• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೂಡಬಿದ್ರೆಯ ಯುವಕ ರಿಲಯನ್ಸ್ ಮಿಸ್ಟರ್ ಇಂಡಿಯಾ 2017!

TNN Correspondent Posted On August 29, 2017
0


0
Shares
  • Share On Facebook
  • Tweet It

ಕರಾವಳಿ ಕರ್ನಾಟಕದಿಂದ ಹಲವಾರು ಜನ ಪ್ರತಿಭೆಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ವಿಭಿನ್ನ ಕೇತ್ರದಲ್ಲಿ ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಅದರಲ್ಲಿಯೂ ಅನೇಕರು ಸ್ಯಾಂಡಲ್ ವುಡ್ ಮತ್ತು ಬಾಲಿವುಡ್ ನಲ್ಲಿ ಮಿಂಚಿ ತಮ್ಮ ಅಭಿನಯದಿಂದ ಜನಮನ ಗೆದ್ದಿದ್ದಾರೆ. ಈ ಮನೋರಂಜನ ಕ್ಷೇತ್ರದಲ್ಲಿ ಹೆಸರು ಮಾಡಬೇಕಾದರೆ ಅದಕ್ಕೆ ಆಕರ್ಷಕ ಅಂಗಸೌಷ್ಟವ, ನಿಲುವು, ಮಾತಿನ ಶೈಲಿ ಮತ್ತು ತೀಕ್ಣ ನೋಟ ಕೂಡ ಮುಖ್ಯ. ಅನೇಕರು ಸಿನೆಮಾ ಕ್ಷೇತ್ರದಲ್ಲಿ ಕಾಲಿಡುವ ಮುನ್ನ ಮಾಡೆಲ್ ಆಗಿ ಕಾರ್ಯ ನಿರ್ವಹಿಸುತ್ತಾರೆ. ಮಾಡೆಲ್ ಆಗಿ ಮಿಂಚುವುದು ಕೂಡ ಸುಲಭವಲ್ಲ. ಮಾಡೆಲ್ ಕ್ಷೇತ್ರದಲ್ಲಿ ಇರುವವರಿಗೆ ತಾವು ಇದೇ ರಂಗದಲ್ಲಿ ಅತ್ಯುನ್ನತ ಸ್ಥಾನಕ್ಕೆ ತಲುಪಬೇಕಾದರೆ ಯಾವುದಾದರೂ ಸೌಂದರ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಬೇಕೆಂಬ ಆಸೆ ಇದ್ದೇ ಇರುತ್ತದೆ. ಆದರೆ ರಾಷ್ಟ್ರಮಟ್ಟದಲ್ಲಿ ಮಿಸ್ಟರ್ ಇಂಡಿಯಾ ಸ್ಪರ್ಧೆಯಲ್ಲಿ ಸಾವಿರಾರು ಜನರ ನಡುವೆ ಮೊದಲ ಸ್ಥಾನ ಪಡೆಯುವುದು ಕೂಡ ಸಲೀಸಲ್ಲ. ಅದನ್ನು ತುಳುನಾಡಿನ ಯುವಕನೊಬ್ಬ ಮಾಡಿ ತೋರಿಸಿದ್ದಾರೆ. ಆ ಯುವಕನ ಹೆಸರು ರಿತೇಶ್ ಶೆಟ್ಟಿ.
