• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!

Tulunadu News Posted On December 2, 2023
0


0
Shares
  • Share On Facebook
  • Tweet It

ಇಂತಹ ದುರವಸ್ಥೆಯನ್ನು ಪಾಕಿಸ್ತಾನ ಅನುಭವಿಸುತ್ತಿದೆ. ಪಕ್ಕಾ ಭಿಕ್ಷುಕರ ದೇಶವಾಗಿರುವ ಪಾಕಿಸ್ತಾನಕ್ಕೆ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಯಾರೂ ಮರ್ಯಾದೆ ಕೊಡುತ್ತಿಲ್ಲ. ಅದರಲ್ಲಿಯೂ ಇತ್ತೀಚೆಗೆ ನಡೆದ ವಿಶ್ವಕಪ್ ನಲ್ಲಿ ದಯನೀಯ ಸೋಲಿನ ಬಳಿಕ ಪಾಕಿಸ್ತಾನಕ್ಕೆ ಇನ್ನಷ್ಟು ಅವಮಾನ ಅವರ ಮಾಜಿ ಕ್ರಿಕೆಟಿಗರಿಂದಲೇ ಆಗಿದೆ. ನಿತ್ಯ ಕೆಜಿಗಟ್ಟಲೆ ಬಿರಿಯಾನಿ ತಿಂದರೆ ಮೈದಾನದಲ್ಲಿ ದೇಹ ಬಗ್ಗತ್ತಾ ಎಂದು ಅವರದ್ದೇ ಹಳೆ ಕ್ರಿಕೆಟಿಗರಿಂದ ಉಗಿಸಿಕೊಂಡು ಪಾಕ್ ತಂಡಕ್ಕೂ ಸಾಕುಸಾಕಾಗಿದೆ. ಇನ್ನು ತಂಡದ ರೂಪುರೇಶೆ ಚರ್ಚೆಯಾಗುತ್ತಿರುವ ಹೊತ್ತಿಗೆ ಕಪ್ತಾನ ಅದನ್ನು ಗಂಭೀರವಾಗಿ ತೆಗೆದುಕೊಳ್ಳದೇ ಬಿರಿಯಾನಿ ತರಹ ಏನನ್ನೋ ಮುಕ್ಕುತ್ತಿರುವ ವಿಡಿಯೋ ಕೂಡ ಇತ್ತೀಚೆಗೆ ವೈರಲ್ ಆಗಿತ್ತು. ಆಡುವುದಕ್ಕಿಂತ ತಿನ್ನಲು ಜಾಸ್ತಿ ಮಹತ್ವ ಕೊಟ್ಟ ಪಾಕಿ ಕ್ರಿಕೆಟಿಗರಿಗೆ ಈಗ ಹೊರದೇಶದಲ್ಲಿಯೂ ಅಂತಹ ಪ್ರಾಮುಖ್ಯತೆ ಸಿಗುವುದು ಡೌಟು ಎನ್ನುವುದು ಈಗ ಸಾಬೀತಾಗಿದೆ.

24 ಗಂಟೆ ಪ್ರಯಾಣ ಮಾಡಿ ಸಿಡ್ನಿಗೆ ಬಂದಿಳಿದ ಪಾಕ್ ಕ್ರಿಕೆಟಿಗರಿಗೆ ವಿಮಾನ ನಿಲ್ದಾಣದಲ್ಲಿ ಆಸ್ಟ್ರೇಲಿಯಾದ ಶಿಷ್ಟಾಚಾರದ ಯಾವ ಅಧಿಕಾರಿಯೂ ಬಂದು ಎದುರುಗೊಂಡಿಲ್ಲ. ಹೋಗಲಿ, ಪಾಕಿಸ್ತಾನದ ರಾಯಭಾರಿ ಕಚೇರಿಯಿಂದ ಕನಿಷ್ಟ ಒಬ್ಬ ಗುಮಾಸ್ತನೂ ಸ್ವಾಗತಕ್ಕೆ ಬರಲಿಲ್ಲ. ಎಲ್ಲಿಯ ತನಕ ಎಂದರೆ ವಿಮಾನ ನಿಲ್ದಾಣದಲ್ಲಿ ಕ್ರಿಕೆಟಿಗರ ಲಗೇಜಿಗೆ ಕೈಕೊಡಲು ಒಬ್ಬನೇ ಒಬ್ಬ ವ್ಯಕ್ತಿ ಇರಲಿಲ್ಲ. ಕೊನೆಗೆ ತಂಡದ ಹೊಸ ಕಪ್ತಾನ ಶಾನ್ ಮಸೂದ್ ತಾವೇ ಲಗೇಜುಗಳನ್ನು ಮಿನಿ ಲಾರಿಯೊಂದಕ್ಕೆ ತುಂಬಿಸಿ ಸಹ ಆಟಗಾರರ ನೆರವಿಗೆ ಮುಂದಾದ ಫೋಟೋ ಮಾತ್ರ ಎಲ್ಲೆಡೆ ಈಗ ವೈರಲ್ ಆಗಿದೆ.

ಒಟ್ಟಿನಲ್ಲಿ ಮೂರು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲು ಪಾಕಿಸ್ತಾನ ಸಿಡ್ನಿಗೆ ಬಂದಿದೆ. ಇಲ್ಲಿಯವರೆಗೆ ಆಸ್ಟ್ರೇಲಿಯಾ ನೆಲದಲ್ಲಿ ಪಾಕಿಸ್ತಾನ ಒಂದೇ ಒಂದು ಟೆಸ್ಟ್ ಸರಣಿ ಗೆದ್ದಿಲ್ಲ. 2019 ರ ಬಳಿಕ ಪ್ರಥಮ ಬಾರಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ಪಾಕಿಸ್ತಾನ ಇಲ್ಲಿ ಕನಿಷ್ಟ ಒಂದು ಪಂದ್ಯವನ್ನಾದರೂ ಗೆಲ್ಲುತ್ತಾ ಎಂದು ಕಾದು ನೋಡಬೇಕಿದೆ. ಯಾಕೆಂದರೆ ಕೊನೆಯ ಬಾರಿ ಆಸ್ಟ್ರೇಲಿಯ ಪ್ರವಾಸ ಕೈಗೊಂಡ ಪಾಕಿಸ್ತಾನ 2-0 ಅಂತರದಲ್ಲಿ ಸೋತಿತ್ತು. ಆಗ ಅಜರ್ ಆಲಿ ಕಪ್ತಾನರಾಗಿದ್ದರು.

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search