• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂತಾರಾ – 1 ತುಳು ಭಾಷೆಗೆ ಡಬ್ ಆಗಲ್ವಾ?

Tulunadu News Posted On November 28, 2023
0


0
Shares
  • Share On Facebook
  • Tweet It

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರಾ ಅದ್ಭುತ ಯಶಸ್ಸು ಕಂಡು ಅದರ ಪ್ರಿಕ್ವೇಲ್ ಕಾಂತಾರಾ – 1 ಚಿತ್ರೀಕರಣಕ್ಕೆ ಮುಹೂರ್ತ ಆಗಿರುವುದು ರಾಷ್ಟ್ರವ್ಯಾಪಿ ಈಗಾಗಲೇ ಸುದ್ದಿಯಾಗಿದೆ. ಕಾಂತಾರ ಕನ್ನಡದಲ್ಲಿ ಯಶಸ್ಸುಗಳಿಸಿದ ಬಳಿಕ ಅದನ್ನು ಬೇರೆ ಭಾಷೆಗೂ ಡಬ್ ಮಾಡಿ ಸಿನೆಮಾ ಪ್ಯಾನ್ ಆಗಿ ಎಲ್ಲಾ ಕಡೆಗೂ ಯಶಸ್ಸು ಹೊಂದಿರುವುದು ಹೊಂಬಾಳೆ ಫಿಲಂ ಬ್ಯಾನರ್ ಇದಕ್ಕೆ ಹೊಸ ಶಕ್ತಿಯನ್ನು ತುಂಬಿರುವುದು ನಿಜ. ಆದ್ದರಿಂದ ಈ ಬಾರಿ ಕಾಂತಾರಾ – 1 ಆರಂಭದಲ್ಲಿಯೇ ಪ್ಯಾನ್ ಇಂಡಿಯಾ ಸಿನೆಮಾವಾಗಲಿದೆ ಎಂದು ಈಗಾಗಲೇ ಸಿನೆಮಾ ತಂಡ ಘೋಷಣೆ ಮಾಡಿದೆ. ಕನ್ನಡ ಭಾಷೆಯ ಜೊತೆ ಹಿಂದಿ, ತೆಲುಗು, ತಮಿಳು, ಮಲಯಾಳಂ, ಬೆಂಗಾಳಿ ಸೇರಿ ಇಂಗ್ಲೀಷ್ ಭಾಷೆಯಲ್ಲಿಯೂ ಸಿನೆಮಾ ಮೂಡಿಬರಲಿದೆ. ಆದರೆ ಕಾಂತಾರಾ -1 ಏಕಕಾಲದಲ್ಲಿ ತುಳುವಿನಲ್ಲಿಯೂ ಬರುತ್ತಾ ಎನ್ನುವುದು ಈಗ ಇರುವ ಪ್ರಶ್ನೆ.

ಕಾಂತಾರಾ ಹಿಂದಿನ ಬಾರಿ ಕನ್ನಡದಲ್ಲಿ ದೊಡ್ಡ ಹಿಟ್ ಆದ ನಂತರ ತುಳು ಭಾಷೆಗೆ ಡಬ್ ಆಗಿ ಎರಡು ತಿಂಗಳ ಬಳಿಕ ತುಳುವಿನಲ್ಲಿ ಬಿಡುಗಡೆಗೊಂಡಿತು. ಆದರೆ ಆಗ ಬಹುತೇಕ ತುಳುವರು ಕನ್ನಡದಲ್ಲಿ ಬಂದಿದ್ದ ಕಾಂತಾರಾವನ್ನು ಒಂದಕ್ಕಿಂತ ಹೆಚ್ಚು ಬಾರಿ ಥಿಯೇಟರ್ ಗೆ ಹೋಗಿ ನೋಡಿಯಾಗಿತ್ತು. ಆದ್ದರಿಂದ ತುಳುವಿಗೆ ಡಬ್ ಆಗಿದ್ದ ಕಾಂತಾರಾ ಹೌಸ್ ಫುಲ್ ಪ್ರದರ್ಶನ ಕಂಡಿರಲಿಲ್ಲ. ಹಾಗಂತ ಏಕಕಾಲದಲ್ಲಿ ಕನ್ನಡ ಮತ್ತು ತುಳುವಿನಲ್ಲಿ ಬಿಡುಗಡೆಗೊಳಿಸಿದರೆ ದಕ್ಷಿಣ ಕನ್ನಡದ ಜನ ಹಾಗೂ ತುಳು ಭಾಷಿಕರು ಎಲ್ಲೆಲ್ಲಿ ಇದ್ದಾರೋ ಅವರೆಲ್ಲ ಖಂಡಿತವಾಗಿ ತುಳುವಿನಲ್ಲಿಯೇ ನೋಡಲು ಇಷ್ಟಪಡುತ್ತಾರೆ ಎನ್ನುವುದು ನೂರಕ್ಕೆ ನೂರರಷ್ಟು ನಿಜ. ಆದ್ದರಿಂದ ಕನ್ನಡದಲ್ಲಿ ರಿಲೀಸ್ ಆಗಿ ಬಹಳ ದಿನಗಳ ನಂತರ ತುಳುವಿನಲ್ಲಿ ಲೇಟಾಗಿ ಬಿಡುಗಡೆಗೊಳಿಸಿದರೆ ಜನರ ಸ್ಪಂದನೆ ಕಡಿಮೆಯಾಗಿ ತುಳುವಿಗೆ ಡಬ್ ಮಾಡಿದ್ದಕ್ಕೆ ಲಾಭ ಆಗಲಿಲ್ಲ ಎನ್ನುವ ಅಪವಾದ ಬರುವುದಕ್ಕಿಂತ ಏಕಕಾಲದಲ್ಲಿ ಬಿಡುಗಡೆಗೊಳಿಸುವುದು ಉತ್ತಮ. ಹಾಗೆ ಹೊಂಬಾಳೆ ಫಿಲಂ ಬ್ಯಾನರ್ ಮಾಡಲಿ ಎನ್ನುವುದು ಸಿನೆಮಾ ಪ್ರಿಯರ ಅದರಲ್ಲಿಯೂ ತುಳುವರ ಆಶಯ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search