• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅರ್ನಾಬ್ ಗೋಸ್ವಾಮಿ ವಿರುದ್ಧ ಸುಳ್ಳು ಟಿಆರ್ ಪಿ ಕೇಸ್ ಹಿಂಪಡೆಯಲು ನ್ಯಾಯಾಲಯದಲ್ಲಿ ಪೊಲೀಸರ ಅರ್ಜಿ!

Tulunadu News Posted On December 1, 2023
0


0
Shares
  • Share On Facebook
  • Tweet It

ರಿಪಬ್ಲಿಕ್ ಮೀಡಿಯಾ ನೆಟ್ ವರ್ಕ್ ಸಂಪಾದಕ ಮತ್ತು ಆಡಳಿತ ನಿರ್ದೇಶಕ ಅರ್ನಬ್ ಗೋಸ್ವಾಮಿ ವಿರುದ್ಧ ಇರುವ ಫೇಕ್ ಟಿಆರ್ ಪಿ ಕೇಸನ್ನು ಹಿಂಪಡೆಯಲು ಅನುಮತಿ ಕೋರಿ ಮುಂಬೈ ಪೊಲೀಸರ ಕ್ರೈಂ ಬ್ರಾಂಚ್ ವಿಭಾಗ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಹಾಕಿದೆ.

2020 ರ ಅಕ್ಟೋಬರ್ ನಲ್ಲಿ ಈ ಪ್ರಕರಣದಲ್ಲಿ ಬ್ರಾಡ್ ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಿಎಸ್ ಆರ್ ಸಿ) ಪರವಾಗಿ ಹಂಸ ರಿಸರ್ಚ್ ಗ್ರೂಪ್ ದಾವೆ ಹೂಡಿತ್ತು. ದಾವೆಯಲ್ಲಿ ಕೆಲವು ಟಿವಿ ವಾಹಿನಿಗಳು ಟಿಆರ್ ಪಿ ( ಟೆಲಿವಿಷನ್ ರೇಟಿಂಗ್ ಪಾಯಿಂಟ್) ವಿಷಯದಲ್ಲಿ ಗೋಲ್ ಮಾಲ್ ಮಾಡುತ್ತಿವೆ ಎಂದು ಆರೋಪಿಸಲಾಗಿತ್ತು. ಸಪ್ಲಿಮೆಂಟರಿ ಚಾರ್ಜ್ ಶೀಟ್ ನಲ್ಲಿ ಪೊಲೀಸರು ಗೋಸ್ವಾಮಿಯನ್ನು ಆರೋಪಿಸಿ ಎಂದು ಹೆಸರಿಸಿದ್ದರು. ಅವರು ಬಿಎಆರ್ ಸಿ ಮಾಜಿ ಸಿಇಒ ಪಾರ್ತೋ ದಾಸ್ ಗುಪ್ತಾ ಅವರೊಂದಿಗೆ ಸೇರಿಕೊಂಡು ಟಿಆರ್ ಪಿ ಟೂಲ್ ದುರುಪಯೋಗಪಡಿಸಿದ್ದರು ಎಂದು ಸಪ್ಲಿಮೆಂಟರಿ ಚಾರ್ಜ್ ಶೀಟ್ ನಲ್ಲಿ ನಮೂದಿಸಲಾಗಿತ್ತು. ಅಷ್ಟೇ ಅಲ್ಲದೇ ದಾಸಗುಪ್ತ ಜೊತೆ ಗೋಸ್ವಾಮಿ ನಡೆಸಿದ ವಾಟ್ಸಪ್ ಚಾಟ್ ಪೂರಕ ಸಾಕ್ಷ್ಯ ಎಂದು ಹೇಳಲಾಗಿತ್ತು.

ಆದರೆ ಈಗ ಪ್ರಾಸಿಕ್ಯೂಶನ್ ಅವರು ಮ್ಯಾಜಿಸ್ಟ್ರೇಟ್ ಮುಂದೆ ಅರ್ಜಿ ಸಲ್ಲಿಸಿ ಈ ಪ್ರಕರಣವನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ. ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಡಿಸೆಂಬರ್ 28 ಕ್ಕೆ ಮುಂದೂಡಿದೆ. ಈ ಪ್ರಕರಣದಲ್ಲಿ ಒಟ್ಟು 12 ಜನರನ್ನು ಪೊಲೀಸರು ಬಂಧಿಸಿದ್ದರು. ಅದರಲ್ಲಿ ರಿಪಬ್ಲಿಕ್ ಟಿವಿಯ ಪ್ರಸರಣ ಅಧಿಕಾರಿ ಹಾಗೂ ಬೇರೆ ಎರಡು ವಾಹಿನಿಗಳ ಮುಖ್ಯಸ್ಥರು ಸೇರಿದ್ದರು. ಪ್ರಸ್ತುತ ಎಲ್ಲಾ ಆರೋಪಿಗಳು ಬೇಲ್ ನಲ್ಲಿದ್ದಾರೆ. ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯ ಕೂಡ ಪ್ರಕರಣ ದಾಖಲಿಸಲಾಗಿತ್ತು. ಆದರೆ ಜಾರಿ ನಿರ್ದೇಶನಾಲಯ ಕಳೆದ ವರ್ಷ ಚಾರ್ಜ್ ಶೀಟ್ ಸಲ್ಲಿಸಿ ರಿಪಬ್ಲಿಕ್ ಟಿವಿ ಇದರಲ್ಲಿ ತಪ್ಪಿತಸ್ಥ ಅಲ್ಲ ಎಂದು ತಿಳಿಸಿತ್ತು.

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search