• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!

Tulunadu News Posted On December 2, 2023
0


0
Shares
  • Share On Facebook
  • Tweet It

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಸ್ಥಾನಗಳೊಂದಿಗೆ ಅಧಿಕಾರದ ಗದ್ದುಗೆ ಹಿಡಿದ ನಂತರ ಚುನಾವಣಾ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಅವರ ಒಂದು ಕಾಲದ ಆಪ್ತ ಸುನೀಲ್ ಕನಗೋಳು ಮಧ್ಯಪ್ರದೇಶ ಹಾಗೂ ತೆಲಂಗಾಣದಲ್ಲಿ ಕಾಂಗ್ರೆಸ್ಸಿನ ಚುನಾವಣಾ ರಣತಂತ್ರಕ್ಕೆ ಇಳಿದಿದ್ದರು. ಡಿಸೆಂಬರ್ 3 ರಂದು ಈ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯಾಗಲಿದ್ದು, ಒಂದು ವೇಳೆ ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದರೆ ಸುನೀಲ್ ಕನಗೋಳು ವರ್ಚಸ್ಸು ಇನ್ನಷ್ಟು ಹೆಚ್ಚಾಗಲಿದೆ. ಕಾಂಗ್ರೆಸ್ಸನ್ನು ಕರ್ನಾಟಕದಲ್ಲಿ ಅಧಿಕಾರಕ್ಕೆ ತರಲು ಅದರಲ್ಲಿ ರಣತಂತ್ರ ರೂಪಿಸಿ ಯಶಸ್ವಿಯಾದ ಕಾರಣಕ್ಕೆ ಉಡುಗೊರೆಯಾಗಿ ಅವರಿಗೆ ಮುಖ್ಯಮಂತ್ರಿಗಳ ವಿಶೇಷ ಸಲಹೆಗಾರ ಹುದ್ದೆಯನ್ನು ಸೃಷ್ಟಿಸಿ ನೀಡಲಾಗಿದೆ. ಅವರಿಗಾಗಿ ವಿಶೇಷ ಕೊಠಡಿ ಹಾಗೂ ಎಲ್ಲಾ ಸೌಲಭ್ಯಗಳನ್ನು ಪೂರೈಸಲಾಗಿದ್ದು, ಸಂಪುಟ ದರ್ಜೆ ಸ್ಥಾನಮಾನ ಕೂಡ ನೀಡಲಾಗಿದೆ. ವಿಧಾನಸೌಧದಲ್ಲಿ ಸುನೀಲ್ ಕಚೇರಿ ಮೂರನೇ ಮಹಡಿಯಲ್ಲಿದ್ದು, ಸಿಎಂ ಕಚೇರಿಯ ಹತ್ತಿರದಲ್ಲಿಯೇ ಇರುವುದು ಕನುಗೋಳ್ ಲೆವೆಲ್ ಯಾವ ಮಟ್ಟದಲ್ಲಿದೆ ಎನ್ನುವುದನ್ನು ತೋರಿಸುತ್ತದೆ.

ತೆಲಂಗಾಣದಲ್ಲಿ ಕಾಂಗ್ರೆಸ್ ಸರಳ ಬಹುಮತವನ್ನು ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮಧ್ಯಪ್ರದೇಶದಲ್ಲಿ ಫೈಟ್ ಟಫ್ ಆಗಿದ್ದು, ಭಾರತೀಯ ಜನತಾ ಪಾರ್ಟಿ ಸರಳ ಬಹುಮತದೊಂದಿಗೆ ಅಧಿಕಾರ ಹಿಡಿಯಬಹುದು ಎನ್ನಲಾಗಿದೆ. ಒಂದು ವೇಳೆ ಅಲ್ಲಿ ಕೂಡ ಕಾಂಗ್ರೆಸ್ ಗೆದ್ದರೆ ಅದು ಕಾಂಗ್ರೆಸ್ ಮಟ್ಟಿಗೆ ದೊಡ್ಡ ಸಾಧನೆಯಾಗಲಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನುಗೋಳ್ ರಾಷ್ಟ್ರರಾಜಕಾರಣದಲ್ಲಿ ಪ್ರಭಾವಿ ಎನಿಸಲಿದ್ದಾರೆ. ಇನ್ನು ಛತ್ತೀಸ್ ಘಡದಲ್ಲಿ ಕಾಂಗ್ರೆಸ್ ಸುಲಭವಾಗಿ ಅಧಿಕಾರ ಹಿಡಿಯಲಿದ್ದು, ರಾಜಸ್ಥಾನದಲ್ಲಿ ಬಿಜೆಪಿಗೆ ಅಧಿಕಾರ ಹತ್ತಿರದಲ್ಲಿದೆ ಎಂದು ಹೇಳಲಾಗುತ್ತಿದೆ

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search