• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಮಿಗೆ ಅರ್ಜುನ ಪ್ರಶಸ್ತಿ

Tulunadu News Posted On December 15, 2023
0


0
Shares
  • Share On Facebook
  • Tweet It

ನ್ಯೂಜಿಲ್ಯಾಂಡ್ ವಿರುದ್ಧ ಈ ಬಾರಿಯ ವಿಶ್ವಕಪ್ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ 54 ಕ್ಕೆ 5 ವಿಕೆಟ್ ಹಾಗೂ ಶ್ರೀಲಂಕಾ ವಿರುದ್ಧ 18 ಕ್ಕೆ 5 ವಿಕೆಟ್ ಹಾಗೂ ಸೆಮಿಫೈನಲ್ ನಲ್ಲಿ 7/57 ವಿಕೆಟ್ ಕಿತ್ತು ದಾಖಲೆ ನಿರ್ಮಿಸಿ ಪಂದ್ಯಪುರುಷ ಪ್ರಶಸ್ತಿಗಳಿಗೆ ಪಾತ್ರರಾಗಿದ್ದ ಮೊಹಮ್ಮದ್ ಶಾಮಿ ಈ ವಿಶ್ವಕಪ್ ನಲ್ಲಿ ಮಾಡಿದ ದಾಖಲೆಗಳು ಒಂದೆರಡಲ್ಲ. ಭಾರತೀಯ ಕ್ರಿಕೆಟ್ ತಂಡದಲ್ಲಿ ಒಂದೇ ವಿಶ್ವಕಪ್ ನಲ್ಲಿ ಅತೀ ಕಡಿಮೆ (17) ಇನ್ಸಿಂಗ್ಸ್ ನಲ್ಲಿ 50 ವಿಕೆಟ್ ಹಾಗೂ ವಿಶ್ವಕಪ್ ನಲ್ಲಿ ಇಲ್ಲಿಯ ತನಕ ಒಂದೇ ಇನ್ಸಿಂಗ್ಸ್ ನಲ್ಲಿ ಏಳು ವಿಕೆಟ್ ಕಿತ್ತ ಬಾಲರ್ ಆಗಿ ಮೊಹಮ್ಮದ್ ಶಮಿ ಹೊರಹೊಮ್ಮಿದ್ದಾರೆ. ಇನ್ನು ವಿಶ್ವಕಪ್ ಪಂದ್ಯಗಳಲ್ಲಿ 8 ಬಾರಿ ನಾಲ್ಕು ವಿಕೆಟ್ ಗೊಂಚಲನ್ನು ಮತ್ತು ನಾಲ್ಕು ಬಾರಿ 5 ವಿಕೆಟ್ ಗೊಂಚಲನ್ನು ಕಿತ್ತು ಹೊಸ ದಾಖಲೆಯನ್ನು ಬರೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ಹುಟ್ಟಿದ ಶಮಿ ಪಶ್ಚಿಮ ಬಂಗಾಲ ಪರ ರಣಜಿ ಪಂದ್ಯಗಳನ್ನು ಆಡಿ ತಮ್ಮ ಕ್ರಿಕೆಟ್ ಜೀವನವನ್ನು ಆರಂಭಿಸಿದರು. ಅದಕ್ಕಿಂತ ಮೊದಲು ಇವರು ಬಂಗಾಲದ ಮೋಹನ್ ಬಗಾನ್ ಕ್ರಿಕೆಟ್ ಕ್ಲಬ್ ಪರ ಆಡುತ್ತಿದ್ದರು. ಈಡನ್ ಗಾರ್ಡನ್ ನಲ್ಲಿ ಒಮ್ಮೆ ಸೌರವ್ ಗಂಗೂಲಿಯವರಿಗೆ ನೆಟ್ ನಲ್ಲಿ ಬೌಲಿಂಗ್ ಮಾಡಿ ಅವರ ಆಶ್ಚರ್ಯಚಕಿತರನ್ನಾಗಿಸಿದ ಶಮಿ, ಗಂಗೂಲಿಯವರ ಶಿಫಾರಸ್ಸಿನ ಮೇರೆಗೆ ಬಂಗಾಲ ರಣಜಿ ತಂಡಕ್ಕೆ ಆಯ್ಕೆಗೊಂಡಿದ್ದರು. ತಮ್ಮ ಚೊಚ್ಚಲ ಟೆಸ್ಟ್ ಮ್ಯಾಚ್ ನಲ್ಲಿ ವೆಸ್ಟ್ ವಿಂಡಿಸ್ ವಿರುದ್ಧ ಎರಡು ಇನ್ಸಿಂಗ್ಸ್ ನಲ್ಲಿ 118 ರನ್ ನೀಡಿ ಒಂಭತ್ತು ವಿಕೆಟ್ ಪಡೆದ ಶಮಿ ಭಾರತದ ಯಾವುದೇ ಆಟಗಾರ ತಮ್ಮ ಚೊಚ್ಚಲ ಟೆಸ್ಟ್ ಮ್ಯಾಚ್ ನಲ್ಲಿ ಮಾಡಿರದ ದಾಖಲೆಯನ್ನು ನಿರ್ಮಿಸಿದ್ದಾರೆ. ಹೀಗೆ ಹಲವು ದಾಖಲೆಗಳು ಶಮಿ ಹೆಸರಿನಲ್ಲಿದೆ. ಇತ್ತೀಚೆಗೆ ವಿಶ್ವಕಪ್ ಫೈನಲ್ ಪಂದ್ಯದ ಬಳಿಕ ಆಟಗಾರರ ಡ್ರೆಸ್ಸಿಂಗ್ ರೂಮಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿಯವರು ಶಮಿಯವರನ್ನು ಆಲಂಗಿಸಿ ಬೆನ್ನಿಗೆ ಪ್ರೀತಿಯಿಂದ ತಟ್ಟಿರುವುದನ್ನು ಜಗತ್ತೇ ನೋಡಿದೆ. ಇಂತಹ ಶ್ರೇಷ್ಟ ಆಟಗಾರನಿಗೆ ಅರ್ಜುನ ಪ್ರಶಸ್ತಿ ನೀಡಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಕ್ರೀಡಾಕ್ಷೇತ್ರದ ಅತೀ ದೊಡ್ಡ ಪ್ರಶಸ್ತಿಯಾಗಿರುವ ಅರ್ಜುನ ಪ್ರಶಸ್ತಿಯಿಂದ ಅವರನ್ನು ಪುರಸ್ಕೃರಿಸಿದರೆ ಅದು ಆ ಪ್ರಶಸ್ತಿಯ ಮೌಲ್ಯವನ್ನು ಕೂಡ ಹೆಚ್ಚಿಸಿದಂತೆ ಎನ್ನುವುದು ಈ ಸಾಧಕನ ಅಭಿಮಾನಿಗಳ ಆಶಯ.

0
Shares
  • Share On Facebook
  • Tweet It




Trending Now
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
Tulunadu News July 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
  • Popular Posts

    • 1
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 2
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 3
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 4
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • 5
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!

  • Privacy Policy
  • Contact
© Tulunadu Infomedia.

Press enter/return to begin your search