• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!

Tulunadu News Posted On December 2, 2023
0


0
Shares
  • Share On Facebook
  • Tweet It

ಬಿಹಾರದಲ್ಲಿ ಇವತ್ತಿಗೂ ಪಕ್ಡ್ವಾ ವಿವಾಹ ಎನ್ನುವ ಸಂಸ್ಕೃತಿ ಜಾರಿಯಲ್ಲಿದೆ. ಇದರಲ್ಲಿ ವಿದ್ಯಾವಂತ, ಉತ್ತಮ ಉದ್ಯೋಗದಲ್ಲಿರುವ ಯುವಕರನ್ನು ಅಜ್ಞಾತ ತಂಡವೊಂದು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಕ್ರಮ ನಡೆಯುತ್ತದೆ. ನೀವು ಪ್ರಾಪ್ತ ವಯಸ್ಸಿಗೆ ಬಂದು ಉತ್ತಮ ವಿದ್ಯಾಭ್ಯಾಸ ಮುಗಿಸಿ ಒಳ್ಳೆಯ ಉದ್ಯೋಗದಲ್ಲಿ ಇದ್ದರೆ ಬಿಹಾರದಲ್ಲಿ ಯಾವುದೇ ಸಂದರ್ಭದಲ್ಲಿಯೂ ಕಿಡ್ನಾಪ್ ಆಗುವ ಸಾಧ್ಯತೆ ಇರುತ್ತದೆ. ಕಿಡ್ನಾಪ್ ಆದ ಯುವಕನನ್ನು ಅಜ್ಞಾತ ಬಂದೂಕುಧಾರಿಗಳು ಗುಪ್ತವಾಗಿರುವ ಜಾಗಕ್ಕೆ ಕರೆದುಕೊಂಡು ಹೋಗುತ್ತಾರೆ. ಅಲ್ಲಿ ರಾತ್ರಿಯೀಡಿ ಒಂದು ಕೋಣೆಯಲ್ಲಿ ಹಾಕಿ, ಮರುದಿನ ಮದುವೆ ಮಂಟಪಕ್ಕೆ ಕರೆದುಕೊಂಡು ಹೋಗುತ್ತಾರೆ. ಅಲ್ಲಿ ಅವನನ್ನು ಬಲಾತ್ಕಾರವಾಗಿ ಸಜ್ಜುಗೊಳಿಸಿ ಯುವತಿಯೊಬ್ಬಳಿಗೆ ತಾಳಿ ಕಟ್ಟಿಸಲಾಗುತ್ತದೆ. ಇದನ್ನು ಪಕ್ಡ್ವಾ ವಿವಾಹ ಎಂದು ಕರೆಯಲಾಗುತ್ತದೆ.

ವರದಕ್ಷಿಣೆ ಕೊಡಲಾಗದ ಯುವತಿಯರಿಗೆ ಮದುವೆ ವಯಸ್ಸು ದಾಟುತ್ತಿದ್ದರೂ ಸೂಕ್ತ ವರ ಸಿಗದ ಹಿನ್ನಲೆಯಲ್ಲಿ ಇಂತಹ ಪಕ್ಡ್ವಾ ವಿವಾಹ ಬಹಳ ಹಿಂದಿನಿಂದ ಜಾರಿಯಲ್ಲಿತ್ತು. ಕೆಲವು ಕಡೆ ಊರಿನ ಶ್ರೀಮಂತ ಜಮೀನ್ದಾರರು ತಮ್ಮ ಮಗಳಿಗೆ ಉತ್ತಮ ವಿದ್ಯಾವಂತ ವರ, ಸುಸಂಸ್ಕೃತ ವರ ಸಿಗಬೇಕೆಂಬ ಉದ್ದೇಶದಿಂದ ಅಂತವರನ್ನು ಹುಡುಕಿ ಅವರು ಮದುವೆಯಾಗಲು ಒಪ್ಪದಿದ್ದಾಗ ಕಿಡ್ನಾಪ್ ಮಾಡಿ ಮದುವೆ ಮಾಡಿಸುತ್ತಾರೆ. ಇನ್ನು ಕೆಲವು ಕಡೆ ಅಪ್ರಾಪ್ತ ಬಾಲಕರನ್ನು ಕೂಡ ಕಿಡ್ನಾಪ್ ಮಾಡಿ ಮಹಿಳೆಯರೊಂದಿಗೆ ಮದುವೆ ಮಾಡಿಸುವ ಘಟನೆ ಕೂಡ ನಡೆದಿದೆ.

2020ರ ಒಂದೇ ವರ್ಷದಲ್ಲಿ ಬಿಹಾರದಲ್ಲಿ ಸುಮಾರು ಆರೂವರೆ ಸಾವಿರಕ್ಕೂ ಹೆಚ್ಚು ಇಂತಹ ಕಿಡ್ನಾಪ್ ಮಾಡಿ ನಡೆದ ಮದುವೆಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಇದು ಬಿಹಾರದ ಬೇಗುಸರಾಯಿ, ಮುಂಗೇರ್, ಬಂಕಾ, ಖಾಗಾರಿಯಾ, ಮಧೇಪುರ್, ಪೂರ್ಣಿಯಾ, ಜೆಹನಾಬಾದ್, ಜಮುಐ ಸಹಿತ ಆಸುಪಾಸಿನ ಪ್ರದೇಶದಲ್ಲಿ ಹೆಚ್ಚಾಗಿ ನಡೆಯುತ್ತಾ ಬಂದಿದೆ. 90 ರ ದಶಕದಲ್ಲಿ ಬಿಹಾರದ ಬೇಗುಸರಾಯಿಯಲ್ಲಿ ಹೆಚ್ಚಾಗಿ ಕಂಡುಬಂದ ಈ ಘಟನೆಗಳ ಆಧಾರದ ಮೇಲೆ 2010 ರಲ್ಲಿ ಅಂತರೌಂಧ ಸಿನೆಮಾ ನಿರ್ಮಾಣವಾಗಿತ್ತು. ಆ ಸಿನೆಮಾಕ್ಕೆ ರಾಷ್ಟ್ರಪ್ರಶಸ್ತಿಯೂ ಒಲಿದಿತ್ತು.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search