• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!

Tulunadu News Posted On December 5, 2023


  • Share On Facebook
  • Tweet It

ಎನ್ ಡಿಎ ಮೈತ್ರಿಕೂಟದ ವಿರುದ್ಧ ಪ್ರಬಲ ಶಕ್ತಿ ಪ್ರದರ್ಶಿಸಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೇಗಾದರೂ ಮಾಡಿ ಅಧಿಕಾರದ ಗದ್ದುಗೆ ಹಿಡಿಯಲೇಬೇಕೆಂಬ ಲೋಕಸಭೆಯ ವಿಪಕ್ಷ ಮುಖಂಡರ ಪ್ರಯತ್ನ ಪಂಚರಾಜ್ಯ ಚುನಾವಣಾ ಫಲಿತಾಂಶದೊಂದಿಗೆ ಹಳ್ಳ ಹಿಡಿಯುವ ಸಾಧ್ಯತೆ ದಟ್ಟವಾಗಿದೆ. ಡಿಸೆಂಬರ್ 6 ರಂದು ದೆಹಲಿಯಲ್ಲಿ ಇ.0.ಡಿ.ಯಾ ಮೈತ್ರಿಕೂಟದ ನಾಲ್ಕನೇ ಸಭೆ ನಡೆಯಲಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೈತ್ರಿಕೂಟದ ಪ್ರಮುಖರಿಗೆ ಈ ಬಗ್ಗೆ ಈಗಾಗಲೇ ಆಹ್ವಾನ ನೀಡಿದ್ದು, ಪ್ರಮುಖ ಪಕ್ಷಗಳ ಎಷ್ಟು ಮಂದಿ ಮುಖಂಡರು ಆಗಮಿಸುತ್ತಾರೆ ಎನ್ನುವ ಅನುಮಾನ ದಟ್ಟವಾಗಿದೆ.

ಇ.0.ಡಿ.ಯಾ ಮೈತ್ರಿಕೂಟದ ಕೊಂಡಿಯಾಗಿರುವ ಜೆಡಿಯು ಪರಮೋಚ್ಚ ನಾಯಕ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಭೆಯಲ್ಲಿ ಭಾಗವಹಿಸುವುದು ಬಹುತೇಕ ಇಲ್ಲ ಎನ್ನುವ ಮಾಹಿತಿ ಬಂದಿದೆ. ಇ.0.ಡಿ.ಯಾ ಮೈತ್ರಿಕೂಟಕ್ಕೆ ಬೆಸುಗೆ ಹಾಕಿ ನಿಲ್ಲಿಸಿರುವುದೇ ನಿತೀಶ್ ಕುಮಾರ್. ಅವರು ಇ.0.ಡಿ.ಯಾ ಮೈತ್ರಿಕೂಟದ ಬಗ್ಗೆ ಒಂದಿಷ್ಟು ನಿರಾಸಕ್ತಿ ಹೊಂದಿರುವುದು ಎದ್ದುಕಾಣುತ್ತಿದೆ. ಅದರೊಂದಿಗೆ ಸೀಟು ಹಂಚಿಕೆ ವಿಷಯದಲ್ಲಿ ಕಾಂಗ್ರೆಸ್ ರಾಜಸ್ಥಾನ, ಮಧ್ಯಪ್ರದೇಶ, ಛತ್ತಿಸ್ ಘಡದಲ್ಲಿ ಮಿತ್ರಪಕ್ಷಗಳೊಂದಿಗೆ ಅಹಂಕಾರದಿಂದ ವರ್ತಿಸಿ ಚುನಾವಣೆ ಎದುರಿಸಿದ್ದು ಸಹಜವಾಗಿ ನಿತೀಶ್ ಅವರಿಗೂ ಕಾಂಗ್ರೆಸ್ ನಡವಳಿಕೆ ನುಂಗಲಾಗುತ್ತಿಲ್ಲ. ಒಂದು ವೇಳೆ ಮಿತ್ರಪಕ್ಷಗಳನ್ನು ಒಟ್ಟಿಗೆ ಕರೆದುಕೊಂಡು ಹೋಗದೇಯೂ ಕಾಂಗ್ರೆಸ್ ಎಂಪಿ, ರಾಜಸ್ಥಾನ, ಛತ್ತೀಸ್ ಘಡ್ ಗೆದ್ದಿದ್ದರೆ ಆಗ ಕಾಂಗ್ರೆಸ್ಸಿಗೆ ಗೌರವ ಜಾಸ್ತಿಯಾಗುತ್ತಿತ್ತು. ಆದರೆ ಈಗ ಸೋತಿರುವುದರಿಂದ ಸಹಜವಾಗಿ ಮಿತ್ರಪಕ್ಷಗಳು ಕಾಂಗ್ರೆಸ್ ವಿರುದ್ಧ ಧ್ವನಿ ಏರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಉತ್ತರ ಭಾರತದಲ್ಲಿ ಹಿಮಾಚಲ ಪ್ರದೇಶ ಬಿಟ್ಟರೆ ಕಾಂಗ್ರೆಸ್ ಬೇರೆ ಯಾವುದೇ ರಾಜ್ಯದಲ್ಲಿ ಸದ್ಯ ಅಧಿಕಾರದಲ್ಲಿ ಇಲ್ಲ. ತೆಲಂಗಾಣದಲ್ಲಿ ಸರಳ ಬಹುಮತ ಬಂದಿದೆಯಾದರೂ ಅದು ಐದು ವರ್ಷ ಉಳಿಯುವುದು ಕೂಡ ಅನುಮಾನ. ಇನ್ನು ಕಾಂಗ್ರೆಸ್ ಬಲಿಷ್ಟವಾಗಿರುವುದು ಕರ್ನಾಟಕ ಮಾತ್ರ. ಹೀಗಿರುವಾಗ ಕಾಂಗ್ರೆಸ್ ಮೈತ್ರಿಕೂಟದ ಬಲಾಢ್ಯ ಪಕ್ಷ ಎನ್ನುವುದನ್ನು ಯಾರೂ ಒಪ್ಪಲು ಹೋಗುತ್ತಿಲ್ಲ. ಯಾವಾಗ ನಿತೀಶ್ ಕುಮಾರ್ ಸಭೆಗೆ ಬರಲ್ಲ ಎಂದು ಗೊತ್ತಾಯಿತೋ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಸಿಂಗ್ ಯಾದವ್ ಕೂಡ ತಾವು ಬರುವುದಿಲ್ಲ ಎಂಬ ಸಂದೇಶ ಕಳುಹಿಸಿದಂತೆ ಮಾಹಿತಿ ಬಂದಿದೆ. ಒಟ್ಟಿನಲ್ಲಿ ಚುನಾವಣೆಗೆ ನಾಲ್ಕೈದು ತಿಂಗಳು ಇರುವಾಗ ಇ.0.ಡಿ.ಯಾ ಮೈತ್ರಿಕೂಟದ ನಡುವಿನ ಕಂದಕ ಬೆಳೆಯುತ್ತಿದೆ. ಸೋಲು ಯಾವಾಗಲೂ ಒಬ್ಬಂಟಿ, ಗೆಲುವಿಗೆ ಮಾತ್ರ ಹಲವರು ತಂದೆಯಂದಿರು ಎನ್ನುವುದು ಇದಕ್ಕೆನಾ?

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search