• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!

Tulunadu News Posted On December 2, 2023
0


0
Shares
  • Share On Facebook
  • Tweet It

ಇಂತಹ ದುರವಸ್ಥೆಯನ್ನು ಪಾಕಿಸ್ತಾನ ಅನುಭವಿಸುತ್ತಿದೆ. ಪಕ್ಕಾ ಭಿಕ್ಷುಕರ ದೇಶವಾಗಿರುವ ಪಾಕಿಸ್ತಾನಕ್ಕೆ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಯಾರೂ ಮರ್ಯಾದೆ ಕೊಡುತ್ತಿಲ್ಲ. ಅದರಲ್ಲಿಯೂ ಇತ್ತೀಚೆಗೆ ನಡೆದ ವಿಶ್ವಕಪ್ ನಲ್ಲಿ ದಯನೀಯ ಸೋಲಿನ ಬಳಿಕ ಪಾಕಿಸ್ತಾನಕ್ಕೆ ಇನ್ನಷ್ಟು ಅವಮಾನ ಅವರ ಮಾಜಿ ಕ್ರಿಕೆಟಿಗರಿಂದಲೇ ಆಗಿದೆ. ನಿತ್ಯ ಕೆಜಿಗಟ್ಟಲೆ ಬಿರಿಯಾನಿ ತಿಂದರೆ ಮೈದಾನದಲ್ಲಿ ದೇಹ ಬಗ್ಗತ್ತಾ ಎಂದು ಅವರದ್ದೇ ಹಳೆ ಕ್ರಿಕೆಟಿಗರಿಂದ ಉಗಿಸಿಕೊಂಡು ಪಾಕ್ ತಂಡಕ್ಕೂ ಸಾಕುಸಾಕಾಗಿದೆ. ಇನ್ನು ತಂಡದ ರೂಪುರೇಶೆ ಚರ್ಚೆಯಾಗುತ್ತಿರುವ ಹೊತ್ತಿಗೆ ಕಪ್ತಾನ ಅದನ್ನು ಗಂಭೀರವಾಗಿ ತೆಗೆದುಕೊಳ್ಳದೇ ಬಿರಿಯಾನಿ ತರಹ ಏನನ್ನೋ ಮುಕ್ಕುತ್ತಿರುವ ವಿಡಿಯೋ ಕೂಡ ಇತ್ತೀಚೆಗೆ ವೈರಲ್ ಆಗಿತ್ತು. ಆಡುವುದಕ್ಕಿಂತ ತಿನ್ನಲು ಜಾಸ್ತಿ ಮಹತ್ವ ಕೊಟ್ಟ ಪಾಕಿ ಕ್ರಿಕೆಟಿಗರಿಗೆ ಈಗ ಹೊರದೇಶದಲ್ಲಿಯೂ ಅಂತಹ ಪ್ರಾಮುಖ್ಯತೆ ಸಿಗುವುದು ಡೌಟು ಎನ್ನುವುದು ಈಗ ಸಾಬೀತಾಗಿದೆ.

24 ಗಂಟೆ ಪ್ರಯಾಣ ಮಾಡಿ ಸಿಡ್ನಿಗೆ ಬಂದಿಳಿದ ಪಾಕ್ ಕ್ರಿಕೆಟಿಗರಿಗೆ ವಿಮಾನ ನಿಲ್ದಾಣದಲ್ಲಿ ಆಸ್ಟ್ರೇಲಿಯಾದ ಶಿಷ್ಟಾಚಾರದ ಯಾವ ಅಧಿಕಾರಿಯೂ ಬಂದು ಎದುರುಗೊಂಡಿಲ್ಲ. ಹೋಗಲಿ, ಪಾಕಿಸ್ತಾನದ ರಾಯಭಾರಿ ಕಚೇರಿಯಿಂದ ಕನಿಷ್ಟ ಒಬ್ಬ ಗುಮಾಸ್ತನೂ ಸ್ವಾಗತಕ್ಕೆ ಬರಲಿಲ್ಲ. ಎಲ್ಲಿಯ ತನಕ ಎಂದರೆ ವಿಮಾನ ನಿಲ್ದಾಣದಲ್ಲಿ ಕ್ರಿಕೆಟಿಗರ ಲಗೇಜಿಗೆ ಕೈಕೊಡಲು ಒಬ್ಬನೇ ಒಬ್ಬ ವ್ಯಕ್ತಿ ಇರಲಿಲ್ಲ. ಕೊನೆಗೆ ತಂಡದ ಹೊಸ ಕಪ್ತಾನ ಶಾನ್ ಮಸೂದ್ ತಾವೇ ಲಗೇಜುಗಳನ್ನು ಮಿನಿ ಲಾರಿಯೊಂದಕ್ಕೆ ತುಂಬಿಸಿ ಸಹ ಆಟಗಾರರ ನೆರವಿಗೆ ಮುಂದಾದ ಫೋಟೋ ಮಾತ್ರ ಎಲ್ಲೆಡೆ ಈಗ ವೈರಲ್ ಆಗಿದೆ.

ಒಟ್ಟಿನಲ್ಲಿ ಮೂರು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲು ಪಾಕಿಸ್ತಾನ ಸಿಡ್ನಿಗೆ ಬಂದಿದೆ. ಇಲ್ಲಿಯವರೆಗೆ ಆಸ್ಟ್ರೇಲಿಯಾ ನೆಲದಲ್ಲಿ ಪಾಕಿಸ್ತಾನ ಒಂದೇ ಒಂದು ಟೆಸ್ಟ್ ಸರಣಿ ಗೆದ್ದಿಲ್ಲ. 2019 ರ ಬಳಿಕ ಪ್ರಥಮ ಬಾರಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ಪಾಕಿಸ್ತಾನ ಇಲ್ಲಿ ಕನಿಷ್ಟ ಒಂದು ಪಂದ್ಯವನ್ನಾದರೂ ಗೆಲ್ಲುತ್ತಾ ಎಂದು ಕಾದು ನೋಡಬೇಕಿದೆ. ಯಾಕೆಂದರೆ ಕೊನೆಯ ಬಾರಿ ಆಸ್ಟ್ರೇಲಿಯ ಪ್ರವಾಸ ಕೈಗೊಂಡ ಪಾಕಿಸ್ತಾನ 2-0 ಅಂತರದಲ್ಲಿ ಸೋತಿತ್ತು. ಆಗ ಅಜರ್ ಆಲಿ ಕಪ್ತಾನರಾಗಿದ್ದರು.

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search