• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!

Tulunadu News Posted On December 2, 2023
0


0
Shares
  • Share On Facebook
  • Tweet It

ಜನವರಿ 22, 2024 ಸನಾತನಿಗಳ ಪಾಲಿಗೆ ಬಹಳ ಪುಣ್ಯದ ದಿನ. ಅಂದು ಶತಕೋಟಿ ಭಾರತೀಯರ ನೂರಾರು ವರ್ಷಗಳ ಕನಸು ಈಡೇರುವ ದಿನ. ಜನವರಿ 22 ರಂದು ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಭಗವಂತ ಶ್ರೀರಾಮಚಂದ್ರ ದೇವರ ಭವ್ಯಮೂರ್ತಿಯ ಪ್ರಾಣಪ್ರತಿಷ್ಟೆಯ ಜೊತೆಗೆ ಶ್ರೀರಾಮ ಮಂದಿರ ಲೋಕಾರ್ಪಣೆಯ ಕಾರ್ಯ ಕೂಡ ನಡೆಯಲಿದೆ. ಇದಕ್ಕಾಗಿ ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡಲಾಗುತ್ತಿದ್ದು, ಸಾಮಾನ್ಯ ಜನರಿಗೂ ಆಹ್ವಾನ ಪತ್ರಿಕೆಯನ್ನು ನೀಡಲು ಟ್ರಸ್ಟ್ ತೀರ್ಮಾನಿಸಿದೆ.

ಆಹ್ವಾನ ಪತ್ರಿಕೆಯಲ್ಲಿ ಇರುವ ವಿಶೇಷ ಏನೆಂದರೆ ” ಸುದೀರ್ಘ ಹೋರಾಟದ ನಂತರ ಶ್ರೀರಾಮನ ಜನ್ಮಸ್ಥಳದಲ್ಲಿ ಮಂದಿರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಜನವರಿ 22, 2024 ರಂದು ರಾಮಲಲ್ಲಾನ ವಿಗ್ರಹವನ್ನು ಹೊಸ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುವುದು. ಈ ಮಹತ್ವದ ಘಟ್ಟಕ್ಕೆ ಸಾಕ್ಷಿಯಾಗಲು ಮತ್ತು ಮಹಾನ್ ಐತಿಹಾಸಿಕ ದಿನದ ಘನತೆಯನ್ನು ಹೆಚ್ಚಿಸಲು ನೀವು ಈ ಶುಭ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಉಪಸ್ಥಿತರಿರಬೇಕು ಎಂಬುದು ನಮ್ಮ ಬಲವಾದ ನಂಬಿಕೆಯಾಗಿದೆ. ಇದಕ್ಕಾಗಿ ಜನವರಿ 21 ರ ಮೊದಲು ಅಯೋಧ್ಯೆಗೆ ಭೇಟಿ ನೀಡಲು ನಿಮ್ಮನ್ನು ವಿನಂತಿಸುತ್ತಿದ್ದೇವೆ. ನೀವು ಅಯೋಧ್ಯೆಗೆ ಎಷ್ಟು ಬೇಗ ಬರುತ್ತೀರೋ ಅಷ್ಟು ಅನುಕೂಲವಾಗುತ್ತದೆ. ನೀವು ತಡವಾಗಿ ಬಂದರೆ ನೀವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಹೀಗಾಗಿ ಸಾಧ್ಯವಾದಷ್ಟು ಮುನ್ನ ಅಯೋಧ್ಯೆಗೆ ಬರಬೇಕು” ಎಂದು ಮನವಿ ಮಾಡಲಾಗಿದೆ.

ಈ ಅದ್ದೂರಿ ಕಾರ್ಯಕ್ರಮಕ್ಕೆ ಆರು ಸಾವಿರ ಜನರಿಗೆ ಆಹ್ವಾನಪತ್ರ ಕಳುಹಿಸಲಾಗುವುದು. ಅದರಲ್ಲಿ ಪುರೋಹಿತರು, ಮಹಾನ್ ದಾನಿಗಳು, ಕೆಲವು ರಾಜಕಾರಣಿಗಳು ಕೂಡ ಇದ್ದಾರೆ ಎಂದು ತಿಳಿಸಲಾಗಿದೆ

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!

  • Privacy Policy
  • Contact
© Tulunadu Infomedia.

Press enter/return to begin your search