• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುರಂಗದಿಂದ ಪಾರಾಗಿ ಬಂದವರಿಗೆ ತಲಾ 1 ಲಕ್ಷ ರೂಪಾಯಿ-ಉತ್ತರಾಖಂಡ ಸಿಎಂ

Tulunadu News Posted On November 30, 2023
0


0
Shares
  • Share On Facebook
  • Tweet It

ಸುರಂಗದಿಂದ ಪಾರಾಗಿ ಬಂದವರಿಗೆ ತಲಾ 1 ಲಕ್ಷ ರೂಪಾಯಿ!

ಭಾರತ ಕಂಡ ಅತೀ ದೊಡ್ಡ ಪಾರುಗಾಣಿಕಾ ಕಾರ್ಯಾಚರಣೆಯಲ್ಲಿ ಒಂದಾಗಿರುವ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಿಂದ ಪಾರಾಗಿ ಬಂದ 41 ಕಾರ್ಮಿಕರಿಗೆ ತಲಾ ಒಂದು ಲಕ್ಷ ರೂಪಾಯಿಗಳನ್ನು ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ಪುಷ್ಕರ ದಾಮಿ ಘೋಷಿಸಿದ್ದಾರೆ. ಕಾರ್ಮಿಕರು ಸುರಂಗದಿಂದ ಸುರಕ್ಷಿತವಾಗಿ ಹೊರಗೆ ಬರುವಾಗ ಅವರನ್ನು ಅಲ್ಲಿಯೇ ಕಾದು ನಿಂತು ಸ್ವಾಗತಿಸಿದ ಮುಖ್ಯಮಂತ್ರಿಯವರ ನಡೆ ಶ್ಲಾಘನೆಗೆ ಪಾತ್ರವಾಗಿತ್ತು. ಅದರೊಂದಿಗೆ ಆಸ್ಪತ್ರೆಯಲ್ಲಿ ಕಾರ್ಮಿಕರಿಗೆ ಅತ್ಯಾಧುನಿಕ ವ್ಯವಸ್ಥೆಯಲ್ಲಿ ಸಂಪೂರ್ಣ ಉಚಿತ ಚಿಕಿತ್ಸೆಯನ್ನು ನೀಡಿ ಅವರು ಮನೆ ತಲುಪುವ ತನಕ ಜವಾಬ್ದಾರಿಯನ್ನು ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಉತ್ತರಖಂಡ ಸಿಎಂ ಹೇಳಿದ್ದಾರೆ.

“ನಾನು ಈ ರಕ್ಷಣಾ ಕಾರ್ಯಾಚರಣೆಯಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕಾರ್ಯ ನಿರ್ವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಪ್ರಧಾನಿ ಮೋದಿಯವರು ನಿತ್ಯ ಈ ವಿಷಯದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಕೇಂದ್ರದಿಂದ ಸೂಕ್ತ ನೆರವನ್ನು ಕಲ್ಪಿಸಿದ್ದಾರೆ. ಅವರ ಸಹಾಯವಿಲ್ಲದೇ ಇದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ” ಎಂದು ದಾಮಿ ತಿಳಿಸಿದರು. ಉತ್ತರಖಂಡದಲ್ಲಿ ನೈಸರ್ಗಿಕ ವಿಕೋಪಗಳು ಸರ್ವೆ ಸಾಮಾನ್ಯವಾಗಿದ್ದರೂ ಪ್ರತಿ ಬಾರಿ ಅಂತಹ ಸಂದರ್ಭದಲ್ಲಿ ಸಿಎಂ ಈ ಕಾರ್ಯಾಚರಣೆಗಳಲ್ಲಿ ತೆಗೆದುಕೊಳ್ಳುವ ಕ್ರಮಗಳಿಂದ ಪರಿಸ್ಥಿತಿ ನಿರೀಕ್ಷೆಗಿಂತ ಶೀಘ್ರದಲ್ಲಿ ಸುಧಾರಣೆಗೊಳ್ಳುತ್ತಿರುವುದು ನಿಜಕ್ಕೂ ಮಾದರಿಯಾಗಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search