• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಿಸ್ ಪಾಂಡಿಚೇರಿ ಈಗ ಮಿಸ್ ಆಫ್ರಿಕಾ ಗೋಲ್ಡನ್ ಸ್ಪರ್ಧೆಗೆ ರೆಡಿ!

Tulunadu News Posted On December 1, 2023
0


0
Shares
  • Share On Facebook
  • Tweet It

ಚರ್ಮದ ಬಣ್ಣ ಸೌಂದರ್ಯ ಸ್ಪರ್ಧೇಯಲ್ಲಿ ಭಾಗವಹಿಸಲು ಅಡ್ಡಿ ಆಗಲಿಲ್ಲ, ಯಾಕೆ?

ಸಾನ್ ರಿಚೆಲ್ ಗಾಂಧಿ ಎಂಬ ಯುವತಿಯನ್ನು ನೋಡಿದರೆ ಯಾರೂ ಕೂಡ ಆಕೆ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ಅಂದುಕೊಳ್ಳುವ ಸಾಧ್ಯತೆಯೇ ಇರಲಿಲ್ಲ. ಆದರೆ ಆಕೆ ಎದೆಗುಂದಲಿಲ್ಲ. ಅವಳಿಗೆ ತಾನು ಕೂಡ ಸೌಂದರ್ಯ ಸ್ಪರ್ಧೆಯಲ್ಲಿ ಸ್ಪರ್ಧಿಸುವುದು ಮಾತ್ರವಲ್ಲ, ಅದರಲ್ಲಿ ಗೆಲ್ಲಬೇಕೆಂಬ ಗುರಿಯೂ ಇತ್ತು. ಹಾಗೆ ಮಿಸ್ ಪಾಂಡಿಚೇರಿ ಸ್ಪರ್ಧೆಯಲ್ಲಿ ಭಾಗವಹಿಸಿದಳು, ಅವಳಂತಹ ಕಪ್ಪು ಬಣ್ಣದ ಯುವತಿ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸುವುದೇ ಎಂದು ಕೆಲವರು ಮೂದಲಿಸಿದರು. ಅಂತವರಿಗೆ ಈ ವೇದಿಕೆ ಅಲ್ಲ ಎನ್ನುವ ವಿರೋಧ ವ್ಯಕ್ತವಾಯಿತು. ಆದರೆ ಸಾನ್ ರಿಚೆಲ್ ಎಷ್ಟೇ ಟೀಕೆ ಬಂದರೂ ಅಂಜಲಿಲ್ಲ, ಹಿಂದೆ ಸರಿಯಲಿಲ್ಲ. ಅಂತಿಮವಾಗಿ ಆಕೆ ಮಿಸ್ ಪಾಂಡಿಚೇರಿಯಾಗಿ ಗೆದ್ದು ಬಂದಳು. ಈಗ ಆಕೆ ಮಿಸ್ ಆಫ್ರಿಕಾ ಗೋಲ್ಡನ್ 2023 ಇದಕ್ಕೆ ಸ್ಪರ್ಧಿಸಲು ತಯಾರಾಗಿದ್ದಾಳೆ.


ಅವಳ ಸಾಧನೆಯನ್ನು ನೋಡಿದರೆ ಈಗ ಯಾರು ಬೇಕಾದರೂ ಮೂಗಿನ ಮೇಲೆ ಬೆರಳಿಡುವಂತೆ ಆಗಿದೆ. ಸೌಂದರ್ಯ ಎಂದರೆ ಯಾವ ಮಾನದಂಡ ಇತ್ತೋ, ಯಾವ ವರ್ಣದವರು ಮಾತ್ರ ಭಾರತದಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರು ಎಂಬ ವಾತಾವರಣ ಇತ್ತೋ ಅದನ್ನು ತುಂಡರಿಸಿ ಯಾವ ವರ್ಣದವರು ಬೇಕಾದರೂ ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು ಎಂದು ತೋರಿಸುವುದೇ ತನ್ನ ಗುರಿ ಎಂದು ಆಕೆ ಸಾಬೀತುಪಡಿಸಿದ್ದಾಳೆ. ಐಶ್ವರ್ಯ ರೈ ತನ್ನ ರೋಲ್ ಮಾಡೆಲ್ ಎಂದು ಹೇಳಿಕೊಳ್ಳುವ ಸಾನ್ ರಿಚೆಲ್ ಆರಂಭದಲ್ಲಿ ತನ್ನ ಕುಟುಂಬದ ವಿರೋಧ ಇದ್ದಾಗಲೂ ಅದನ್ನೆಲ್ಲಾ ವಿರೋಧಿಸಿ ಓರ್ವ ಯಶಸ್ವಿ ಮಾಡಲ್ ಆಗಿ ಮಿಂಚುತ್ತಿದ್ದಾಳೆ. ಅದರೊಂದಿಗೆ ಅನೇಕ ಪ್ರಶಸ್ತಿಗಳನ್ನು ಕೂಡ ಮುಡಿಗೇರಿಸಿಕೊಂಡಿದ್ದಾಳೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search