• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಮಿಗೆ ಅರ್ಜುನ ಪ್ರಶಸ್ತಿ

Tulunadu News Posted On December 15, 2023
0


0
Shares
  • Share On Facebook
  • Tweet It

ನ್ಯೂಜಿಲ್ಯಾಂಡ್ ವಿರುದ್ಧ ಈ ಬಾರಿಯ ವಿಶ್ವಕಪ್ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ 54 ಕ್ಕೆ 5 ವಿಕೆಟ್ ಹಾಗೂ ಶ್ರೀಲಂಕಾ ವಿರುದ್ಧ 18 ಕ್ಕೆ 5 ವಿಕೆಟ್ ಹಾಗೂ ಸೆಮಿಫೈನಲ್ ನಲ್ಲಿ 7/57 ವಿಕೆಟ್ ಕಿತ್ತು ದಾಖಲೆ ನಿರ್ಮಿಸಿ ಪಂದ್ಯಪುರುಷ ಪ್ರಶಸ್ತಿಗಳಿಗೆ ಪಾತ್ರರಾಗಿದ್ದ ಮೊಹಮ್ಮದ್ ಶಾಮಿ ಈ ವಿಶ್ವಕಪ್ ನಲ್ಲಿ ಮಾಡಿದ ದಾಖಲೆಗಳು ಒಂದೆರಡಲ್ಲ. ಭಾರತೀಯ ಕ್ರಿಕೆಟ್ ತಂಡದಲ್ಲಿ ಒಂದೇ ವಿಶ್ವಕಪ್ ನಲ್ಲಿ ಅತೀ ಕಡಿಮೆ (17) ಇನ್ಸಿಂಗ್ಸ್ ನಲ್ಲಿ 50 ವಿಕೆಟ್ ಹಾಗೂ ವಿಶ್ವಕಪ್ ನಲ್ಲಿ ಇಲ್ಲಿಯ ತನಕ ಒಂದೇ ಇನ್ಸಿಂಗ್ಸ್ ನಲ್ಲಿ ಏಳು ವಿಕೆಟ್ ಕಿತ್ತ ಬಾಲರ್ ಆಗಿ ಮೊಹಮ್ಮದ್ ಶಮಿ ಹೊರಹೊಮ್ಮಿದ್ದಾರೆ. ಇನ್ನು ವಿಶ್ವಕಪ್ ಪಂದ್ಯಗಳಲ್ಲಿ 8 ಬಾರಿ ನಾಲ್ಕು ವಿಕೆಟ್ ಗೊಂಚಲನ್ನು ಮತ್ತು ನಾಲ್ಕು ಬಾರಿ 5 ವಿಕೆಟ್ ಗೊಂಚಲನ್ನು ಕಿತ್ತು ಹೊಸ ದಾಖಲೆಯನ್ನು ಬರೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ಹುಟ್ಟಿದ ಶಮಿ ಪಶ್ಚಿಮ ಬಂಗಾಲ ಪರ ರಣಜಿ ಪಂದ್ಯಗಳನ್ನು ಆಡಿ ತಮ್ಮ ಕ್ರಿಕೆಟ್ ಜೀವನವನ್ನು ಆರಂಭಿಸಿದರು. ಅದಕ್ಕಿಂತ ಮೊದಲು ಇವರು ಬಂಗಾಲದ ಮೋಹನ್ ಬಗಾನ್ ಕ್ರಿಕೆಟ್ ಕ್ಲಬ್ ಪರ ಆಡುತ್ತಿದ್ದರು. ಈಡನ್ ಗಾರ್ಡನ್ ನಲ್ಲಿ ಒಮ್ಮೆ ಸೌರವ್ ಗಂಗೂಲಿಯವರಿಗೆ ನೆಟ್ ನಲ್ಲಿ ಬೌಲಿಂಗ್ ಮಾಡಿ ಅವರ ಆಶ್ಚರ್ಯಚಕಿತರನ್ನಾಗಿಸಿದ ಶಮಿ, ಗಂಗೂಲಿಯವರ ಶಿಫಾರಸ್ಸಿನ ಮೇರೆಗೆ ಬಂಗಾಲ ರಣಜಿ ತಂಡಕ್ಕೆ ಆಯ್ಕೆಗೊಂಡಿದ್ದರು. ತಮ್ಮ ಚೊಚ್ಚಲ ಟೆಸ್ಟ್ ಮ್ಯಾಚ್ ನಲ್ಲಿ ವೆಸ್ಟ್ ವಿಂಡಿಸ್ ವಿರುದ್ಧ ಎರಡು ಇನ್ಸಿಂಗ್ಸ್ ನಲ್ಲಿ 118 ರನ್ ನೀಡಿ ಒಂಭತ್ತು ವಿಕೆಟ್ ಪಡೆದ ಶಮಿ ಭಾರತದ ಯಾವುದೇ ಆಟಗಾರ ತಮ್ಮ ಚೊಚ್ಚಲ ಟೆಸ್ಟ್ ಮ್ಯಾಚ್ ನಲ್ಲಿ ಮಾಡಿರದ ದಾಖಲೆಯನ್ನು ನಿರ್ಮಿಸಿದ್ದಾರೆ. ಹೀಗೆ ಹಲವು ದಾಖಲೆಗಳು ಶಮಿ ಹೆಸರಿನಲ್ಲಿದೆ. ಇತ್ತೀಚೆಗೆ ವಿಶ್ವಕಪ್ ಫೈನಲ್ ಪಂದ್ಯದ ಬಳಿಕ ಆಟಗಾರರ ಡ್ರೆಸ್ಸಿಂಗ್ ರೂಮಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿಯವರು ಶಮಿಯವರನ್ನು ಆಲಂಗಿಸಿ ಬೆನ್ನಿಗೆ ಪ್ರೀತಿಯಿಂದ ತಟ್ಟಿರುವುದನ್ನು ಜಗತ್ತೇ ನೋಡಿದೆ. ಇಂತಹ ಶ್ರೇಷ್ಟ ಆಟಗಾರನಿಗೆ ಅರ್ಜುನ ಪ್ರಶಸ್ತಿ ನೀಡಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಕ್ರೀಡಾಕ್ಷೇತ್ರದ ಅತೀ ದೊಡ್ಡ ಪ್ರಶಸ್ತಿಯಾಗಿರುವ ಅರ್ಜುನ ಪ್ರಶಸ್ತಿಯಿಂದ ಅವರನ್ನು ಪುರಸ್ಕೃರಿಸಿದರೆ ಅದು ಆ ಪ್ರಶಸ್ತಿಯ ಮೌಲ್ಯವನ್ನು ಕೂಡ ಹೆಚ್ಚಿಸಿದಂತೆ ಎನ್ನುವುದು ಈ ಸಾಧಕನ ಅಭಿಮಾನಿಗಳ ಆಶಯ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search