• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!

Tulunadu News Posted On December 2, 2023
0


0
Shares
  • Share On Facebook
  • Tweet It

ಜನವರಿ 22, 2024 ಸನಾತನಿಗಳ ಪಾಲಿಗೆ ಬಹಳ ಪುಣ್ಯದ ದಿನ. ಅಂದು ಶತಕೋಟಿ ಭಾರತೀಯರ ನೂರಾರು ವರ್ಷಗಳ ಕನಸು ಈಡೇರುವ ದಿನ. ಜನವರಿ 22 ರಂದು ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಭಗವಂತ ಶ್ರೀರಾಮಚಂದ್ರ ದೇವರ ಭವ್ಯಮೂರ್ತಿಯ ಪ್ರಾಣಪ್ರತಿಷ್ಟೆಯ ಜೊತೆಗೆ ಶ್ರೀರಾಮ ಮಂದಿರ ಲೋಕಾರ್ಪಣೆಯ ಕಾರ್ಯ ಕೂಡ ನಡೆಯಲಿದೆ. ಇದಕ್ಕಾಗಿ ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡಲಾಗುತ್ತಿದ್ದು, ಸಾಮಾನ್ಯ ಜನರಿಗೂ ಆಹ್ವಾನ ಪತ್ರಿಕೆಯನ್ನು ನೀಡಲು ಟ್ರಸ್ಟ್ ತೀರ್ಮಾನಿಸಿದೆ.

ಆಹ್ವಾನ ಪತ್ರಿಕೆಯಲ್ಲಿ ಇರುವ ವಿಶೇಷ ಏನೆಂದರೆ ” ಸುದೀರ್ಘ ಹೋರಾಟದ ನಂತರ ಶ್ರೀರಾಮನ ಜನ್ಮಸ್ಥಳದಲ್ಲಿ ಮಂದಿರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಜನವರಿ 22, 2024 ರಂದು ರಾಮಲಲ್ಲಾನ ವಿಗ್ರಹವನ್ನು ಹೊಸ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುವುದು. ಈ ಮಹತ್ವದ ಘಟ್ಟಕ್ಕೆ ಸಾಕ್ಷಿಯಾಗಲು ಮತ್ತು ಮಹಾನ್ ಐತಿಹಾಸಿಕ ದಿನದ ಘನತೆಯನ್ನು ಹೆಚ್ಚಿಸಲು ನೀವು ಈ ಶುಭ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಉಪಸ್ಥಿತರಿರಬೇಕು ಎಂಬುದು ನಮ್ಮ ಬಲವಾದ ನಂಬಿಕೆಯಾಗಿದೆ. ಇದಕ್ಕಾಗಿ ಜನವರಿ 21 ರ ಮೊದಲು ಅಯೋಧ್ಯೆಗೆ ಭೇಟಿ ನೀಡಲು ನಿಮ್ಮನ್ನು ವಿನಂತಿಸುತ್ತಿದ್ದೇವೆ. ನೀವು ಅಯೋಧ್ಯೆಗೆ ಎಷ್ಟು ಬೇಗ ಬರುತ್ತೀರೋ ಅಷ್ಟು ಅನುಕೂಲವಾಗುತ್ತದೆ. ನೀವು ತಡವಾಗಿ ಬಂದರೆ ನೀವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಹೀಗಾಗಿ ಸಾಧ್ಯವಾದಷ್ಟು ಮುನ್ನ ಅಯೋಧ್ಯೆಗೆ ಬರಬೇಕು” ಎಂದು ಮನವಿ ಮಾಡಲಾಗಿದೆ.

ಈ ಅದ್ದೂರಿ ಕಾರ್ಯಕ್ರಮಕ್ಕೆ ಆರು ಸಾವಿರ ಜನರಿಗೆ ಆಹ್ವಾನಪತ್ರ ಕಳುಹಿಸಲಾಗುವುದು. ಅದರಲ್ಲಿ ಪುರೋಹಿತರು, ಮಹಾನ್ ದಾನಿಗಳು, ಕೆಲವು ರಾಜಕಾರಣಿಗಳು ಕೂಡ ಇದ್ದಾರೆ ಎಂದು ತಿಳಿಸಲಾಗಿದೆ

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search