• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!

Tulunadu News Posted On December 2, 2023
0


0
Shares
  • Share On Facebook
  • Tweet It

ಬಿಹಾರದಲ್ಲಿ ಇವತ್ತಿಗೂ ಪಕ್ಡ್ವಾ ವಿವಾಹ ಎನ್ನುವ ಸಂಸ್ಕೃತಿ ಜಾರಿಯಲ್ಲಿದೆ. ಇದರಲ್ಲಿ ವಿದ್ಯಾವಂತ, ಉತ್ತಮ ಉದ್ಯೋಗದಲ್ಲಿರುವ ಯುವಕರನ್ನು ಅಜ್ಞಾತ ತಂಡವೊಂದು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಕ್ರಮ ನಡೆಯುತ್ತದೆ. ನೀವು ಪ್ರಾಪ್ತ ವಯಸ್ಸಿಗೆ ಬಂದು ಉತ್ತಮ ವಿದ್ಯಾಭ್ಯಾಸ ಮುಗಿಸಿ ಒಳ್ಳೆಯ ಉದ್ಯೋಗದಲ್ಲಿ ಇದ್ದರೆ ಬಿಹಾರದಲ್ಲಿ ಯಾವುದೇ ಸಂದರ್ಭದಲ್ಲಿಯೂ ಕಿಡ್ನಾಪ್ ಆಗುವ ಸಾಧ್ಯತೆ ಇರುತ್ತದೆ. ಕಿಡ್ನಾಪ್ ಆದ ಯುವಕನನ್ನು ಅಜ್ಞಾತ ಬಂದೂಕುಧಾರಿಗಳು ಗುಪ್ತವಾಗಿರುವ ಜಾಗಕ್ಕೆ ಕರೆದುಕೊಂಡು ಹೋಗುತ್ತಾರೆ. ಅಲ್ಲಿ ರಾತ್ರಿಯೀಡಿ ಒಂದು ಕೋಣೆಯಲ್ಲಿ ಹಾಕಿ, ಮರುದಿನ ಮದುವೆ ಮಂಟಪಕ್ಕೆ ಕರೆದುಕೊಂಡು ಹೋಗುತ್ತಾರೆ. ಅಲ್ಲಿ ಅವನನ್ನು ಬಲಾತ್ಕಾರವಾಗಿ ಸಜ್ಜುಗೊಳಿಸಿ ಯುವತಿಯೊಬ್ಬಳಿಗೆ ತಾಳಿ ಕಟ್ಟಿಸಲಾಗುತ್ತದೆ. ಇದನ್ನು ಪಕ್ಡ್ವಾ ವಿವಾಹ ಎಂದು ಕರೆಯಲಾಗುತ್ತದೆ.

ವರದಕ್ಷಿಣೆ ಕೊಡಲಾಗದ ಯುವತಿಯರಿಗೆ ಮದುವೆ ವಯಸ್ಸು ದಾಟುತ್ತಿದ್ದರೂ ಸೂಕ್ತ ವರ ಸಿಗದ ಹಿನ್ನಲೆಯಲ್ಲಿ ಇಂತಹ ಪಕ್ಡ್ವಾ ವಿವಾಹ ಬಹಳ ಹಿಂದಿನಿಂದ ಜಾರಿಯಲ್ಲಿತ್ತು. ಕೆಲವು ಕಡೆ ಊರಿನ ಶ್ರೀಮಂತ ಜಮೀನ್ದಾರರು ತಮ್ಮ ಮಗಳಿಗೆ ಉತ್ತಮ ವಿದ್ಯಾವಂತ ವರ, ಸುಸಂಸ್ಕೃತ ವರ ಸಿಗಬೇಕೆಂಬ ಉದ್ದೇಶದಿಂದ ಅಂತವರನ್ನು ಹುಡುಕಿ ಅವರು ಮದುವೆಯಾಗಲು ಒಪ್ಪದಿದ್ದಾಗ ಕಿಡ್ನಾಪ್ ಮಾಡಿ ಮದುವೆ ಮಾಡಿಸುತ್ತಾರೆ. ಇನ್ನು ಕೆಲವು ಕಡೆ ಅಪ್ರಾಪ್ತ ಬಾಲಕರನ್ನು ಕೂಡ ಕಿಡ್ನಾಪ್ ಮಾಡಿ ಮಹಿಳೆಯರೊಂದಿಗೆ ಮದುವೆ ಮಾಡಿಸುವ ಘಟನೆ ಕೂಡ ನಡೆದಿದೆ.

2020ರ ಒಂದೇ ವರ್ಷದಲ್ಲಿ ಬಿಹಾರದಲ್ಲಿ ಸುಮಾರು ಆರೂವರೆ ಸಾವಿರಕ್ಕೂ ಹೆಚ್ಚು ಇಂತಹ ಕಿಡ್ನಾಪ್ ಮಾಡಿ ನಡೆದ ಮದುವೆಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಇದು ಬಿಹಾರದ ಬೇಗುಸರಾಯಿ, ಮುಂಗೇರ್, ಬಂಕಾ, ಖಾಗಾರಿಯಾ, ಮಧೇಪುರ್, ಪೂರ್ಣಿಯಾ, ಜೆಹನಾಬಾದ್, ಜಮುಐ ಸಹಿತ ಆಸುಪಾಸಿನ ಪ್ರದೇಶದಲ್ಲಿ ಹೆಚ್ಚಾಗಿ ನಡೆಯುತ್ತಾ ಬಂದಿದೆ. 90 ರ ದಶಕದಲ್ಲಿ ಬಿಹಾರದ ಬೇಗುಸರಾಯಿಯಲ್ಲಿ ಹೆಚ್ಚಾಗಿ ಕಂಡುಬಂದ ಈ ಘಟನೆಗಳ ಆಧಾರದ ಮೇಲೆ 2010 ರಲ್ಲಿ ಅಂತರೌಂಧ ಸಿನೆಮಾ ನಿರ್ಮಾಣವಾಗಿತ್ತು. ಆ ಸಿನೆಮಾಕ್ಕೆ ರಾಷ್ಟ್ರಪ್ರಶಸ್ತಿಯೂ ಒಲಿದಿತ್ತು.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search