• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!

Tulunadu News Posted On December 2, 2023
0


0
Shares
  • Share On Facebook
  • Tweet It

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಸ್ಥಾನಗಳೊಂದಿಗೆ ಅಧಿಕಾರದ ಗದ್ದುಗೆ ಹಿಡಿದ ನಂತರ ಚುನಾವಣಾ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಅವರ ಒಂದು ಕಾಲದ ಆಪ್ತ ಸುನೀಲ್ ಕನಗೋಳು ಮಧ್ಯಪ್ರದೇಶ ಹಾಗೂ ತೆಲಂಗಾಣದಲ್ಲಿ ಕಾಂಗ್ರೆಸ್ಸಿನ ಚುನಾವಣಾ ರಣತಂತ್ರಕ್ಕೆ ಇಳಿದಿದ್ದರು. ಡಿಸೆಂಬರ್ 3 ರಂದು ಈ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯಾಗಲಿದ್ದು, ಒಂದು ವೇಳೆ ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದರೆ ಸುನೀಲ್ ಕನಗೋಳು ವರ್ಚಸ್ಸು ಇನ್ನಷ್ಟು ಹೆಚ್ಚಾಗಲಿದೆ. ಕಾಂಗ್ರೆಸ್ಸನ್ನು ಕರ್ನಾಟಕದಲ್ಲಿ ಅಧಿಕಾರಕ್ಕೆ ತರಲು ಅದರಲ್ಲಿ ರಣತಂತ್ರ ರೂಪಿಸಿ ಯಶಸ್ವಿಯಾದ ಕಾರಣಕ್ಕೆ ಉಡುಗೊರೆಯಾಗಿ ಅವರಿಗೆ ಮುಖ್ಯಮಂತ್ರಿಗಳ ವಿಶೇಷ ಸಲಹೆಗಾರ ಹುದ್ದೆಯನ್ನು ಸೃಷ್ಟಿಸಿ ನೀಡಲಾಗಿದೆ. ಅವರಿಗಾಗಿ ವಿಶೇಷ ಕೊಠಡಿ ಹಾಗೂ ಎಲ್ಲಾ ಸೌಲಭ್ಯಗಳನ್ನು ಪೂರೈಸಲಾಗಿದ್ದು, ಸಂಪುಟ ದರ್ಜೆ ಸ್ಥಾನಮಾನ ಕೂಡ ನೀಡಲಾಗಿದೆ. ವಿಧಾನಸೌಧದಲ್ಲಿ ಸುನೀಲ್ ಕಚೇರಿ ಮೂರನೇ ಮಹಡಿಯಲ್ಲಿದ್ದು, ಸಿಎಂ ಕಚೇರಿಯ ಹತ್ತಿರದಲ್ಲಿಯೇ ಇರುವುದು ಕನುಗೋಳ್ ಲೆವೆಲ್ ಯಾವ ಮಟ್ಟದಲ್ಲಿದೆ ಎನ್ನುವುದನ್ನು ತೋರಿಸುತ್ತದೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಸರಳ ಬಹುಮತವನ್ನು ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮಧ್ಯಪ್ರದೇಶದಲ್ಲಿ ಫೈಟ್ ಟಫ್ ಆಗಿದ್ದು, ಭಾರತೀಯ ಜನತಾ ಪಾರ್ಟಿ ಸರಳ ಬಹುಮತದೊಂದಿಗೆ ಅಧಿಕಾರ ಹಿಡಿಯಬಹುದು ಎನ್ನಲಾಗಿದೆ. ಒಂದು ವೇಳೆ ಅಲ್ಲಿ ಕೂಡ ಕಾಂಗ್ರೆಸ್ ಗೆದ್ದರೆ ಅದು ಕಾಂಗ್ರೆಸ್ ಮಟ್ಟಿಗೆ ದೊಡ್ಡ ಸಾಧನೆಯಾಗಲಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನುಗೋಳ್ ರಾಷ್ಟ್ರರಾಜಕಾರಣದಲ್ಲಿ ಪ್ರಭಾವಿ ಎನಿಸಲಿದ್ದಾರೆ. ಇನ್ನು ಛತ್ತೀಸ್ ಘಡದಲ್ಲಿ ಕಾಂಗ್ರೆಸ್ ಸುಲಭವಾಗಿ ಅಧಿಕಾರ ಹಿಡಿಯಲಿದ್ದು, ರಾಜಸ್ಥಾನದಲ್ಲಿ ಬಿಜೆಪಿಗೆ ಅಧಿಕಾರ ಹತ್ತಿರದಲ್ಲಿದೆ ಎಂದು ಹೇಳಲಾಗುತ್ತಿದೆ

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search