಂತಾರಾವನ್ನು ಒಂದಕ್ಕಿಂತ ಹೆಚ್ಚು ಬಾರಿ ಥಿಯೇಟರ್ ಗೆ ಹೋಗಿ ನೋಡಿಯಾಗಿತ್ತು. ಆದ್ದರಿಂದ ತುಳುವಿಗೆ ಡಬ್ ಆಗಿದ್ದ ಕಾಂತಾರಾ ಹೌಸ್ ಫುಲ್ ಪ್ರದರ್ಶನ ಕಂಡಿರಲಿಲ್ಲ. ಹಾಗಂತ ಏಕಕಾಲದಲ್ಲಿ ಕನ್ನಡ ಮತ್ತು ತುಳುವಿನಲ್ಲಿ ಬಿಡುಗಡೆಗೊಳಿಸಿದರೆ ದಕ್ಷಿಣ ಕನ್ನಡದ ಜನ ಹಾಗೂ ತುಳು ಭಾಷಿಕರು ಎಲ್ಲೆಲ್ಲಿ ಇದ್ದಾರೋ ಅವರೆಲ್ಲ ಖಂಡಿತವಾಗಿ ತುಳುವಿನಲ್ಲಿಯೇ ನೋಡಲು ಇಷ್ಟಪಡುತ್ತಾರೆ ಎನ್ನುವುದು ನೂರಕ್ಕೆ ನೂರರಷ್ಟು ನಿಜ. ಆದ್ದರಿಂದ ಕನ್ನಡದಲ್ಲಿ ರಿಲೀಸ್ ಆಗಿ ಬಹಳ ದಿನಗಳ ನಂತರ ತುಳುವಿನಲ್ಲಿ ಲೇಟಾಗಿ ಬಿಡುಗಡೆಗೊಳಿಸಿದರೆ ಜನರ ಸ್ಪಂದನೆ ಕಡಿಮೆಯಾಗಿ ತುಳುವಿಗೆ ಡಬ್ ಮಾಡಿದ್ದಕ್ಕೆ ಲಾಭ ಆಗಲಿಲ್ಲ ಎನ್ನುವ ಅಪವಾದ ಬರುವುದಕ್ಕಿಂತ ಏಕಕಾಲದಲ್ಲಿ ಬಿಡುಗಡೆಗೊಳಿಸುವುದು ಉತ್ತಮ. ಹಾಗೆ ಹೊಂಬಾಳೆ ಫಿಲಂ ಬ್ಯಾನರ್ ಮಾಡಲಿ ಎನ್ನುವುದು ಸಿನೆಮಾ ಪ್ರಿಯರ ಅದರಲ್ಲಿಯೂ ತುಳುವರ ಆಶಯ.

0
Shares
  • Share On Facebook
  • Tweet It




Trending Now
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
  • Popular Posts

    • 1
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 2
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 3
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 4
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 5
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!

  • Privacy Policy
  • Contact
© Tulunadu Infomedia.

Press enter/return to begin your search