ಇಲೆಕ್ಟ್ರಾನಿಕ್ಸ್ ಮತ್ತು ಟೆಲಿಕಾಂನಲ್ಲಿ ಇಂಜಿನಿಯರಿಂಗ್ ಮಾಡಿರುವ ರಿತೇಶ್ ಶೆಟ್ಟಿ ಮೂಲತ: ಮೂಡಬಿದ್ರೆಯವರು. ಬಾಲಾಜಿ ಸ್ಕೂಲ್ ಆಫ್ ಆಕ್ಟಿಂಗ್ ನಲ್ಲಿ ಕ್ರಿಯೇಟಿವ್ ಫೀಲ್ಡ್ ನಲ್ಲಿ ತರಬೇತಿ ಪಡೆದಿರುವ ರಿತೇಶ್ ಶೆಟ್ಟಿ 2016 ರಲ್ಲಿ ಮುಂಬೈಯಲ್ಲಿ ನಡೆದ ಮಿಸ್ಟರ್ ಬಂಟ್ ಸೌಂದರ್ಯ ಸ್ಪರ್ಧೆಯಲ್ಲಿ ಮೊದಲ 5 ಸ್ಥಾನಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದರು. ಅದರ ನಂತರ 2017 ರಲ್ಲಿ ಮಿಸ್ಟರ್ ಮಂಗಳೂರು ಸ್ಪರ್ಧೆಯಲ್ಲಿ ರನ್ನರ್ ಅಪ್ ಸ್ಥಾನ ಪಡೆದುಕೊಂಡ ರಿತೇಶ್ ಶೆಟ್ಟಿ ರಿಲಯನ್ಸ್ ಕಂಪೆನಿಯವರು ಅಗಸ್ಟ್ ನಲ್ಲಿ ಹೈದ್ರಾಬಾದ್ ನಲ್ಲಿ ನಡೆಸಿದ ಮಿಸ್ಟರ್ ಇಂಡಿಯಾ 2017 ಕಿರೀಟ ಗೆಲ್ಲುವ ಮೂಲಕ ತನ್ನ ಸಾಧನೆಯನ್ನು ಇನ್ನಷ್ಟು ಎತ್ತರಕ್ಕೆ ಏರಿಸಿಕೊಂಡಿದ್ದಾರೆ.
ಅದರೊಂದಿಗೆ ಅವರು ಮಿಸ್ಟರ್ ಯೂನಿವರಸ್ ಟೂರಿಸಂ ಇಂಡಿಯಾ 2017 ಕೂಡ ಗೆಲ್ಲುವ ಮೂಲಕ ತುಳುನಾಡಿನ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಿದ್ದಾರೆ.
ಮುಂಬೈಯಲ್ಲಿ ಖ್ಯಾತ ಸಾಹಸ ನಿರ್ದೇಶಕ ಚೀತಾ ಯಜ್ಞೇಶ್ ಶೆಟ್ಟಿಯವರ ಬಳಿ ಮಾರ್ಸಲ್ ಆಟ್ಸ್ ಕಲಿತಿರುವ ರಿತೇಶ್ ಶೆಟ್ಟಿ ಪ್ರಸ್ತುತ ತುಳು ಸಿನೆಮಾವೊಂದಕ್ಕೆ ನಾಯಕನಾಗಿ ಆಯ್ಕೆಯಾಗಿದ್ದಾರೆ. ಅಬುಧಾಬಿಯಲ್ಲಿ ಹೋಟೇಲ್ ಉದ್ಯಮ ನಡೆಸುತ್ತಿರುವ ರಘುನಾಥ ಶೆಟ್ಟಿ ಹಾಗೂ ಫುಡ್ ಕಾರ್ಪೋರೇಶನ್ ಆಫ್ ಇಂಡಿಯಾದಲ್ಲಿ ಸೇವೆ ಸಲ್ಲಿಸುತ್ತಿರುವ ವಸಂತಿ ಶೆಟ್ಟಿಯವರ ಸುಪುತ್ರ ರಿತೇಶ್ ಅವರು ಡಾ|ನಿತೀನ್ ಅವರಿಂದ ವ್ಯಕ್ತಿತ್ವ ಅಭಿವೃದ್ಧಿಯ ಬಗ್ಗೆ ತರಬೇತಿ ಪಡೆದುಕೊಂಡಿರುತ್ತಾರೆ.
ಈಗಾಗಲೇ ತೆಲುಗು, ಹಿಂದಿಯಿಂದ ಸಿನೆಮಾ ಅವಕಾಶಗಳನ್ನು ಪಡೆದುಕೊಂಡಿರುವ ರಿತೇಶ್ ಶೆಟ್ಟಿಯವರು ಮುಂದಿನ ದಿನಗಳಲ್ಲಿ ಕರಾವಳಿಯ ಹೆಸರನ್ನು ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಏರಿಸುವುದರಲ್ಲಿ ಸಂಶಯವಿಲ್ಲ

0
Shares
  • Share On Facebook
  • Tweet It


Mr.India Tuluvas


Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search