• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!

Tulunadu News Posted On December 2, 2023
0


0
Shares
  • Share On Facebook
  • Tweet It

ಇಂತಹ ದುರವಸ್ಥೆಯನ್ನು ಪಾಕಿಸ್ತಾನ ಅನುಭವಿಸುತ್ತಿದೆ. ಪಕ್ಕಾ ಭಿಕ್ಷುಕರ ದೇಶವಾಗಿರುವ ಪಾಕಿಸ್ತಾನಕ್ಕೆ ಈಗ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಯಾರೂ ಮರ್ಯಾದೆ ಕೊಡುತ್ತಿಲ್ಲ. ಅದರಲ್ಲಿಯೂ ಇತ್ತೀಚೆಗೆ ನಡೆದ ವಿಶ್ವಕಪ್ ನಲ್ಲಿ ದಯನೀಯ ಸೋಲಿನ ಬಳಿಕ ಪಾಕಿಸ್ತಾನಕ್ಕೆ ಇನ್ನಷ್ಟು ಅವಮಾನ ಅವರ ಮಾಜಿ ಕ್ರಿಕೆಟಿಗರಿಂದಲೇ ಆಗಿದೆ. ನಿತ್ಯ ಕೆಜಿಗಟ್ಟಲೆ ಬಿರಿಯಾನಿ ತಿಂದರೆ ಮೈದಾನದಲ್ಲಿ ದೇಹ ಬಗ್ಗತ್ತಾ ಎಂದು ಅವರದ್ದೇ ಹಳೆ ಕ್ರಿಕೆಟಿಗರಿಂದ ಉಗಿಸಿಕೊಂಡು ಪಾಕ್ ತಂಡಕ್ಕೂ ಸಾಕುಸಾಕಾಗಿದೆ. ಇನ್ನು ತಂಡದ ರೂಪುರೇಶೆ ಚರ್ಚೆಯಾಗುತ್ತಿರುವ ಹೊತ್ತಿಗೆ ಕಪ್ತಾನ ಅದನ್ನು ಗಂಭೀರವಾಗಿ ತೆಗೆದುಕೊಳ್ಳದೇ ಬಿರಿಯಾನಿ ತರಹ ಏನನ್ನೋ ಮುಕ್ಕುತ್ತಿರುವ ವಿಡಿಯೋ ಕೂಡ ಇತ್ತೀಚೆಗೆ ವೈರಲ್ ಆಗಿತ್ತು. ಆಡುವುದಕ್ಕಿಂತ ತಿನ್ನಲು ಜಾಸ್ತಿ ಮಹತ್ವ ಕೊಟ್ಟ ಪಾಕಿ ಕ್ರಿಕೆಟಿಗರಿಗೆ ಈಗ ಹೊರದೇಶದಲ್ಲಿಯೂ ಅಂತಹ ಪ್ರಾಮುಖ್ಯತೆ ಸಿಗುವುದು ಡೌಟು ಎನ್ನುವುದು ಈಗ ಸಾಬೀತಾಗಿದೆ.

24 ಗಂಟೆ ಪ್ರಯಾಣ ಮಾಡಿ ಸಿಡ್ನಿಗೆ ಬಂದಿಳಿದ ಪಾಕ್ ಕ್ರಿಕೆಟಿಗರಿಗೆ ವಿಮಾನ ನಿಲ್ದಾಣದಲ್ಲಿ ಆಸ್ಟ್ರೇಲಿಯಾದ ಶಿಷ್ಟಾಚಾರದ ಯಾವ ಅಧಿಕಾರಿಯೂ ಬಂದು ಎದುರುಗೊಂಡಿಲ್ಲ. ಹೋಗಲಿ, ಪಾಕಿಸ್ತಾನದ ರಾಯಭಾರಿ ಕಚೇರಿಯಿಂದ ಕನಿಷ್ಟ ಒಬ್ಬ ಗುಮಾಸ್ತನೂ ಸ್ವಾಗತಕ್ಕೆ ಬರಲಿಲ್ಲ. ಎಲ್ಲಿಯ ತನಕ ಎಂದರೆ ವಿಮಾನ ನಿಲ್ದಾಣದಲ್ಲಿ ಕ್ರಿಕೆಟಿಗರ ಲಗೇಜಿಗೆ ಕೈಕೊಡಲು ಒಬ್ಬನೇ ಒಬ್ಬ ವ್ಯಕ್ತಿ ಇರಲಿಲ್ಲ. ಕೊನೆಗೆ ತಂಡದ ಹೊಸ ಕಪ್ತಾನ ಶಾನ್ ಮಸೂದ್ ತಾವೇ ಲಗೇಜುಗಳನ್ನು ಮಿನಿ ಲಾರಿಯೊಂದಕ್ಕೆ ತುಂಬಿಸಿ ಸಹ ಆಟಗಾರರ ನೆರವಿಗೆ ಮುಂದಾದ ಫೋಟೋ ಮಾತ್ರ ಎಲ್ಲೆಡೆ ಈಗ ವೈರಲ್ ಆಗಿದೆ.

ಒಟ್ಟಿನಲ್ಲಿ ಮೂರು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲು ಪಾಕಿಸ್ತಾನ ಸಿಡ್ನಿಗೆ ಬಂದಿದೆ. ಇಲ್ಲಿಯವರೆಗೆ ಆಸ್ಟ್ರೇಲಿಯಾ ನೆಲದಲ್ಲಿ ಪಾಕಿಸ್ತಾನ ಒಂದೇ ಒಂದು ಟೆಸ್ಟ್ ಸರಣಿ ಗೆದ್ದಿಲ್ಲ. 2019 ರ ಬಳಿಕ ಪ್ರಥಮ ಬಾರಿ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ಪಾಕಿಸ್ತಾನ ಇಲ್ಲಿ ಕನಿಷ್ಟ ಒಂದು ಪಂದ್ಯವನ್ನಾದರೂ ಗೆಲ್ಲುತ್ತಾ ಎಂದು ಕಾದು ನೋಡಬೇಕಿದೆ. ಯಾಕೆಂದರೆ ಕೊನೆಯ ಬಾರಿ ಆಸ್ಟ್ರೇಲಿಯ ಪ್ರವಾಸ ಕೈಗೊಂಡ ಪಾಕಿಸ್ತಾನ 2-0 ಅಂತರದಲ್ಲಿ ಸೋತಿತ್ತು. ಆಗ ಅಜರ್ ಆಲಿ ಕಪ್ತಾನರಾಗಿದ್ದರು.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search